ಮಕ್ಕಳಲ್ಲಿ ಸಾತ್ವಿಕ ಗುಣ ಬೆಳೆಯಲು ನ್ಯಾಯ, ನೀತಿ, ಧರ್ಮದ ಕಥೆ ಪೂರಕ : ಸಾಹಿತಿ ಎಂ. ಜಯಮ್ಮ

KannadaprabhaNewsNetwork |  
Published : Apr 09, 2024, 12:53 AM IST
ನರಸಿಂಹರಾಜಪುರ ತಾಲೂಕಿನ ಹಿಳುವಳ್ಳಿಯ ಗಣಪತಿ ಪೆಂಡಾಲ್ ನಲ್ಲಿ ಧ.ಗ್ರಾ.ಯೋಜನೆಯ ಸಾಧನ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಆಶ್ರಯದಲ್ಲಿ ನಡೆದ ಅಜ್ಜಿ ಕೈ ತುತ್ತು ತಿನ್ನಿಸುವ ಕಾರ್ಯಕ್ರಮದಲ್ಲಿ ಸಾಹಿತಿ ಎಂ.ಜಯಮ್ಮ ಮಕ್ಕಳಿಗೆ ನೀತಿ ಕಥೆ ಹೇಳಿದರು. | Kannada Prabha

ಸಾರಾಂಶ

ಮಕ್ಕಳಿಗೆ ನ್ಯಾಯ, ನೀತಿ, ಧರ್ಮ, ಸಹನೆ, ಕರುಣೆಯುಳ್ಳ ನೀತಿ ಕಥೆಗಳನ್ನು ಹೇಳುವುದರಿಂದ ಅವರಲ್ಲಿ ಸಾತ್ವಿಕ ಗುಣಗಳು ಬೆಳೆಯುತ್ತದೆ ಎಂದು ಸಾಹಿತಿ ಎಂ.ಜಯಮ್ಮ ತಿಳಿಸಿದರು.

ಹಿಳುವಳ್ಳಿಯ ಸಾಧನ ಜ್ಞಾನ ವಿಕಾಸ ಕೇಂದ್ರದಲ್ಲಿ ಅಜ್ಜಿ ಕೈ ತುತ್ತು , ಕಥೆ ಹೇಳುವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಮಕ್ಕಳಿಗೆ ನ್ಯಾಯ, ನೀತಿ, ಧರ್ಮ, ಸಹನೆ, ಕರುಣೆಯುಳ್ಳ ನೀತಿ ಕಥೆಗಳನ್ನು ಹೇಳುವುದರಿಂದ ಅವರಲ್ಲಿ ಸಾತ್ವಿಕ ಗುಣಗಳು ಬೆಳೆಯುತ್ತದೆ ಎಂದು ಸಾಹಿತಿ ಎಂ.ಜಯಮ್ಮ ತಿಳಿಸಿದರು.

ಭಾನುವಾರ ಪಟ್ಟಣ ಸಮೀಪದ ಹಿಳುವಳ್ಳಿಯ ಗಣಪತಿ ಪೆಂಡಾಲ್ ನಲ್ಲಿ ಧ.ಗ್ರಾ.ಯೋಜನೆಯ ಸಾಧನಾ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಆಶ್ರಯದಲ್ಲಿ ನಡೆದ ಅಜ್ಜಿಯ ಕೈ ತುತ್ತು ಕಾರ್ಯಕ್ರಮದಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಕ್ಕಳಿಗೆ ನೀತಿ ಕಥೆ ಹೇಳುವುದರಿಂದ ಮಕ್ಕಳಲ್ಲಿ ಚಿಂತನೆ, ತುಲನೆ, ಸೃಜನಾತ್ಮಕ ಕೌಶಲ್ಯ ವೃದ್ದಿಯಾಗಲಿದೆ. ಕಥೆಗಳಲ್ಲಿ ಪೌರಾಣಿಕ, ಚಾರಿತ್ರಿಕ, ಸಾಮಾಜಿಕ ಹಾಗೂ ಪ್ರಾಕೃತಿಕ ಎಂದು ವಿಂಗಡಿಸಬಹುದು. ಈ ಎಲ್ಲಾ ಪ್ರಾಕಾರದ ಕಥೆಗಳು ಜಾನಪದ ಸಾಹಿತ್ಯದಲ್ಲೂ ಕಾಣಬಹುದು. ಜೊತೆಗೆ ಪತ್ತೆದಾರಿ ಕಥೆಗಳು ಸಹ ಇದೆ. ಗದ್ಯ ಹಾಗೂ ಪದ್ಯರೂಪದಲ್ಲೂ ಕಥೆಗಳಿವೆ. ಬಸವಣ್ಣ, ಸರ್ವಜ್ಞ ಮುಂತಾದ ವಚನಕಾರರ ತ್ರಿಪದಿ ಷಟ್ಟದಿಗಳಲ್ಲೂ ಇತಿಹಾಸ ಸಾರುವ ವೀರ ಗಾಥೆಗಳ ನೀತಿ ಕಥೆಯನ್ನು ಕಾಣಬಹುದು ಎಂದರು.

ಹಿಂದಿನ ಕಾಲದಲ್ಲಿ ಪ್ರತಿ ಕುಟುಂಬಗಳಲ್ಲೂ ಅಜ್ಜಿಯರು ಮೊಮ್ಮಕ್ಕಳಿಗೆ ಕೈ ತುತ್ತು ತಿನ್ನಿಸಿ ಸಂಭ್ರಮಿಸುತ್ತಿದ್ದರು. ಇದರಿಂದ ಅಜ್ಜಿ, ಮೊಮ್ಮಗ, ಮೊಮ್ಮಗಳ ಮದ್ಯೆ ಬಾಂಧವ್ಯ, ಆಪ್ತತೆ ವೃದ್ಧಿಯಾಗುತ್ತಿತ್ತು. ಮನೆಗಳಲ್ಲಿ ಊಟ ಮಾಡುವಾಗ ಎಲ್ಲರೂ ಒಟ್ಟಾಗಿ ಕುಳಿತು ಊಟ ಮಾಡುತ್ತಿದ್ದರು. ಆದರೆ ಈಗ ಇದು ಸಹ ಮರೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ನಂತರ ಮಕ್ಕಳಿಗೆ ಕೈ ತುತ್ತು ತಿನ್ನಿಸಿ ನೀತಿ ಕಥೆಗಳನ್ನು ಹೇಳಿದರು.

ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಶಶಿಕಲಾ ಮಾತನಾಡಿ, ಧರ್ಮಸ್ಥಳದ ಮಾತೃಶ್ರೀ ಅಮ್ಮನವರ ಆಶಯದಂತೆ ಎಲ್ಲಾ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲೂ ಅಜ್ಜಿ ಕೈ ತುತ್ತು ಹಾಗೂ ಅಜ್ಜಿಯ ನೀತಿ ಕಥೆ ಕಾರ್ಯಕ್ರಮ ನಡೆಸುತ್ತಿದ್ದೇವೆ. ಹಿಂದೆ ಮಕ್ಕಳಿಗೆ ಊಟ ಮಾಡಿಸುವಾಗ ನೀತಿ ಕಥೆ ಹೇಳುತ್ತಾ ಊಟ ಮಾಡಿಸುತ್ತಿದ್ದರು. ಈಗ ಮೊಬೈಲ್‌ ಕೊಟ್ಟು ಊಟ ಮಾಡಿಸುತ್ತಿದ್ದಾರೆ. ಇದರಿಂದ ನೀತಿ ಕಥೆ ಗಳು ಮರೆತು ಹೋಗುತ್ತಿದೆ. ಅದನ್ನು ಮತ್ತೆ ಪ್ರಾರಂಭಿಸುವ ಉದ್ದೇಶದಿಂದ ಮತ್ತು ಅಜ್ಜಿಯ ಕಥೆ ಹೇಳುವ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದರು.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷೆ ರಾಜೇಶ್ವರಿ, ಸದಸ್ಯೆ ಶ್ರೀಮತಿ, ಸಾಧನ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಪವಿತ್ರ ಇದ್ದರು. ರೇಶ್ಮಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಸ್ರೇಲ್‌-ಇರಾನ್‌ ಸಂಘರ್ಷ: ಹಲವು ವಿಮಾನ ರದ್ದು
ನಾನು ರಾಜಕೀಯ ಮಾಡಿದ್ರೆ ನೀವ್ಯಾರೂ ಇರಲ್ಲ: ಶಾಸಕ ಸುಬ್ಬಾರೆಡ್ಡಿ