ನೂರಕ್ಕೆ ನೂರರಷ್ಟು ಮತದಾನಕ್ಕೆ ಸ್ವೀಪ್ ಸಮಿತಿ ಪಣ

KannadaprabhaNewsNetwork |  
Published : Mar 02, 2024, 01:50 AM IST
ಕ್ರೀಡಾಪಟುಗಳೊಂದಿಗೆಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದ ಸಿಇಓ ರಿಷಿ ಆನಂದ | Kannada Prabha

ಸಾರಾಂಶ

ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024 ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.ನೂರರಷ್ಟು ಮತದಾನಕ್ಕೆ ನಾವೆಲ್ಲರು ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024 ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.ನೂರರಷ್ಟು ಮತದಾನಕ್ಕೆ ನಾವೆಲ್ಲರು ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಗಳ ಸಹಯೋಗದಲ್ಲಿ ವಿಜಯಪುರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮತದಾನದ ಮಹತ್ವ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲ ಕ್ರೀಡಾಪಟುಗಳೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಕೆ.ಹೊಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ, ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಧೈವಾಡಿ, ಕ್ರೀಡಾ ಕಾರ್ಯದರ್ಶಿ ಎಸ್.ಎಸ್.ಕೆರೂರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗೌರವಾಧ್ಯಕ್ಷ ವಿಶ್ವನಾಥ ಬೆಳೆನ್ನವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಗಂಗಾಧರ ಜೇವೂರ, ಕ್ರೀಡಾ ಕಾರ್ಯದರ್ಶಿ ನಿಜು ಮೇಲಿನಕೇರಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ, ನ್ಯಾಯವಾದಿ ನಾಗರಾಜ ಲಂಬು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ