ಕೊರಟಗೆರೆ: ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತಿದೆ. ಇನ್ನು ಚುರುಕುಗೊಳಿಸಿ ಅಕ್ಟೋಬರ್ ಒಳಗೆ ಆಯ್ಕೆ ಪ್ರಕಿಯೆ ಮುಗಿಸಿ ಡಿಸೆಂಬರ್ ಒಳಗಾಗಿ ಸವಲತ್ತುಗಳನ್ನು ಸಂಪೂರ್ಣವಾಗಿ ವಿತರಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಹೇಳಿದರು.
ಡೆಂಘೀ ರೋಗವನ್ನು ಪರಿಶೀಲನೆ ಮಾಡಿದ್ದು, ತಾಲೂಕಿನಲ್ಲಿ ೬ ಪ್ರಕರಣಗಳು ಇದ್ದು ಡೆಂಘೀ ನಿಯಂತ್ರಣಕ್ಕೆ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಿನಕ್ಕೆ ಸರಾಸರಿ 500 ಓಪಿಡಿ ರೋಗಿಗಳು ಬರುತ್ತಿದ್ದು, ನೂತನ ಆಸ್ಪತ್ರೆಗೆ ಜಾಗ ಮಂಜೂರು ಆಗಿರುವ ಬಗ್ಗೆ ಗಮನಕ್ಕೆ ತಂದಿದ್ದು ಅದನ್ನು ಪರಿಶೀಲಿಸಲಾಗುವುದು ಎಂದರು.
ತಹಸೀಲ್ದಾರ್ ಮಂಜುನಾಥ್, ತಾಲೂಕು ವೈದ್ಯಾಧಿಕಾರಿ ವಿಜಯ್ಕುಮಾರ್, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷೀಕಾಂತ್, ಡಾ.ಮೋಹನ್ದಾಸ್, ಶಿವರಾಜ್, ಕಂದಾಯ ಆಧಿಕಾರಿ ಬಸವರಾಜು ಹಾಜರಿದ್ದರು.ಔಷಧ ದಾಸ್ತಾನು ಸಿಬ್ಬಂದಿಗೆ ನೋಟಿಸ್
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಔಷಧಿ ಕೇಂದ್ರದಲ್ಲಿ ಸಿಬ್ಬಂದಿ ಆಸ್ಪತ್ರೆಯ ಒಳರೋಗಿಗಳ ವಿವರವನ್ನು ರಿಜಿಸ್ಟಾರ್ನಲ್ಲಿ 14 ಎಂದು ನಮೂದಿಸಿದ್ದು, ನಂತರ ಇಲಾಖೆಗೆ ಕಂಪ್ಯೂಟರ್ನಲ್ಲಿ ವರದಿ ಸಲ್ಲಿಸುವಾಗ 114 ಎಂದು ವರದಿ ನೀಡಲಾಗಿತ್ತು, ಈ ಬಗ್ಗೆ ವಿಚಾರಿಸಿದಾಗ ಎಂಟ್ರಿಯಲ್ಲಿ ಲೋಪವಾಗಿದೆ ಎಂದು ಸಬೂಬು ಹೇಳಿದ ಔಷಧ ದಾಸ್ತಾನು ಸಿಬ್ಬಂದಿಗೆ ನೊಟೀಸ್ ನೀಡಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೂಚಿಸಿದರು.