ವಿಶಿಷ್ಟ ಭಾಷೆ ಹಾಗೂ ಸಂಸ್ಕೃತಿಯಿಂದ ಗುರುತಿಸಿಕೊಂಡಿರುವ ಬಂಜಾರ ಜನಾಂಗದ ಚಿಂತನೆಯು ಅನುಕರಣೀಯವಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಗಜೇಂದ್ರಗಡ: ವಿಶಿಷ್ಟ ಭಾಷೆ ಹಾಗೂ ಸಂಸ್ಕೃತಿಯಿಂದ ಗುರುತಿಸಿಕೊಂಡಿರುವ ಬಂಜಾರ ಜನಾಂಗದ ಚಿಂತನೆಯು ಅನುಕರಣೀಯವಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಸಮೀಪದ ದಿಂಡೂರು ಗ್ರಾಮದ ದಿಂಡೂರ ತಾಂಡಾದಲ್ಲಿನ ಸಂತ ಸೇವಾಲಾಲ್ ದೇವಸ್ಥಾನ ಆವರಣದಲ್ಲಿ ನಡೆದ ೨೮೬ನೇ ಸಂತ ಸೇವಾಲಾಲ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಟ್ಟಿಗೆ ಹೊತ್ತು ಅಡವಿಗಳಲ್ಲಿ, ಕೃಷಿ ಜಮೀನುಗಳಲ್ಲಿ ದುಡಿಯುವ ಬುಡಕಟ್ಟು ಜನಾಂಗದ ಬಂಜಾರರು ಶ್ರಮಿಕರಾಗಿದ್ದಾರೆ. ಸಂತ ಸೇವಾಲಾಲ್ ಮಹಾರಾಜರು ತಮ್ಮ ಅನುಭವದ ಮೂಲಕ ಸತ್ಯ, ಅಹಿಂಸಾ ಹಾಗೂ ಸೇವಾ ಮಾರ್ಗಗಳನ್ನು ಪ್ರಕಾಶಗೊಳಿಸಿದ್ದು, ಯುವ ಸಮೂಹ ಸೇವಾಲಾಲ್ ಮಹಾರಾಜರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.ಮುಖಂಡ ಎಚ್.ಎಸ್.ಸೋಂಪುರ ಮಾತನಾಡಿ, ಬಂಜಾರ ಸಮುದಾಯದ ಕಲೆ ಹಾಗೂ ಸಂಸ್ಕೃತಿಗೆ ಮಹತ್ವದ ಸ್ಥಾನಮಾನವಿದೆ. ಹೀಗಾಗಿ ಸಮುದಾಯವು ಸಂಸ್ಕೃತಿ ಹಾಗೂ ಪರಂಪರೆ ರಕ್ಷಣೆ ಜತೆಗೆ ಮಕ್ಕಳಿಗೆ ಉತ್ತಮ ಮತ್ತು ಉನ್ನತ ಶಿಕ್ಷಣವನ್ನು ಕೊಡಿಸುವತ್ತ ಹೆಚ್ಚಿನ ಗಮನವನ್ನು ನೀಡಬೇಕು ಎಂದರು.ಗಜೇಂದ್ರಗಡ ಪುರಸಭೆ ನಾಮ ನಿರ್ದೇಶಿತ ಸದಸ್ಯ ಉಮೇಶ ರಾಠೋಡ ಮಾತನಾಡಿದರು. ರೋಣ ಪುರಸಭೆ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.