ಕನ್ನಡಪ್ರಭ ವಾರ್ತೆ ರಾಮನಗರ
ಬಿಡದಿ ಹೋಬಳಿ ಭದ್ರಾಪುರ ಕಾಲೋನಿಯಲ್ಲಿರುವ ಮೃತ ಖುಷಿ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ನಂತರ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರೊಂದಿಗೆ ಚರ್ಚೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಾಲಕಿ ಖುಷಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಶವದ ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಂಡು ವೈದ್ಯಕೀಯ ವರದಿ ಸಿದ್ಧವಿದೆ. ಜತೆಗೆ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ ಎಸ್ ಎಲ್ ) ವರದಿ ಇನ್ನೂ ಬರಬೇಕಿದೆ. ಆ ವರದಿ ಬಂದ ನಂತರ ಎರಡನ್ನೂ ತಾಳೆ ಮಾಡಿ ನಂತರ ಸಾವಿಗೆ ನಿಖರವಾದ ಕಾರಣ ತಿಳಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆಂದು ಹೇಳಿದರು.ಬಾಲಕಿಯ ಮೈಮೇಲೆ ಸಿಗರೇಟ್ನಿಂದ ಸುಟ್ಟ ಗಾಯಗಳಾಗಿದ್ದು, ಕುತ್ತಿಗೆ ಮೇಲೆ ಕಾಲಿನಿಂದ ತುಳಿಯಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆ ರೀತಿ ಏನೂ ಆಗಿಲ್ಲವೆಂದು ಹೇಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣದ ಅಂತಿಮ ವರದಿಯನ್ನು ನಾಳೆ ಪ್ರಕಟಿಸುವುದಾಗಿ ಹೇಳಿದ್ದಾರೆ. ಹಾಗೇನಾದರೂ ಕೊಲೆ ಹಾಗೂ ಅತ್ಯಾಚಾರ ನಡೆದಿರುವುದು ಸಾಬೀತಾದರೆ ಅದಕ್ಕೆ ಕಾರಣರಾದವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಮಾಜಿ ಸಚಿವ ಮಹೇಶ್ , ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಹಾಜರಿದ್ದರು.
-------16ಕೆಆರ್ ಎಂಎನ್ 6.ಜೆಪಿಜಿ
ಬಿಡದಿ ಹೋಬಳಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿರುವುದು.------ -