ಮಹಿಳೆಯನ್ನು ನೋಡುವ ದೃಷ್ಟಿ ಬದಲಾಗಿಲ್ಲ

KannadaprabhaNewsNetwork |  
Published : Sep 01, 2024, 01:50 AM IST
30ಕೆಬಿಪಿಟಿ.2.ಬಂಗಾರಪೇಟೆ ಬಾಲಕೀಯರ ಕಾಲೇಜಿನಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಅರಿವು ಸಮಾರಂಭದಲ್ಲಿ ಮಾತನಾಡುತ್ತಿರುವ ಪೋಕಸ್ ಸಂಸ್ಥೆ ಅಧ್ಯಕ್ಷ ಅ.ನಾ.ಹರೀಶ್. | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಕೆಲವೊಮ್ಮೆ ಕುಟುಂಬದ ಬಡತನದಿಂದಾಗಿ, ಅಥವಾ ಯಾವುದೋ ಆಸೆ ಆಮೀಷಗಳಿಗೆ ಒಳಗಾಗಿ ಹದಿಹರೆಯದ ವಯಸ್ಸಿನಲ್ಲಿ ವಿವಾಹ ಮಾಡಲಾಗುತ್ತಿರುವುದು ಅತ್ಯಂತ ದೂರದೃಷ್ಟಕರ

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಸ್ವಾತಂತ್ರ‍್ಯ ಬಂದು ದಶಕಕಗಳೆ ಕಳೆದರೂ ಇಂದಿಗೂ ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾಗಲಿಲ್ಲ ಇದರಿಂದ ನಿರಂತರವಾಗಿ ಮಹಿಳೆಯರು ಮೇಲೆ ದೌರ್ಜನ್ಯ ದಬ್ಬಾಳಿಕೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಮುಖಂಡರಾದ ವಿ.ಗೀತಾ ಅಸಮಧಾನ ವ್ಯಕ್ತಪಡಿಸಿದರು. ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಫೋಕಸ್ ಸ್ವಯಂ ಸೇವಾ ಸಂಸ್ಥೆ, ಜನವಾದಿ ಮಹಿಳಾ ಸಂಘ, ಮತ್ತು ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಯೋಜಿಸಲಾಗಿದ್ದ ‘ಬಾಲ್ಯವಿವಾಹ ನಿಷೇಧ ಕಾಯ್ದೆ’ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ

ಪ್ರಸ್ತುತ ಸಮಾಜದಲ್ಲಿ ಬಾಲಕಿಯರು ಆಸೆ ಆಮಿಷಗಳಿಗೆ ಒಳಗಾಗಿ ತನ್ನ ಜವಾಬ್ದಾರಿಯನ್ನು ಮರೆತಿದ್ದಾರೆ ಪ್ರೀತಿ - ಪ್ರೇಮ - ಪ್ರಣಯ ಎಂಬ ಅಂಧಕಾರದಲ್ಲಿ ಮುಳುಗಿ ನಶಿಸಿ ಹೋಗುವುದರ ಮೂಲಕ ತಮ್ಮ ಜೀವನದ ಪ್ರಾರಂಭದಲ್ಲೇ ಅಂತ್ಯ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಬಾಲ್ಯವಿವಾಹ ತಡೆಗಟ್ಟಿ

ಸಿಡಿಪಿಒ ಮುನಿರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಕೆಲವೊಮ್ಮೆ ಕುಟುಂಬದ ಬಡತನದಿಂದಾಗಿ, ಅಥವಾ ಯಾವುದೋ ಆಸೆ ಆಮೀಷಗಳಿಗೆ ಒಳಗಾಗಿ ಹದಿಹರೆಯದ ವಯಸ್ಸಿನಲ್ಲಿ ವಿವಾಹ ಮಾಡಲಾಗುತ್ತಿರುವುದು ಅತ್ಯಂತ ದೂರದೃಷ್ಟಕರ, ಇಂತ ಪ್ರಕರಣಗಳು ಕಂಡು ಬಂದಲ್ಲಿ ಸರ್ಕಾರ ಸೂಚಿಸಿರುವ ೧೧೨ ಮತ್ತು ೧೦೯೮ ಸಹಾಯವಾಣಿ ಸಂಖ್ಯೆಗೆ ಕರೆಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಪೋಕಸ್ ಸಂಸ್ಥೆ ಅಧ್ಯಕ್ಷ ಅ.ನಾ.ಹರೀಶ್, ಪ್ರಾಶುಪಾಲರಾದ ಸುಬ್ರಮಣಿ, ಉಪ ಪ್ರಾಂಶುಪಾಲ ನಾಗರಾಜ್, ಎಸ್.ಎನ್ ಯುವಸೇನೆ ಅಧ್ಯಕ್ಷ ನವೀನ್‌ಗೌಡ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷರಾದ ರವಿಂದ್ರ, ಕಾರ್ಯದರ್ಶಿ ಅಮರಾವತಿ, ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷರಾದ ಸರಸ್ವತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ