ಕಳ್ಳರನ್ನು ಹಿಡಿದು ಧರ್ಮದೇಟು ನೀಡಿದ ಗ್ರಾಮಸ್ಥರು

KannadaprabhaNewsNetwork |  
Published : Sep 02, 2024, 02:00 AM IST
ಕಳವು ಮಾಡುವಾಗ ಸಾರ್ವಜನಿಕರ ಕೈಗೆ ಸಿಕ್ಕ ಕಳ್ಳರು. | Kannada Prabha

ಸಾರಾಂಶ

ಕಾಗವಾಡ : ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ರಾಂಜನಿ ಗ್ರಾಮದಲ್ಲಿ ಸಾರ್ವಜನಿಕರು ಐವರು ಕಳ್ಳರನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಕಾಗವಾಡ

ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ರಾಂಜನಿ ಗ್ರಾಮದಲ್ಲಿ ಸಾರ್ವಜನಿಕರು ಐವರು ಕಳ್ಳರನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ನಡೆದಿದೆ.

ಶನಿವಾರ ತಡ ರಾತ್ರಿ ಕರ್ನಾಟಕದ ಖಿಳೇಗಾಂವ, ಅನಂತರಪುರ ಹಾಗೂ ಮಹಾರಾಷ್ಟ್ರದ ರಾಂಜನಿ ಗ್ರಾಮದಲ್ಲಿ ಮನೆ ಹಾಗೂ ಶ್ರೀಗಂಧ ಕಳ್ಳತನಕ್ಕೆ ಯತ್ನಿಸುತ್ತಿದ್ದ ಐವರು ಕಳ್ಳರನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗ ಥಳಿಸಿ ಕವಟೆಮಹಾಂಕಾಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಾರಾಷ್ಟ್ರದ ಕವಟೆಮಹಾಂಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಮಾರು ದಿನಗಳಿಂದ ಕರ್ನಾಟಕ ಗಡಿಯಲ್ಲಿ ಕಳ್ಳತನ ಪ್ರಖರಣಗಳು ಹೆಚ್ಚಾಗುತ್ತಿದ್ದು, ಕಳ್ಳರು ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗುತ್ತಿದ್ದಾರೆ. ಇದರಿಂದ ಗಡಿಗ್ರಾಮಗಳ ಜನರಲ್ಲಿ ಭಯ ಆವರಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ