ಕನ್ನಡಪ್ರಭ ವಾರ್ತೆ ಸಿಂಧನೂರು
ತಾಲೂಕಿನ ಗಾಂಧಿನಗರ ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷ್ಣ ಭೈರೇಗೌಡ ಅವರು ಕಂದಾಯ ಇಲಾಖೆ ಸಚಿವರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಇಲಾಖೆಯಲ್ಲಿದ್ದ ಸಮಸ್ಯೆಗಳಿಗೆ ಹೊಸ ತಂತ್ರಜ್ಞಾನದ ಮೂಲಕ ಪರಿಹರಿಸಿ ಹೊಸ ರೂಪ ಕೊಟ್ಟಿದ್ದಾರೆ. ಫಲಾನುಭವಿಗಳಿಗೆ ಡಿಜಿಟಲ್ ಹಕ್ಕುಪತ್ರ ನೀಡಿ ನಕಲು ಆಗದಂತೆ ಕ್ರಮ ವಹಿಸಿದ್ದಾರೆ. ಈ ಹಕ್ಕುಪತ್ರದಿಂದ ಬ್ಯಾಂಕ್ ಸಾಲ ಸಹ ಪಡೆದುಕೊಳ್ಳಬಹುದು ಎಂದು ಹೇಳಿದರು.ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ, ಕೃಷ್ಣ ಭೈರೇಗೌಡರು ಕಂದಾಯ ಸಚಿವರಾಗಿದ್ದಾಗ ಶಾಸಕ ಹಂಪನಗೌಡರ ನಿರಂತರ ಪ್ರಯತ್ನದಿಂದ ಸಿಂಧನೂರು ತಾಲೂಕಿನಲ್ಲಿ 25 ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿದ್ದು, 1100 ಬಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗಿದೆ. ಇದು ರಾಯಚೂರು ಜಿಲ್ಲೆಯಲ್ಲಿಯೇ ಅತಿಹೆಚ್ಚು. ಜಾಲಿಹಾಳ ಹೋಬಳಿ ವ್ಯಾಪ್ತಿಯ ಸತ್ಯನಾರಾಯಣ ಕ್ಯಾಂಪ್, ತಾಯಮ್ಮ ಕ್ಯಾಂಪ್, ವೆಂಕಟೇಶ್ವರ ಕ್ಯಾಂಪ್, ಸತ್ಯವತಿ ಕ್ಯಾಂಪ್, ದುರ್ಗಾಕ್ಯಾಂಪ್, ಹನುಮಾಪುರ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಹೆಸರುಗಳನ್ನು ಬದಲಾಯಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 167 ಫಲಾನುಭವಿಗಳಿಗೆ ಡಿಜಿಟಲ್ ಹಕ್ಕುಪತ್ರಗಳನ್ನು ವಿತರಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಮುಖಂಡರು, ಸಾರ್ವಜನಿಕರು ಇದ್ದರು.