ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಬೆಳಗ್ಗೆ ೬ ಗಂಟೆಯಿಂದ ರಾತ್ರಿ ೧೦ ಗಂಟೆ ತನಕ ಕ್ರಷರ್ಗಳು ಕಲ್ಲು ಪುಡಿ ಮಾಡಲು ಅವಕಾಶವಿದೆ. ಆದರೆ ದುಡ್ಡಿನಾಸೆಗೆ ಲಕ್ಷ್ಮೀ ವೆಂಕಟೇಶ್ವರ, ಶ್ರೀಕಂಠೇಶ್ವರ ಕ್ರಷರ್ಗಳು ನಿಯಮ ಉಲ್ಲಂಘಿಸಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಹಿರೀಕಾಟಿ ಗ್ರಾಮದ ಜನರು ನೆಮ್ಮದಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ. ವೃದ್ಧರು, ಮಕ್ಕಳು ಹಾಗೂ ರೋಗಿಗಳಿಗೆ ಕ್ರಷರ್ ಸದ್ದು ಮಾರಕವಾಗಿದೆ. ಈ ಸಂಬಂಧ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೆ ಬೇಗೂರು ಪೊಲೀಸರಿಗೂ ಗ್ರಾಮದ ಕೆಲ ಯುವಕರು ಮೌಖಿಕವಾಗಿ ಕ್ರಷರ್ ಸದ್ದಿನ ಅವಾಂತರದ ಬಗ್ಗೆ ಹೇಳಿಕೊಂಡಿದ್ದಾರೆ.
ಕೆಲ ತಿಂಗಳ ಹಿಂದೆ ಹಿರೀಕಾಟಿ ಬಳಿ ಎರಡು ಕ್ರಷರ್ ಮಧ್ಯ ರಾತ್ರಿ ತನಕ ಹಾಗೂ ಕೆಲ ಸಮಯದಲ್ಲಿ ಬೆಳಗಿನ ಮೂರು ಗಂಟೆ ತನಕವೂ ಕೆಲಸ ನಿರ್ವಹಿಸುವ ಬಗ್ಗೆ ಗ್ರಾಮದ ಯುವಕನೊಬ್ಬ ವೀಡಿಯೋ ಸಮೇತ ಬೇಗೂರು ಪೊಲೀಸರಿಗೆ ಕಳುಹಿಸಿ ಕೊಟ್ಟಿದ್ದಾರೆ. ರಾತ್ರಿ ೧೦ ಗಂಟೆ ಬಳಿಕ ಕೆಲಸ ನಿಲ್ಲಿಸಿ ಎಂದು ಮಾಲೀಕ ಆರ್.ಯಶವಂತಕುಮಾರ್ಗೆ ಗ್ರಾಮದ ಚಂದ್ರಶೇಖರ್ ಮೊಬೈಲ್ ಮೂಲಕ ಮಾತನಾಡಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನಿಯಮ ಏನು?:
ಗ್ರಾಮಸ್ಥರ ದೂರು:
ಶಬ್ದ ಮಾಲಿನ್ಯ ಉಂಟು ಮಾಡುತ್ತಿರುವ ಕ್ರಷರ್ ಘಟಕಗಳ ಪರಿಶೀಲಿಸಿ ರಾತ್ರಿ ವೇಳೆ ಕಲ್ಲು ನುರಿಯುವುದನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಕೆಲ ತಿಂಗಳ ಹಿಂದೆ ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಬಳಿಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕರು ಅವಧಿ ಮೀರಿ ಕ್ರಷ್ಷಿಂಗ್ ಮಾಡುವ ಕ್ರಷರ್ ಮಾಲೀಕರಿಗೆ ಎಚ್ಚರಿಕೆ ನೀಡಿ ನೋಟಿಸ್ ನೀಡಿದ್ದರೂ ಹಿರೀಕಾಟಿ ಬಳಿಯ ಎರಡು ಕ್ರಷರ್ಗಳು ಮಾತ್ರ ಮಧ್ಯ ರಾತ್ರಿ, ಬೆಳಗಿನ ಜಾವದ ತನಕ ಕಲ್ಲು ಪುಡಿ ಮಾಡುತ್ತಿವೆ ಎಂದು ದೂರುದಾರ ಚಂದ್ರಶೇಖರ್ ಹಾಗೂ ಮಂಜು ಹೇಳಿದ್ದಾರೆ.
-ಚಂದ್ರಶೇಖರ್, ಹಿರೀಕಾಟಿ ಗ್ರಾಮಸ್ಥ