ಕೂಜಿಮಲೆ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ

KannadaprabhaNewsNetwork |  
Published : Mar 29, 2024, 12:54 AM IST
ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ         | Kannada Prabha

ಸಾರಾಂಶ

ಮಹಿಳೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ಸುಳ್ಯ ತಾಲೂಕಿನ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ಬುಧವಾರ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ ಮೂಲದವಳು ಎಂದು ತಿಳಿದು ಬಂದಿದೆ. ಮಹಿಳೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಕೂಜಿಮಲೆ ಎಸ್ಟೇಟ್‌ನಲ್ಲಿ ಬುಧವಾರ ಮದ್ಯಾಹ್ನದ ವೇಳೆ ಅಲ್ಲಿನ ಕೆಲಸಗಾರರಿಗೆ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದಾಳೆ. ಕೆಲಸಗಾರರು ನೋಡಿದಾಕ್ಷಣ ಕಾಡಿನ ಕಡೆ ಓಡಿ ಹೋಗಿದ್ದಾಳೆ. ಈ ಕುರಿತು ಕೆಲಸಗಾರರು ದೂರು ನೀಡಿದ್ದರು. ಕಾಣಿಸಿಕೊಂಡ ಮಹಿಳೆ ನಕ್ಸಲ್ ಎಂಬ ಸುದ್ದಿ ತಿಳಿದ ಎಎನ್‌ಎಫ್‌ ತಂಡ ಮತ್ತು ಕೊಡಗು ಜಿಲ್ಲಾ ಶಸ್ತ್ರಸ್ಥ ಪಡೆಯ ಸಿಬ್ಬಂದಿ ಎಸ್ಟೇಟ್‌ಗೆ ಭೇಟಿ ನೀಡಿ ಪರಿಶೀಲಿಸಿ ಆಕೆಯನ್ನು ಪತ್ತೆ ಹಚ್ಚಿ ಮಡಿಕೇರಿಗೆ ಕರೆತರಲಾಗಿದೆ. ರಾತ್ರಿ ೨ ಗಂಟೆ ತನಕ ನಡೆದ ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್‌ ಕೂಡ ಉಪಸ್ಥಿತರಿದ್ದು ಆಕೆಯ ಸಂಪೂರ್ಣ ವಿಚಾರಣೆಗೆ ಒಳಪಡಿಸಿದ ನಂತರ ಈ ಮಹಿಳೆ ನಕ್ಸಲ್ ತಂಡಕ್ಕೆ ಸೇರಿದವಳಲ್ಲ ಎಂದು ದೃಢಪಟ್ಟಿದೆ. ನಿನ್ನೆ ಮಾಧ್ಯಮಗಳಲ್ಲಿ ಬಂದ ಸುದ್ದಿ ಸುಳ್ಳಾಗಿದ್ದು ಕೊಡಗು ಜಿಲ್ಲಾ ಪೊಲೀಸ್ ಹಾಗೂ ಎ.ಎನ್.ಎಫ್ ತಂಡ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ