ಕತ್ತಲಲ್ಲಿದ್ದ 31 ಹಾಡಿಗಳಿಗೆ ಬೆಳಕು ನೀಡುವ ಕಾರ್ಯ ಆರಂಭ: ವಿದ್ಯುತ್‌ ನೀಡುವ ಯೋಜನೆಗೆ ಸಚಿವ ಕೆ.ವೆಂಕಟೇಶ್‌ ಚಾಲನೆ

KannadaprabhaNewsNetwork |  
Published : Dec 01, 2024, 01:32 AM IST
  ಜಿಲ್ಲೆಯ ೩೧ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆಗೆ ಶನಿವಾರ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಯಳಂದೂರು ತಾಲೂಕಿನ ಪುರಾಣಿ ಪೋಡಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು | Kannada Prabha

ಸಾರಾಂಶ

ಕತ್ತಲು ತುಂಬಿದ್ದ ಜಿಲ್ಲೆಯ ೩೧ ಹಾಡಿಗಳಿಗೆ ಬೆಳಕು ಬೇಕೆನ್ನುವ ಬಹು ವರ್ಷಗಳ ಬೇಡಿಕೆ ನಿರೀಕ್ಷೆಗೆ ಈಗ ಫಲ ಸಿಕ್ಕಿದೆ. ಜಿಲ್ಲೆಯ ೩೧ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆಗೆ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಪುರಾಣಿ ಪೋಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

೪೧.೬ ಕೋಟಿ ರು. ವೆಚ್ಚದಲ್ಲಿ ಪೋಡಿಗಳ ಅಭಿವೃದ್ಧಿ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕತ್ತಲು ತುಂಬಿದ್ದ ಜಿಲ್ಲೆಯ ೩೧ ಹಾಡಿಗಳಿಗೆ ಬೆಳಕು ಬೇಕೆನ್ನುವ ಬಹು ವರ್ಷಗಳ ಬೇಡಿಕೆ ನಿರೀಕ್ಷೆಗೆ ಈಗ ಫಲ ಸಿಕ್ಕಿದೆ. ಜಿಲ್ಲೆಯ ೩೧ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆಗೆ ಶನಿವಾರ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಪುರಾಣಿ ಪೋಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಮಾರಂಭ ಉದ್ಘಾಟಿಸಿದ ಬಳಿಕ ಸಚಿವ ಕೆ.ವೆಂಕಟೇಶ್ ಮಾತನಾಡಿ, ಇಂದು ಸಂತೋಷದ ದಿನ. ಕತ್ತಲಲ್ಲಿದ್ದ ಹಾಡಿಗಳಿಗೆ ಬೆಳಕು ನೀಡುವ ಮಹತ್ವದ ಯೋಜನೆಗೆ ಚಾಲನೆ ನೀಡಿದ ಸಾರ್ಥಕ ಕೆಲಸ ಮಾಡಿದ ತೃಪ್ತಿಯಿದೆ. ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದ ವೇಳೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿಗಳು, ಸಚಿವರು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ವಿಶೇಷವಾಗಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ವಿಶೇಷ ಕಾಳಜಿಯಿಂದ ವಿದ್ಯುತ್ ನೀಡುವ ಕೆಲಸಕ್ಕೆ ಚಾಲನೆ ದೊರೆತಿದೆ ಎಂದು ಹೇಳಿದರು.

ಒಟ್ಟು ೪೧.೬ ಕೋಟಿ ರು. ವೆಚ್ಚದಲ್ಲಿ ೩೧ ಹಾಡಿಗಳ ೨೪೮೬ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಾರ್ಥಕ ಯೋಜನೆಗೆ ಚಾಲನೆ ನೀಡಿದ್ದೇವೆ. ಹಾಡಿ ಬುಡಕಟ್ಟುಗಳ ಜನತೆಗೆ ಮೂಲಸೌಕರ್ಯ ಒದಗಿಸುವ ಕಾರ್ಯಗಳಿಗೆ ಮುಖ್ಯಮಂತ್ರಿ ಮುಂದಾಗಿದ್ದಾರೆ. ಹಾಡಿ ವ್ಯಾಪ್ತಿಯಲ್ಲಿ ೧೨೮ ಕಿ.ಮೀ.ನಷ್ಟು ರಸ್ತೆಗಳನ್ನು ಅಭಿವೃದ್ದಿಪಡಿಸಲು ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಈಗಿರುವ ರಸ್ತೆಯನ್ನೇ ಅಭಿವೃದ್ದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಹಾಡಿ ಬುಡಕಟ್ಟುಗಳ ಜನರಿಗೆ ಮನೆ ಒದಗಿಸುವ ಬೇಡಿಕೆಯನ್ನು ಇಟ್ಟಿದ್ದೇವೆ. ಈ ಸಂಬಂಧ ೫ ಲಕ್ಷ ರು. ವೆಚ್ಚದಲ್ಲಿ ಮನೆಗಳನ್ನು ನಿರ್ಮಾಣ ಮಾಡುವ ಮನವಿಯನ್ನು ಮುಖ್ಯಮಂತ್ರಿಗಳ ಮುಂದಿಟ್ಟಿದ್ದು, ಈ ಕುರಿತು ಪ್ರಸ್ತಾವನೆ ಕಳುಹಿಸಿಕೊಡಲು ಸೂಚಿಸಿದ್ದಾರೆ. ನಮ್ಮ ಸರ್ಕಾರ ಹಾಡಿ ಪೋಡುಗಳ ಜನತೆಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಿಕೊಡಲು ಬದ್ಧವಾಗಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಕಾರ್ಯಗತಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಹಾಡಿಗಳಿಗೆ ವಿದ್ಯುತ್ ಒದಗಿಸುವ ಯೋಜನೆಗೆ ಚಾಲನೆ ಸಿಕ್ಕಿರುವ ದಿನ ಸುದಿನವಾಗಿದೆ. ಬಹುದಿನಗಳ ಬೇಡಿಕೆ ಈಡೇರುತ್ತಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಯೋಜನೆ ಅನುಷ್ಠಾನವಾಗಲು ವಿಶೇಷವಾಗಿ ಶ್ರಮಿಸಿದ್ದಾರೆ. ಅಂಡರ್ ಗ್ರೌಂಡ್ ಕೇಬಲ್ ಮೂಲಕ ವಿದ್ಯುತ್ ಒದಗಿಸಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಇಂಧನ ಸಚಿವರು, ಎಲ್ಲಾ ಶಾಸಕರು, ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳ ಸತತ ಪ್ರಯತ್ನದಿಂದ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ. ಯೋಜನೆಗೆ ಸಂಬಂಧಿಸಿದಂತೆ ತೊಡಕಾಗಿದ್ದ ಅರಣ್ಯ ಸಮಸ್ಯೆಗಳನ್ನು ಬಗೆಹರಿಸಿ ಯೋಜನೆಗೆ ಚಾಲನೆ ಸಿಕ್ಕಿದೆ. ಹಾಡಿಯಲ್ಲಿನ ರಸ್ತೆ ಅಭಿವೃದ್ಧಿಗಾಗಿ ಯೋಜನೆ ತಯಾರಿಸಿದ್ದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮವಹಿಸಲಿದೆ ಎಂದರು.

ಜಿಲ್ಲೆಯ ಕ್ಯಾತದೇವರಗುಡಿ, ಕನ್ನೇರಕಾಲೋನಿ, ಬೂತಾನಿಪೋಡು, ಮೊಣಕೈ ಪೋಡು, ಬೇಡಗುಳಿ, ಮಾರಿಗುಡಿ ಪೋಡು, ಕಾಡಿಗೆರೆ, ಬಂಡಿಗೆರೆ, ಬಿಸಲಗೆರೆ, ಇಂಡಿಗನತ್ತ, ಮೆಂದಾರೆ, ತುಳಸಿಕೆರೆ, ನೆಲ್ಲಿಕತ್ರಿ, ಕೆರೆದಿಂಬ, ಗೊಂಬೆಗಲ್ಲು, ಅತ್ತಿಖಾನೆ-ಕಡಲಕೊಂಡಿ, ಹೊನ್ನಮೇಟಿ, ಬೆಳ್ಳಾಚಿ, ಕೊಕ್ಕಬಾರೆ, ತೊಕ್ಕೆರೆ, ದೊಡ್ಡಾಣೆ, ಆಲಂಬಾಡಿ, ಆಪಮಕಟ್ಟಿ, ಜಂಬುಪಟ್ಟಿ, ಮಾರಿಕೋಟೆ-ಹೊಗೇನೆಕಲ್, ತೆಕ್ಕಾಣೆ, ಪಡಸಲನತ್ತ, ಮೆದಗಾಣೆ, ಪಾಲಾರ್, ಪುರಾಣಿಪೋಡು, ಕಲ್ಯಾಣಿಪೋಡು ಹಾಡಿಗಳಿಗೆ ಯೋಜನೆ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.

ಶಾಸಕರಾದ ಎಚ್.ಎಂ. ಗಣೇಶ ಪ್ರಸಾದ್, ಎಂ.ಆರ್. ಮಂಜುನಾಥ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹದೇವು, ಉಪಾಧ್ಯಕ್ಷರಾದ ಕಮಲಮ್ಮ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಹಿರಿಯ ಅಧಿಕಾರಿಗಳಾದ ದಿವಾಕರ್, ಸೋಮಶೇಖರ್, ತಹಶೀಲ್ದಾರ್ ಜಯಪ್ರಕಾಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಮುಖಂಡರಾದ ಕೇತಮ್ಮ, ಡಾ. ಮಾದೇಗೌಡ, ದಾಸೇಗೌಡ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ