ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಸಂಘದಿಂದ ಆಯೋಜಿಸಿದ್ದ 16ನೇ ನಾಗರಂಗ ನಾಟಕೋತ್ಸವದಲ್ಲಿ ಮಾತನಾಡಿ, ಪ್ರಪಂಚದಲ್ಲಿ ಹೆಚ್ಚು ಸಂತಸ ತರುವ ದೇಶವಿದ್ದರೆ ಅದು ಭಾರತ. ಇಲ್ಲಿ ನಾವೆಲ್ಲರೂ ನಮ್ಮ ಭಾಷೆಯಲ್ಲೇ ಮಾತನಾಡಬೇಕು. ಅಳಬೇಕು, ನಗಬೇಕು ಮತ್ತು ಸಂಭ್ರಮಿಸಬೇಕು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡುವುದಕ್ಕಿಂತ ಕನ್ನಡ ಭಾಷೆಯ ಗ್ಯಾರಂಟಿ ನೀಡಬೇಕು. ಸರ್ಕಾರವೂ ಸಹ ಕನ್ನಡ ಲೇಖಕರ ಕೃತಿಗಳನ್ನು ಖರೀದಿಸಿ ಪ್ರಕಟಿಸುವ ಕೆಲಸ ಮಾಡಬೇಕು. ಭಾಷೆಗೆ ಪ್ರಮುಖ್ಯತೆ ನೀಡಬೇಕು ಎಂದು ಆಗ್ರಹಿಸಿದರು.ಕನ್ನಡ ಸಂಘವು ಹಲವು ವರ್ಷಗಳಿಂದ ಕನ್ನಡ ಹಬ್ಬದ ವಾತಾವರಣವನ್ನು ತಾಲೂಕಿನಲ್ಲಿ ಸೃಷ್ಟಿ ಮಾಡಿದೆ. ಸುಮಾರು 52 ವರ್ಷದ ಇತಿಹಾಸ ಇರುವ ನಾಗಮಂಗಲದ ಕನ್ನಡ ಸಂಘಕ್ಕೆ ರಾಜ್ಯ ಸರ್ಕಾರ ಒಂದು ಕಟ್ಟಡ ಮಂಜೂರು ಮಾಡದಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.
ಕನ್ನಡ ಭಾಷೆಯನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ಕನ್ನಡ ಭಾಷೆಯಲ್ಲಿ 52 ಸಂಬಂಧ ವಾಚಕಗಳಿವೆ. ಆದರೆ, ಇಂಗ್ಲಿಷ್ನಲ್ಲಿ ಕೇವಲ ಎರಡಿವೆ. ಕನ್ನಡ ಭಾಷೆಯು ಸಂಬಂಧ ಬಾಂಧವ್ಯಗಳನ್ನು ಬೆಸೆಯುತ್ತದೆ. ಆದ್ದರಿಂದ ನಮ್ಮ ಮಕ್ಕಳಿಗೆ ಕನ್ನಡ ಕಲಿಸಬೇಕು. ಕನ್ನಡ ಭಾಷೆಗೆ ಎಂದಿಗೂ ದ್ರೋಹ ಬಗೆಯಬಾರದು ಎಂದರು.
ನಾನು ಕೂಡ ನನ್ನ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕೊಡಿಸಿದ್ದೇನೆ. ಕನ್ನಡ ಭಾಷೆ ಕಲಿತರೆ ಅದು ಎಲ್ಲಾ ಭಾಷೆಯನ್ನು ಕಲಿಸುತ್ತದೆ. ಕನ್ನಡ ಮಾಧ್ಯಮದಲ್ಲಿ ಓದುತ್ತಿರುವವರಿಗೆ ಮುಂದಿನ ದಿನಗಳಲ್ಲಿ ವಿಶೇಷೆ ಸೌಲಭ್ಯ ಕಲ್ಪಿಸುವ ವ್ಯವಸ್ಥೆಯಾಗಬೇಕು ಎಂದು ಒತ್ತಾಯಿಸಿದರು.
ನಾಗಮಂಗಲ:
ನಾಟಕದ ಸಾರಾಂಶ: ಹಳೆ ತಲೆಮಾರಿನ ಕೊಂಡಿಯಾಗಿರುವ ಅತ್ತೆ ಮತ್ತು ಸೊಸೆ ತಲೆಮಾರಿನ ಭವಿಷ್ಯದ ಸಂಕೇತವಾಗಿರುವ ಮಗ, ಗಂಡನನ್ನು ಕಳೆದುಕೊಂಡ ತಾಯಿಗೆ ಹೀನ ಕೃತ್ಯವೊಂದರಲ್ಲಿ ಆರೋಪಿಯಾಗಿ ಮಗ ಮನೆ ಸೇರಿದಾಗ ತಾಯಿಯ ಆಯ್ಕೆಗಳನ್ನು ಕುರಿತು ವಿಶ್ಲೇಷಿಸುವ ಕಥಾನಕವೇ ಈ ನಾಟಕ. ಖ್ಯಾತ ನಾಟಕಕಾರ ಹೆನ್ರಿಕ್ ಇಬ್ಸನ್ನ ಪೋಸ್ಟ್ ನಾಟಕದ ಛಾಯೆಯೂ ಹೌದು.