ಶಿವಯೋಗ ಮಂದಿರ ಶಾಖಾ ಮಠದ ಕಾರ್ಯ ಶ್ಲಾಘನೀಯ: ಜಿ. ಎಸ್. ಪಾಟೀಲ

KannadaprabhaNewsNetwork |  
Published : Feb 21, 2025, 12:45 AM IST
ನಿಡಗುಂದಿಕೊಪ್ಪದಲ್ಲಿ ನಡೆಯುತ್ತಿರುವ ಗಜೇಂದ್ರಗಡ ತಾಲೂಕಾ ಪ್ರಥಮ ಸಾಹಿತ್ಯ ಸಮ್ಮೇಳನದ ರಾಷ್ಟç ಧ್ವಜಾರೋಹಣವನ್ನು ಶಾಸಕ ಜಿ. ಎಸ್. ಪಾಟೀಲ ನೆರವೇರಿಸಿದರು. | Kannada Prabha

ಸಾರಾಂಶ

ಮಠಮಾನ್ಯಗಳಿಗೆ ಒಬ್ಬ ಕ್ರಿಯಾಶೀಲ ಮಠಾಧಿಪತಿ ಇದ್ದರೆ ಏನೆಲ್ಲ ಸಾಧಿಸಬಹುದು ಎಂಬುದಕ್ಕೆ ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಮಹಾಸ್ವಾಮಿಗಳೆ ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ. ಅವರ ಸಂಕಲ್ಪದಿಂದಲೇ ಇಂದು ನಿಡಗುಂದಿಕೊಪ್ಪದ ಶ್ರೀಮಠದಲ್ಲಿ ಗಜೇಂದ್ರಗಡ ತಾಲೂಕಿನ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ಶಾಸಕ ಜಿ. ಎಸ್. ಪಾಟೀಲ ಹೇಳಿದರು.

ನರೇಗಲ್ಲ: ಮಠಮಾನ್ಯಗಳಿಗೆ ಒಬ್ಬ ಕ್ರಿಯಾಶೀಲ ಮಠಾಧಿಪತಿ ಇದ್ದರೆ ಏನೆಲ್ಲ ಸಾಧಿಸಬಹುದು ಎಂಬುದಕ್ಕೆ ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಮಹಾಸ್ವಾಮಿಗಳೆ ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ. ಅವರ ಸಂಕಲ್ಪದಿಂದಲೇ ಇಂದು ನಿಡಗುಂದಿಕೊಪ್ಪದ ಶ್ರೀಮಠದಲ್ಲಿ ಗಜೇಂದ್ರಗಡ ತಾಲೂಕಿನ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ಶಾಸಕ ಜಿ. ಎಸ್. ಪಾಟೀಲ ಹೇಳಿದರು.

ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದಲ್ಲಿ ಇಂದು ನಡೆಯುತ್ತಿರುವ ಗಜೇಂದ್ರಗಡ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ನಿಡಗುಂದಿ ಮತ್ತು ನಿಡಗುಂದಿಕೊಪ್ಪದ ಸರ್ವ ಸದ್ಭಕ್ತರ ಇಚ್ಛೆಯಂತೆ ಗಜೇಂದ್ರಗಡ ತಾಲೂಕಿನ ಪ್ರಥಮ ಸಮ್ಮೇಳನ ಇಲ್ಲಿ ನಡೆಯುತ್ತಿದೆ.

ಇದಕ್ಕೆ ಸರ್ವಾಧ್ಯಕ್ಷರನ್ನಾಗಿ ಅತ್ಯಂತ ಸೂಕ್ತ ವ್ಯಕ್ತಿಯನ್ನು ಹಿರೇವಡೆಯರ ಗುರುಗಳನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿಯನ್ನು ತಾವು ಅಭಿನಂದಿಸುವುದಾಗಿ ತಿಳಿಸಿದ ಶಾಸಕ ಪಾಟೀಲ, ತಮ್ಮ ಶ್ರೀಮಠದ ಜಾತ್ರೆಯೊಂದಿಗೆ ಕನ್ನಡ ನುಡಿ ಸೇವೆಯನ್ನು ತಾಲೂಕು ಸಮ್ಮೇಳನದ ರೂಪದಲ್ಲಿ ಏರ್ಪಡಿಸಿರುವುದು ತುಂಬಾ ಶ್ಲಾಘನೀಯ ಎಂದರು.

ಸಾನಿಧ್ಯ ವಹಿಸಿದ್ದ ಅಭಿನವ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿ ವರ್ಷಕ್ಕೊಮ್ಮೆ ನಡೆಯುವ ಶ್ರೀ ಕುಮಾರೇಶ್ವರ ಜಾತ್ರೆಯ ಮುನ್ನಾದಿನ ಏನಾದರೊಂದು ಹೊಸ ಕಾರ್ಯಕ್ರಮವನ್ನು ಆಯೋಜಿಸುವ ಪದ್ಧತಿಯನ್ನು ಬಹಳ ವರ್ಷಗಳಿಂದಲೂ ಅನುಸರಿಸಿಕೊಂಡು ಬರಲಾಗಿದೆ. ಹೋದ ವರ್ಷ ರೈತರಿಗಾಗಿ ಕಾರ್ಯಕ್ರಮವನ್ನು ಮಾಡಿದ್ದೆವು. ಈ ಸಾರೆ ಏನು ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಯೋಚಿಸುತ್ತಿದ್ದಾಗ ಥಟ್ಟನೆ ಹೊಳೆದದ್ದು ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರ. ಶಾಸಕರು, ಜಿಲ್ಲಾ ಕಸಾಪ ಪದಾಧಿಕಾರಿಗಳು ಮತ್ತು ತಾಲೂಕು ಪದಾಧಿಕಾರಿಗಳೊಂದಿಗೆ, ಸದ್ಭಕ್ತರೊಂದಿಗೆ ಚರ್ಚಿಸಿದಾಗ ಎಲ್ಲರೂ ಒಮ್ಮನದ ಸಮ್ಮತಿಯನ್ನು ನೀಡಿದ್ದರಿಂದ ಸಾಧ್ಯವಾಗಿದೆ ಎಂದರು. ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಪರಿಷತ್ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಅಧ್ಯಕ್ಷ ಅಮರೇಶ ಗಾಣಿಗೇರ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಾಡಿನ ಅನೇಕ ಹರ-ಗುರು-ಚರ ಮೂರ್ತಿಗಳು, ಹೋಬಳಿ ಘಟಕದ ಅಧ್ಯಕ್ಷ ಎಂ. ವಿ. ವೀರಾಪೂರ, ಮಿಥುನ ಪಾಟೀಲ, ವಿ. ಬಿ. ಸೋಮನಕಟ್ಟಿಮಠ, ಅಂದಪ್ಪ ಬಿಚ್ಚೂರ, ಫಕೀರಪ್ಪ ಕುಕನೂರ, ಜಗದೀಶ ಕರಡಿ ಸೇರಿದಂತೆ ನಿಡಗುಂದಿಕೊಪ್ಪ, ನಿಡಗುಂದಿ, ಹಾಲಕೆರೆ, ನರೇಗಲ್ಲ ಮತ್ತು ತಾಲೂಕಿನ ಎಲ್ಲ ಸಾಹಿತ್ಯಾಭಿಮಾನಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಔಷಧರಹಿತ ಆರೋಗ್ಯ ಚಿಕಿತ್ಸೆ ಜಾಗೃತಿ ಅಭಿಯಾನ: ವಸಂತ ಬಾಂದೇಕರ
ಮನರೇಗಾ ರದ್ದು: ಕಾಂಗ್ರೆಸ್‌ ಕಾರ್ಯಕರ್ತರು ಮೌನ ಪ್ರತಿಭಟನೆ