ಕನ್ನಡಪ್ರಭ ವಾರ್ತೆ ಬೀದರ್
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಆಯೋಜಿಸಿದ್ದ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ಶಿಬಿರದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಬಿವಿಪಿಯಂತಹ ಸ್ವಯಂ ಸೇವಕರ ಕೆಲಸ ದೊಡ್ಡದು, ರೈತ, ಸೈನಿಕ ಮತ್ತು ವಿದ್ಯಾರ್ಥಿಗಳು ದೇಶದ ಶಕ್ತಿ. ನಮ್ಮ ದೇಶಕ್ಕೆ ಇಂದು ಇಂತಹ ಸಂಘಟನೆಗಳ ಅಗತ್ಯವಿದೆ. ಎಬಿವಿಪಿ ವಿದ್ಯಾರ್ಥಿಗಳ ಧ್ವನಿಯಾಗಿ ಸೇವೆ ಸಲ್ಲಿಸುತ್ತಿದೆ. ಎಬಿವಿಪಿ ಕಾರ್ಯ ಮೆಚ್ಚುವಂಥದ್ದಾಗಿದೆ ಎಂದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದೆ. ಮಾ.6ರಿಂದ ಪ್ರವೇಶ ಪ್ರಾರಂಭವಾಗಿದ್ದು, ಮಾ.26ರಿಂದ ಏ.15ರವರೆಗೆ ಸಿಇಟಿ, ನೀಟ್ ತರಬೇತಿಗಳು ನಡೆಯಲಿವೆ. ಇದಕ್ಕಾಗಿ ಯಾವುದೇ ರೀತಿಯ ಶುಲ್ಕವಿಲ್ಲ. ಎಲ್ಲ ವಿಷಯಗಳ ನೋಟ್ಸ್ ಮುದ್ರಣಕ್ಕಾಗಿ 1 ಸಾವಿರ ರು.ಗಳನ್ನು ವಿದ್ಯಾರ್ಥಿಗಳು ನೀಡಬೇಕಿದೆ ಎಂದರು.ಔರಾದ್ (ಬಿ) ತಾಲೂಕು ಕಲ್ಯಾಣಾಧಿಕಾರಿ ರವೀಂದ್ರ ಸಿಇಟಿ, ನೀಟ್ಗಾಗಿ ಲಕ್ಷಾಂತರ ರುಪಾಯಿ ಶುಲ್ಕ ಭರಿಸಬೇಕಿದೆ. ಇದರ ಬಗ್ಗೆ ಬಡವರಿಗೆ ಅನುಕೂಲಕ್ಕಾಗಿ ಉಚಿತ ಶಿಬಿರ ಹಮ್ಮಿಕೊಂಡಿರುವುದು ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೇ ಮಾತನಾಡಿ, ಮಾಹಿತಿಗಾಗಿ ಮೊ:7624906563, 7411312269, 741134149 ಸಂಪರ್ಕಿಸುವಂತೆ ಮನವಿ ಮಾಡಿದರು.