ಆಧುನಿಕ ತಂತ್ರಜ್ಞಾನದಲ್ಲಿ ಜಗತ್ತಿನ ಉಜ್ವಲ ಭವಿಷ್ಯ ಅಡಗಿದೆ-ಡಾ. ಸುರೇಶ ನಾಡಗೌಡರ

KannadaprabhaNewsNetwork |  
Published : May 25, 2025, 02:17 AM IST
ಪೋಟೊ. ಲಕ್ಷ್ಮೇಶ್ವರದ ಕಮಲಾ ಮತ್ತು ವೆಂಕಪ್ಪ ಎಂ.ಅಗಡಿ ಇಂಜನೀಯರಿಂಗ್ ಕಾಲೇಜ್‌ನಲ್ಲಿ ಇಂಜನೀಯರಿಂಗ್ ಶಿಕ್ಷಣದ ವಿವಿಧ ವಿಭಾಗಗಳಲ್ಲಿ ಪದವಿ ಪೊರೈಸಿದ ೩೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರ ಸ್ವೀಕರಿಸಿ ಹರ್ಷಿಸಿದರು. ಉಪಕುಲಪತಿ ಡಾ.ಸುರೇಶ ನಾಡಗೌಡರ ಡಾ.ಪರಶುರಾಮ ಬಾರ್ಕಿ, ಉಪನ್ಯಾಸಕ ವರ್ಗ ಇದ್ದರು.ಪೋಟೊ. ಲಕ್ಷ್ಮೇಶ್ವರದ ಕಮಲಾ ಮತ್ತು ವೆಂಕಪ್ಪ ಎಂ.ಅಗಡಿ ಇಂಜನೀಯರಿಂಗ್ ಕಾಲೇಜ್‌ನಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಸುರೇಶ ನಾಡಗೌಡರ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಸತತ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಎಂಜಿನಿಯರಿಂಗ್ ಪದವಿ ಉಜ್ವಲ ಭವಿಷ್ಯದ ಮೈಲುಗಲ್ಲಾಗಿದೆ. ಇಂದಿನ ಸ್ಪಧಾತ್ಮಕ ಜಗತ್ತಿನಲ್ಲಿ ನೀವು ಕೈಗೊಳ್ಳುವ ಅಚಲ ನಿರ್ಧಾರ ಮುಖ್ಯವಾಗುತ್ತದೆ ಎಂದು ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡರ ಹೇಳಿದರು.

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸತತ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಎಂಜಿನಿಯರಿಂಗ್ ಪದವಿ ಉಜ್ವಲ ಭವಿಷ್ಯದ ಮೈಲುಗಲ್ಲಾಗಿದೆ. ಇಂದಿನ ಸ್ಪಧಾತ್ಮಕ ಜಗತ್ತಿನಲ್ಲಿ ನೀವು ಕೈಗೊಳ್ಳುವ ಅಚಲ ನಿರ್ಧಾರ ಮುಖ್ಯವಾಗುತ್ತದೆ ಎಂದು ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡರ ಹೇಳಿದರು.

ಶನಿವಾರ ಕಮಲಾ ಮತ್ತು ವೆಂಕಪ್ಪ ಎಂ. ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ೨೦೨೫ರಲ್ಲಿ ತಾಂತ್ರಿಕ ಶಿಕ್ಷಣದ ವಿವಿಧ ವಿಭಾಗಗಳಲ್ಲಿ ಪದವಿ ಪೂರೈಸಿದ ೩೪೦ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಆಧುನಿಕ ತಾಂತ್ರಿಕ ಮತ್ತು ಔದ್ಯೋಗಿಕ ಯುಗದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿದ್ದರೂ ಸ್ಪರ್ಧಾತ್ಮಕ ಮನೋಭಾವ ಅಗತ್ಯವಾಗಿದೆ. ವಿದ್ಯಾರ್ಥಿ ಜೀವನ (ಪದವಿ) ದ ನಂತರ ನಿಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ. ನಿಮ್ಮ ಸುಂದರ ಭವಿಷ್ಯಕ್ಕಾಗಿ ಪಾಲಕರು ಹತ್ತಾರು ಆಸೆ-ಕನಸು ಹೊತ್ತು ತಮ್ಮನ್ನೇ ಸಮರ್ಪಿಸಿಕೊಂಡಿರುತ್ತಾರೆ. ಜೀವನದಲ್ಲಿ ಕೀಳರಿಮೆ ಬಿಟ್ಟು ದೃಢ ನಿರ್ಧಾರ, ಪ್ರಯತ್ನ, ಶಿಸ್ತು ರೂಢಿಸಿಕೊಳ್ಳಿ. ಕಲಿತ ಶಾಲೆ-ಕಾಲೇಜು, ಶಿಕ್ಷಕರು, ಪಾಲಕರ ಬಗ್ಗೆ ಸದಾ ಪ್ರೀತಿ, ಗೌರವವಿರಲಿ. ವಿದೇಶಕ್ಕೆ ಹೋದವರು ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ತಳ್ಳದಿರಿ, ಪಾಲಕರ ನಿರ್ಲಕ್ಷ್ಯ ಈಗ ಕಾನೂನು ಅಪರಾಧ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ ಮಾತನಾಡಿದರು. ಯುವ ಎಂಜಿನಿಯರುಗಳು ದೇಶದ ವಿವಿಧ ಕ್ಷೇತ್ರಗಳಲ್ಲಿ ಹೊಸ ತಂತ್ರಜ್ಞಾನ ಕಂಡು ಹಿಡಿದು ದೇಶದ ಅಭಿವೃದ್ಧಿಗೆ ಶ್ರೇಷ್ಠ ಕೊಡುಗೆ ಸಲ್ಲಿಸಬೇಕು. ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೇ ನಮ್ಮ ಭಾಷೆ, ಸಂಸ್ಕೃತಿ, ಸಂಪ್ರದಾಯ, ಸಮಾಜ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು. ದಿ. ವೆಂಕಪ್ಪ ಅಗಡಿಯವರು ಗ್ರಾಮೀಣ ಭಾಗದ ಬಡ, ರೈತರ ಮಕ್ಕಳು ಎಂಜಿನಿಯರಿಂಗ್ ಶಿಕ್ಷಣ ಹೊಂದಬೇಕು ಎಂಬ ಸದುದ್ದೇಶದಿಂದ ಸ್ಥಾಪಿಸಿದ ಅಗಡಿ ಸಂಸ್ಥೆಯು ೨ ದಶಕಗಳಿಂದ ಶಿಕ್ಷಣ ರಂಗದಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ವೇದಿಕೆ ಮೇಲೆ ಡಾ.ಎನ್. ಹಯವದನ, ಡಾ. ಸುಭಾಸ ಮೇಟಿ, ಪ್ರೊ. ವಿಕ್ರಂ ಶಿರೋಳ, ಪ್ರೊ. ಸ್ವಪ್ನ ಚನ್ನಗೌಡರ, ಡಾ.ಅರುಣ ಕುಂಬಿ, ಡಾ. ಆರ್.ಎಂ. ಪಾಟೀಲ, ಡಾ. ಸಂತೋಷ ಬುಜರಿ, ಡಾ. ರಾಜಶೇಖರ ಕುಣಬೇವು, ಡಾ.ಶ್ರೀನಿವಾಸ್ ಆರ್, ಡಾ. ಗಿರೀಶ ಯತ್ನಳ್ಳಿ, ರವಿ ಚೌವ್ಹಾಣ, ಮುಕುಂದ ಡಿ, ಪ್ರೊ. ಸೋಮಶೇಖರ ಕೆರಿಮನಿ, ಪ್ರೊ.ಎಸ್.ಎಫ್. ಕೊಡ್ಲಿ, ಪ್ರೊ. ಅರುಣಕುಮಾರ ಸೇರಿ ವಿವಿಧ ವಿಭಾಗಗಳ ಉಪನ್ಯಾಸಕರು, ಪಾಲಕರು ಇದ್ದರು. ಪ್ರೊ. ಬಸವರಾಜ ಸೊರಟೂರ, ವಿದ್ಯಾರ್ಥಿ ಅಪೂರ್ವ, ಸೃಷ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ