ವಿಶ್ವ ರಂಗಭೂಮಿ ದಿನ । ರಂಗ ಸಾಧಕರಿಗೆ ಸನ್ಮಾನ
ರಂಗಭೂಮಿಯು ಭಾಷೆ, ಸಂಸ್ಕೃತಿ ಮತ್ತು ಕಲೆ ಬಿಂಬಿಸುವ ಮಾಧ್ಯಮವಾಗಿದ್ದು ಇದರ ಉದ್ದೇಶ ಮನರಂಜನೆ ಆದರೂ ಈ ಮಾಧ್ಯಮ ಗಂಭೀರ ವಿಚಾರಗಳಿಂದ ಪ್ರೇಕ್ಷಕರನ್ನು ಸೆಳೆದು ವಿಚಾರಶೀಲರನ್ನಾಗಿ ಮಾಡುತ್ತಿದೆ ಎಂದು ಸಮಾಜ ವಿಜ್ಞಾನಿ ಹಾಗೂ ಎನ್ಎಸ್ಎಎಸ್ ರಾಜ್ಯ ಘಟಕ ಪ್ರಶಸ್ತಿ ಪುರಸ್ಕೃತ ಡಾ.ಡಿ.ಧರಣೇಂದ್ರಯ್ಯ ಹೇಳಿದರು.
ನಗರದ ಗಿರೀಶ ಬಿಇಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಳವಿಭಾಗಿ ಶ್ರೀ ರಂಗನಾಥಸ್ವಾಮಿ ಸಾಂಸ್ಕೃತಿಕ ಕಲಾಸಂಘ ಹಾಗೂ ಗಿರೀಶ ಬಿಇಡಿ ಶಿಕ್ಷಣ ಮಹಾವಿದ್ಯಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆ ಹಾಗೂ ರಂಗ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಚಲನಚಿತ್ರ, ದೂರದರ್ಶನದಂತಹ ದೃಶ್ಯ ಮಾಧ್ಯಮದ ಭರಾಟೆಯಲ್ಲಿಯೂ ಸಹ ರಂಗಭೂಮಿ ತನ್ನ ನೆಲೆಯನ್ನು ಗಟ್ಟಿಮಾಡಿಕೊಂಡಿದೆ. ಆಧುನಿಕ ಜಗತ್ತು ಒಡ್ಡುವ ಸಮಸ್ಯೆ, ಸವಾಲುಗಳಿಗೆ ರಂಗಭೂಮಿ ಉತ್ತರ ನೀಡಬೇಕಿದೆ. ರಂಗಭೂಮಿಗೆ ಇಂದು ಉತ್ತಮ ನಟನೆ, ಅಭಿನಯ, ನಾಟಕ ರಚನೆ, ಆಧುನಿಕ ತಂತ್ರಜ್ಞಾನದಿಂದ ಕೂಡಿದ ಥಿಯೇಟರ್ಗಳ ನಿರ್ಮಾಣದ ಅಗತ್ಯವಿದೆ. ರಂಗಭೂಮಿ ಮನರಂಜನೆಯ ಜೊತೆಗೆ ಮನುಕುಲಕ್ಕೆ ಬೇಕಾದ ಸಹಬಾಳ್ವೆ, ನೆಮ್ಮದಿ, ಸಾಂತ್ವನ ನೀಡುತ್ತದೆ ಎಂದರು.
ಪ್ರಾಂಶುಪಾಲೆ ಡಾ. ಎಂ.ಎ.ಸುಧಾ ಮಾತನಾಡಿ, ರಂಗಭೂಮಿಯು ಸಾಮಾನ್ಯ ಜನರಲ್ಲಿದ್ದ ಅಂಧಕಾರ, ಮೂಢನಂಬಿಕೆ, ಕಂದಾಚಾರ, ರೂಡಿ ಸಂಪ್ರದಾಯಗಳನ್ನು ಹೋಗಲಾಡಿಸುತ್ತದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ, ಹಿರಿಯ ಉಪನ್ಯಾಸಕಿ ಡಿ.ವೇದಾ, ಉಪನ್ಯಾಸಕರಾದ ಬಿ.ಸಿ.ವನಿತಾ, ಲೋಕೇಶ್, ಪ್ರಮೋದ್, ಮಂಜು, ವಿಜಯಶ್ರೀ, ಕುಶಾ.ಜಿಎಸ್,ಆಲಿಂ, ಸೈಯದ್ ಯಾಯಿಯ್ಯ, ಸುದೀಪ್, ದಾನನಗೌಡ, ಮಂಗಳ ಇದ್ದರು.