ಕಳವು ಪ್ರಕರಣ: ₹24.75 ಲಕ್ಷ ಮೌಲ್ಯದ ಆಭರಣ, 15 ಬೈಕ್‌ ವಶ

KannadaprabhaNewsNetwork |  
Published : Jul 12, 2026, 03:30 AM IST
ಫೋಟೋವಿವರ- (10ಎಚ್‌ಪಿಟಿ3) ವಿಜಯನಗರ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 7 ಜನರನ್ನು ಬಂಧಿಸಿದ್ದು. ಬಂಧಿತ ಆರೋ ಪಿಗಳಿಂದ 24.75 ಲಕ್ಷ ರೂ ಮೌಲ್ಯದ 165 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 15 ಬೈಕ್ ಗಳನ್ನು ವಶಪಡಿಸಿಕೊಂಡಿರುವುದು | Kannada Prabha

ಸಾರಾಂಶ

ಆರೋಪಿಗಳಿಂದ ₹24.75 ಲಕ್ಷ ಮೌಲ್ಯದ 165 ಗ್ರಾಂ ತೂಕದ ಚಿನ್ನಾಭರಣ, 15 ಬೈಕ್ ವಶಪಡಿಸಿಕೊಂಡಿದ್ದಾರೆ.

ಹೊಸಪೇಟೆ: ವಿಜಯನಗರ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿಜಯನಗರ ಜಿಲ್ಲೆಯ ಹೊಸಪೇಟೆ, ಹರಪನಹಳ್ಳಿ ಉಪವಿಭಾಗದ ವ್ಯಾಪ್ತಿ ನಡೆದ ಐದು ಕಳ್ಳತನ ಪ್ರಕರಣ ಭೇದಿಸಿ, 7 ಜನರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹24.75 ಲಕ್ಷ ಮೌಲ್ಯದ 165 ಗ್ರಾಂ ತೂಕದ ಚಿನ್ನಾಭರಣ, 15 ಬೈಕ್ ವಶಪಡಿಸಿಕೊಂಡಿದ್ದಾರೆ.

ಎಸ್ಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಎಸ್.ಜಾಹ್ನವಿ ಮಾಹಿತಿ ನೀಡಿದರು.

ಹೊಸಪೇಟೇ ವಿಭಾಗ:

ಜಿಲ್ಲೆಯ ಹೊಸಪೇಟೆ ಉಪವಿಭಾಗದ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಏ.20ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣದ ವಿಚಾರಣೆ ಕೈಗೊಂಡಿದ್ದ ಪೊಲೀಸರು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಎಸ್.ಶ್ರೀನಿವಾಸ, ಬಾಲಕನನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹4.60 ಲಕ್ಷ ಮೌಲ್ಯದ 33 ಗ್ರಾಂ ಚಿನ್ನಾಭರಣ, ₹6.40 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನ ಸೇರಿ ₹11 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿತ್ತವಾಡಿ ಠಾಣೆ:

ಸ್ಥಳೀಯ ಚಿತ್ತವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಿಪ್ರಿಯಾ ಕಲ್ಯಾಣ ಮಂಟಪದಲ್ಲಿ ಕಳೆದ ಮೇ 28ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರದ ಹೊಸ ಅಮರಾವತಿ ನಿವಾಸಿ ಬಿ.ವಿ. ಗುರುರಾಜ್ ಎಂಬಾತನನ್ನು ಬಂಧಿಸಿ, ₹2.50 ಲಕ್ಷ ಮೌಲ್ಯದ 17.75 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ಕಾರ್ಯಾಚರಣೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸೈಯದ್ ಮೆಹಬೂಬ್ ಖಾದ್ರಿ ಎಂಬಾತನನ್ನು ಬಂಧಿಸಿ, ₹4.75 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಹರಪನಹಳ್ಳಿ ವಿಭಾಗ:

ಹರಪನಹಳ್ಳಿ ಉಪ ವಿಭಾಗದ ಹರಪನಹಳ್ಳಿ ಠಾಣೆ ವ್ಯಾಪ್ತಿಯ ತರಳುಬಾಳು ಕಲ್ಯಾಣ ಮಂಟಪದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಮಧ್ಯಪ್ರದೇಶ ಮೂಲದ ವಾಖರ್ ಅಹಮದ್ ಶೇಖ್, ಮುಜಾವ‌ರ್ ಜಾಫರ್ ಎಂಬವರನ್ನು ಬಂಧಿಸಿ, ₹3.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಹಡಗಲಿ ಠಾಣೆ:

ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿ ಕಳೆದ ಜೂ.22ರಂದು ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಮೀರಾಕೊರನಹಳ್ಳಿಯ ಕೋಟೇಶ ಹುಲಿಕಟ್ಟಿ ಎಂಬಾತನನ್ನು ಬಂಧಿಸಿ, ₹3 ಲಕ್ಷ ಮೌಲ್ಯದ 52 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಅಡಿಷನಲ್ ಎಸ್ಪಿ ಜಿ.ಮಂಜುನಾಥ, ಹರಪನಹಳ್ಳಿ ಡಿವೈಎಸ್‌ಪಿ ಡಾ.ಸಂತೋಷ್ ಚವ್ಹಾಣ್, ಸಿಪಿಐಗಳಾದ ಫೈಜುಲ್ಲಾ, ಟಿ.ಸೋಮ್ಲಾನಾಯ್, ಎಂ.ಎಸ್.ಹೂಗಾರ್, ಮಹಾಂತೇಶ ಸಜ್ಜನ್, ಗುರುರಾಜ ಕಟ್ಟಿಮನಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ವದಂತಿಗೆ ಕಿವಿಗೊಡದಿರಿ: ಧರ್ಮಜ ಉತ್ತಪ್ಪ
ಅಡಕೆ ಸಾಗಾಟ ಕಂಟೈನರ್‌ಗೆ ‘ಮಹಾ’ ತಡೆ ನಿವಾರಣೆ: ಡೀವಿ