ವರ್ತಮಾನದಲ್ಲಿ ಮಾದರಿ ವ್ಯಕ್ತಿಗಳೇ ಇಲ್ಲ: ಡಿ.ಮಂಜುನಾಥ

KannadaprabhaNewsNetwork |  
Published : Feb 16, 2024, 01:55 AM IST
ಪೊಟೋ: 15ಎಸ್‌ಎಂಜಿಕೆಪಿ01ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ‌ ನಾಗಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ದತ್ತಿ ಉಪನ್ಯಾಸ‌ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ‌ ನಾಗಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ದತ್ತಿ ಉಪನ್ಯಾಸ‌ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವರ್ತಮಾನದಲ್ಲಿ ಮಾದರಿ ಎನ್ನುವ ವ್ಯಕ್ತಿಗಳು ಇಲ್ಲದಂತಾಗಿದ್ದು, ಯೋಗ್ಯ ಗುರುವಿಲ್ಲದೆ ವಿದ್ಯಾರ್ಥಿಗಳಿಗೆ ಸರಿ ದಾರಿ ಇಲ್ಲದಂತಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ್ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಬುಧವಾರ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ‌ ನಾಗಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ದತ್ತಿ ಉಪನ್ಯಾಸ‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ದತ್ತಿಗೆ ಇಟ್ಟ ಹಣದಿಂದ ಬರುವ ಬಡ್ಡಿ, ಕಾರ್ಯಕ್ರಮ ನಡೆಸಲು ಸಾಕಾಗುತ್ತಿಲ್ಲ. ಹಾಗಾಗಿ ಎರಡೂ ಮೂರು ದತ್ತಿ ಸೇರಿಸಿ ವಿಶೇಷ ಕಾರ್ಯಕ್ರಮ ಮಾಡುತ್ತೇವೆ. ಪ್ರಸ್ತುತ 150ಕ್ಕೂ ಹೆಚ್ಚು ದತ್ತಿಗಳು ಶಿವಮೊಗ್ಗ ಜಿಲ್ಲಾ ಕಸಾಪದಲ್ಲಿ ಸ್ಥಾಪಿತವಾಗಿದೆ ಎಂದು ಹೇಳಿದರು.

ಸಂದೇಶ ಉಪಾಧ್ಯ ಅವರು ತಮ್ಮ ತಂದೆ ಶಂಕರನಾರಾಯಣ ಉಪಾಧ್ಯ ಅವರ ಸ್ಮರಣೆಗಾಗಿ ನೀಡಿರುವ ದತ್ತಿ ಆಶಯದಂತೆ ಸಮಾಜ ಸೇವೆಯ ಸಾರ್ಥಕತೆ ವಿಚಾರವಾಗಿ ನ್ಯಾಯವಾದಿ ಪರಿಮಳ.ಆರ್. ಹಸೂಡಿ ಮಾತನಾಡಿ, ಇಂದು ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ, ಆರೋಗ್ಯ ಸೌಲಭ್ಯ ಉಚಿತವಾಗಿ ದೊರೆಯುತ್ತಿದೆ. ಬೇರೆ ಬೇರೆ ಸಂಸ್ಥೆಗಳು ಫೌಂಡೇಷನ್ ಮೂಲಕ ಉಚಿತ ಸೇವೆ ನೀಡುವ ಮೂಲಕ ಸಮಾಜ ಸೇವೆ ಸಾರ್ಥಕತೆ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದರು.

ಎಚ್ಚಪ್ಪರ ಎಚ್ಚಜ್ಜ ಮತ್ತು ಎಚ್ಚಪ್ಪರ ಹನುಮಮ್ಮ ದತ್ತಿನಿಧಿ ಆಶಯದಂತೆ ವಚನ ಸಾಹಿತ್ಯಕ್ಕೆ ಅಕ್ಕಮಹಾದೇವಿ ಕೊಡುಗೆ ಕುರಿತು ಸಾಹಿತಿ ಡಾ.ಬಿ.ಎನ್.ತಂಬೂಳಿ ಮಾತನಾಡಿ, ಅಕ್ಕಮಹಾದೇವಿ ಕನ್ನಡದ ಮೊದಲ ವಚನಗಾರ್ತಿಯಾಗಿದ್ದು ಮೃದು ಮಧುರವಾದ ವಚನಗಳ ಮೂಲಕ ನೈತಿಕ‌ ಮತ್ತು ಆಧ್ಯಾತ್ಮಿಕ ಜೀವನ ನಡೆಸಿದರು. ಆಸೆಯ ಕುರಿತಾಗಿ ಹೇಳುತ್ತಾ ಆಸೆ ಎಂಬುದು ಜೇಡರ ಬಲೆ ಇದ್ದಂತೆ ನಮ್ಮನ್ನು ಸುತ್ತಿ ಸಾಯಿಸುತ್ತದೆ ಎಂದಿದ್ದಾರೆ. ಒಟ್ಟಿನಲ್ಲಿ ಕನ್ನಡ ಸಾಹಿತ್ಯಕ್ಕೆ ಅಕ್ಕಮಹಾದೇವಿ ಕೊಡುಗೆ ಬಹಳ ದೊಡ್ಡದು ಎಂದರು.

ಕಾರ್ಯಕ್ರಮದಲ್ಲಿ ನಾಗಸುಬ್ರಹ್ಮಣ್ಯ ಸೇವಾ ಸಮಿತಿ ಅಧ್ಯಕ್ಷ ರಾಮಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷೆ ಮಹಾದೇವಿ, ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಪ್ರಧಾನ ಕಾರ್ಯದರ್ಶಿ ಶಿವಪ್ಪಗೌಡ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಕೆ.ಜಿ.ವೆಂಕಟೇಶ್, ವಿಜಯಲಕ್ಷ್ಮಿ ಸೇರಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು