ಕನ್ನಡಪ್ರಭ ವಾರ್ತೆ ಉಡುಪಿ
ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್.ಸಿ.ಎಸ್.ಪಿ. - ಟಿ.ಎಸ್.ಪಿ. ಯೋಜನೆಯ ಸುಮಾರು 25,000 ಕೋಟಿ ರು. ಹಣ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ದಲಿತರ ವಿವಿಧ ಅಭಿವೃದ್ಧಿ ನಿಗಮಗಳಿಗೆ ತೆಗೆದಿರಿಸಲಾಗಿದ್ದ ಅನುದಾನದಲ್ಲಿ ಶೇ. 25ರಷ್ಟನ್ನು ಮಾತ್ರ ಬಳಕೆ ಮಾಡಿದೆ. ಆದ್ದರಿಂದ ಇಂದು 25 ಪರ್ಸೆಂಟ್ ಸರ್ಕಾರ. ಉಳಿದ ಶೇ 75 ಅನುದಾನವನ್ನು ತನ್ನ ಗ್ಯಾರಂಟಿ ಯೋಜನೆಗೆ ಬಳಸಿ, ದಲಿತರಿಗೆ, ಹಿಂದುಳಿದವರಿಗೆ ಮೋಸ ಮಾಡಿದೆ. ಇದು ದಲಿತ ವಿರೋಧಿ ಸರ್ಕಾರ ಎಂದರು.ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿಯೂ ದಲಿತರಿಗಾಗಿ ತೆಗೆದಿರಿಸಿದ್ದ ಶೇ. 97 ಅನುದಾನ ಸದ್ಬಳಕೆ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ 2023ರಲ್ಲಿ ದಲಿತರ ಮೀಸಲು ಅನುದಾನದಲ್ಲಿ 11,000 ಕೋಟಿ ಮತ್ತು 2024ರಲ್ಲಿ 14,000 ಕೋಟಿ ರು.ಗಳನ್ನು ಗ್ಯಾರಂಟಿಗೆ ಬಳಸಿದೆ. ಯಾಕೆಂದರೆ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಇದು ಖಜಾನೆ ಖಾಲಿ ಸರ್ಕಾರ ಎಂದು ವ್ಯಂಗ್ಯವಾಡಿದರು.
ಸಂಸದ ರಮೇಶ್ ಜಿಗಜಿಣಗಿ ಮಾತನಾಡಿ, ಎಸ್ಸಿಎಸ್ಟಿ ಸಮುದಾಯಕ್ಕೆ ಅನುದಾನ ಮೀಸಲಿಡುವುದಕ್ಕಾಗಿಯೇ 7ಡಿ ಕಾಯ್ದೆ ಇದೆ, ಅದನ್ನೇ ನಾಶ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು, ಅವರಿಗೆ ದಲಿತರು ಪಾಠ ಕಲಿಸಬೇಕು ಎಂದರು.
ನಂತರ ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರ ಮೂಲಕ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.