ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು : ಸಂಸದ ಶೆಟ್ಟರ್

KannadaprabhaNewsNetwork |  
Published : Aug 03, 2024, 12:44 AM ISTUpdated : Aug 03, 2024, 11:33 AM IST
Jagadish shettar

ಸಾರಾಂಶ

 ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು.  

  ಬೆಳಗಾವಿ :  ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು. ರಾಜ್ಯದಲ್ಲಿ ಈಗ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಸ್ಪೀಕರ್ ಕಡೆಯಿಂದ ಚರ್ಚೆಯ ಪ್ರಸ್ತಾವನೆಯನ್ನು ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದ ಕುರಿತು ಸದನದಲ್ಲಿ ಉತ್ತರ ಕೊಡಲಿಲ್ಲ. ಮರುದಿನ ಪತ್ರಿಕಾಗೋಷ್ಠಿ ನಡೆಸಿ ಪತ್ರಿಕೆಗಳಲ್ಲಿ ಪುಟ ಜಾಹಿರಾತು ನೀಡಿ ಉತ್ತರ ಕೊಟ್ಟಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದು, ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸಲಿದೆ. ಇದರಲ್ಲಿ ಜೆಡಿಎಸ್‌ ಭಾಗವಹಿಸಲಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೋರಾಟಗಾರರ ಮೇಲೆ ಹಲ್ಲೆ, ಕೆಂಗನಾಳ ಕಿಡಿ
ಬಿಡಿಸಿಸಿ ಬ್ಯಾಂಕ್ ಯುನಿಯನ್‌ ಅಧ್ಯಕ್ಷನ ಮೇಲೆ ಹಲ್ಲೆ