ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕುಮಟ್ಟದ ಅಧಿಕಾರಿಗಳ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಬರಗಾಲದ ತೀವ್ರತೆ ಹೆಚ್ಚಾಗುತ್ತಿದ್ದು, ಆರಂಭದಲ್ಲಿಯೇ ನೀರಿನ ತೀವ್ರ ಸಮಸ್ಯೆ ತಲೆದೋರುತ್ತಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ತಾಲೂಕಿನಾದ್ಯಂತ ಶಾಶ್ವತ ನೀರಾವರಿ ಮೂಲಕ ನೀರಿನ ಸಮಸ್ಯೆ ಪರಿಹಾರಕ್ಕೆ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಈ ದಿಸೆಯಲ್ಲಿ ಅಧಿಕಾರಿಗಳು ಚುನಾವಣೆಯ ನೆಪದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳದೇ, ನೀರಿನ ಬವಣೆಯಿಂದ ಜನತೆ ಬಳಲದಂತೆ ಸಮರ್ಪಕ ಸರಬರಾಜಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಗ್ರಾಮೀಣ ಭಾಗದಲ್ಲಿ ರೈತರು ವಿದ್ಯುತ್ ಸಮಸ್ಯೆ ಕೊರತೆಯಿಂದ ಸಂಕಷ್ಟ ಅನುಭವಿಸದಂತೆ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು. ಜನಸಾಮಾನ್ಯರ ಜತೆ ಅಧಿಕಾರಿಗಳು ಸಂಯಮದಿಂದ ವರ್ತಿಸಬೇಕು, ಸೌಲಭ್ಯಕ್ಕಾಗಿ ಕಚೇರಿಗೆ ಧಾವಿಸುವ ಜನತೆಯನ್ನು ಪದೇಪದೇ ಅಲೆದಾಡಿಸದಂತೆ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಬೇಕು. ಕರ್ತವ್ಯ ಪ್ರಾಮಾಣಿಕವಾಗಿ ನಿರ್ವಹಿಸಿದಲ್ಲಿ ಮಾತ್ರ ದೇವರು ಮೆಚ್ಚುತ್ತಾನೆ. ಬಡಜನತೆ, ರೈತರ ಸ್ಥಾನದಲ್ಲಿದ್ದು ಯೋಚಿಸಿದಾಗ ಅವರ ಸಂಕಷ್ಟ ಅರ್ಥವಾಗಲಿದೆ ಎಂದು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಶೇ.90 ಮನೆಗೆ ನಲ್ಲಿ ಅಳವಡಿಸಲಾಗಿದೆ. ಬಹುಗ್ರಾಮ ಕುಡಿಯವ ನೀರಿನ ಪೈಪ್ಲೈನ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ವಿದ್ಯುತ್ ಸಮಸ್ಯೆ ತಲೆದೋರದಿದ್ದಲ್ಲಿ ಸಂಪರ್ಕದ ಮೂಲಕ ನೀರು ವಿತರಿಸಲಾಗುವುದು ಎಂದು ಯೋಜನೆ ಎಇಇ ತಿಳಿಸಿದರು.
ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಪೂರ್ಣಗೊಂಡಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಮೆಸ್ಕಾಂ ವಿಳಂಬ ಧೋರಣೆಯಿಂದಾಗಿ ಸಮಸ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ಸಭೆ ಗಮನ ಸೆಳೆದರು. ಆಗ ಸ್ಥಳದಲ್ಲಿದ್ದ ಮೆಸ್ಕಾಂ ಎಇಇ ಶ್ರೀಧರ್ ನುರಿತ ಸಿಬ್ಬಂದಿ ಕೊರತೆಯಿಂದಾಗಿ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಭರತ್, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲ. 16 ಬೋರ್ವೆಲ್ ಮೂಲಕ ಸಮರ್ಪಕ ಸರಬರಾಜು ನಡೆಯುತ್ತಿದೆ. ಹೊಸದಾಗಿ 5 ಬೋರ್ವೆಲ್ ತೆಗೆಸಲಾಗಿದೆ. ಟ್ಯಾಂಕ್ಗೆ ಸಾಗಿಸಲು ಅನಿಯಮಿತ ವಿದ್ಯುತ್ ನಿಲುಗಡೆ ಸಮಸ್ಯೆ ಆಗುತ್ತಿದೆ ಎಂದರು. ಆಗ ಶಾಸಕರು, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ ವಹಿಸದೇ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
- - -
- ಬಿ.ವೈ.ವಿಜಯೇಂದ್ರ, ಶಾಸಕ, ಶಿಕಾರಿಪುರ ಕ್ಷೇತ್ರ.
ಫೋಟೋ ಕಾಪ್ಟನ್ -- ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ವಿಜಯೇಂದ್ರ ಮಾತನಾಡಿದರು. [ಫೋಟೋ ಫೈಲ್ ನಂ.1 ಕೆ.ಎಸ್.ಕೆ.ಪಿ 2]