ತೊರವಿ ಭಾಗಕ್ಕೂ ನೀರು ಕಲ್ಪಿಸಲು ಯೋಜನೆ

KannadaprabhaNewsNetwork |  
Published : Apr 12, 2024, 01:03 AM IST
ಕಾಂಗ್ರೆಸ್ ಅಭ್ಯರ್ಥಿ ರಾಜೂ ಆಲಗೂರ ಪರ ತೊರವಿಯಲ್ಲಿ ಸಚಿವ ಎಂ ಬಿ ಪಾಟೀಲ್ ಮತಯಾಚನೆ. | Kannada Prabha

ಸಾರಾಂಶ

ವಿಜಯಪುರ: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ತಾಲೂಕಿನ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಬಲಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ ಎಂದು ದೂರಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ತಾಲೂಕಿನ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಬಲಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ ಎಂದು ದೂರಿದರು.ಚುನಾವಣೆ ಬಾಂಡ್ ಇವರ ನಿಜವಾದ ಮುಖವಾಡವನ್ನು ಬಯಲು ಮಾಡಿದೆ ಎಂದ ಅವರು, ನಾವು ಕೊಟ್ಟ ಭರವಸೆ ಈಡೇರಿಸಿ ಮತ ಕೇಳಲು ಬಂದಿದ್ದೇವೆ. ಸಬ್ ಕಾ ಸಾಥ್ ಎಂದವರು ಈಗ ದೇಶದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಈ ಸಲ ಅವರಿಗೆ ಪ್ರಸ್ತಾಪಿಸಲು ಯಾವುದೇ ವಿಷಯಗಳಿಲ್ಲ. ಯಾವ ಗಾಳಿಯೂ ಇಲ್ಲ. ನಿಮ್ಮೂರಿನ ಮಗನಾದ ಪ್ರೊ.ರಾಜು ಆಲಗೂರ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ತೊರವಿ ಭಾಗಕ್ಕೂ ನೀರು ನೀಡುವ ಯೋಜನೆ ರೂಪಿಸುತ್ತಿದ್ದೇವೆ. ನಮ್ಮೂರಿನ ಋಣ ತೀರಿಸುವೆ. ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಗೆಜೆಟ್ ನೋಟಿಫಿಕೇಷನ್ ಆದರೆ ಇಡೀ ಜಿಲ್ಲೆ ದೇಶದಲ್ಲಿಯೇ ಶ್ರೀಮಂತವಾಗಲಿದೆ. ಈ ಕೆಲಸ ಜಾರಿಯಾಗಬೇಕಾದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ಪಕ್ಷಾತೀತವಾಗಿ ಗ್ರಾಮದವರು ತಮಗೆ ಬೆಂಬಲಿಸಬೇಕು. ಲೋಕಸಭೆಯಲ್ಲಿ ನಿಮ್ಮ ಭರವಸೆಗೆ ತಕ್ಕಂತೆ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ಸಿನ ಅಭಿವೃದ್ಧಿ ಕಾರ್ಯಗಳು ನಮ್ಮ ಬೆನ್ನಿಗಿವೆ. ಜಿಲ್ಲೆಯಲ್ಲಿ ಪಕ್ಷದ ಪರ ಅಲೆ ಇದೆ. ಕಳೆದ 25 ವರ್ಷಗಳ ನಂತರ ಈಗ ಬದಲಾವಣೆ ಗಾಳಿ ಬೀಸಿದೆ. ತೊರವಿ ಗ್ರಾಮಸ್ಥರು ಕಾಂಗ್ರೆಸ್ಸಿಗೆ ಸಂಪೂರ್ಣ ಬೆಂಬಲ ನೀಡಿ ಎಂದು ಮನವಿ ಮಾಡಿದರು. ಮುಖಂಡ ಎನ್.ಎಸ್. ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಮುಖಂಡರಾದ ಹಮೀದ್ ಮುಶ್ರೀಫ್, ನರಸಿಂಗ ಮಹಾರಾಜರು, ಭೀಮು ಮಹಾರಾಜರು, ಸುರೇಶಗೌಡ ಪಾಟೀಲ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ