ದಸರಾ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

KannadaprabhaNewsNetwork |  
Published : Oct 23, 2023, 12:16 AM IST
22ಡಿಡಬ್ಲೂಡಿ14ಧಾರವಾಡದ ಮಾರುಕಟ್ಟೆಯಲ್ಲಿ ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೂ-ಹಣ್ಣು ಮಾರಾಟ | Kannada Prabha

ಸಾರಾಂಶ

ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಹಬ್ಬದ ತಯಾರಿ ನಡೆಸಿದ್ದಾರೆ. ನಗರದ ಸೂಪರ್ ಮಾರ್ಕೆಟ್, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ಸುಭಾಷ್ ರಸ್ತೆ, ಟಿಕಾರೆ ರಸ್ತೆ, ಗಾಂಧಿ ಚೌಕ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಪೂಜೆಗಾಗಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂತು.

ಕನ್ನಡಪ್ರಭ ವಾರ್ತೆ ಧಾರವಾಡ ವಿಜಯ ದಶಮಿಯ ಹಬ್ಬದ ಆಯುಧ ಪೂಜೆ ಹಿನ್ನೆಲೆಯಲ್ಲಿ ಧಾರವಾಡ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ ಅಧಿಕ ಸಂಖ್ಯೆಯಲ್ಲಿ ಸೇರುತ್ತಿದ್ದು, ಮುಗಿಬಿದ್ದು ಜನರು ಪೂಜಾ ಸಾಮಗ್ರಿಗಳನ್ನು ಖರೀದಿಸಿದರು. ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಹಬ್ಬದ ತಯಾರಿ ನಡೆಸಿದ್ದಾರೆ. ನಗರದ ಸೂಪರ್ ಮಾರ್ಕೆಟ್, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ಸುಭಾಷ್ ರಸ್ತೆ, ಟಿಕಾರೆ ರಸ್ತೆ, ಗಾಂಧಿ ಚೌಕ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಪೂಜೆಗಾಗಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂತು. ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಬಿಲ್ವಪತ್ರೆ, ಬನ್ನಿಪತ್ರೆ ಹಾಗೂ ಆರಿಪತ್ರೆ ಸೇರಿದಂತೆ ಬಾಳಿಕಂಬ ಮತ್ತು ಜೋಳದ ದಂಟು ಹೆಚ್ಚಿನ ಸಂಖ್ಯೆಯಲ್ಲಿ ಜನರು ಖರೀದಿ ಮಾಡುತ್ತಾ ವ್ಯಾಪಾರಸ್ಥರ ಜೋತೆ ಚೌಕಾಸಿ ಮಾಡಿ ಹಣ ಉಳಿತಾಯ ಮಾಡಲು ಹರಸಾಹಸ ಪಡುತ್ತಿರುವುದು ಕಂಡುಬಂತು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ