ವೈದ್ಯರು, ಸಿಬ್ಬಂದಿ ವಿರುದ್ಧ ಎಸ್ಮಾಜಾರಿ ಸದ್ಯಕ್ಕಿಲ್ಲ

KannadaprabhaNewsNetwork |  
Published : Mar 06, 2026, 02:15 AM IST
ಫೋಟೊ 05 ಎಚ್,ಎನ್, ಎಮ್ 03 : ಹನುಮಸಾಗರದ ಶ್ರೀ ಅನ್ನದಾನೇಶ್ವರ ಮಠದಲ್ಲಿ ಎಸ್ಸೆಸ್ಸೆಎಲ್ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಾರ್ಯಾಗಾರವನ್ನು ನಡೆಸಲಾಯಿತು. | Kannada Prabha

ಸಾರಾಂಶ

ಸಂಧಾನಕ್ಕೆ ಬಗ್ಗದೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದು ಮಾ.11ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಮುಂದಾಗಿರುವ ರಾಜ್ಯ ಸರ್ಕಾರಿ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ವಿರುದ್ಧ ಎಸ್ಮಾ ಪ್ರಯೋಗದ ಬದಲು, ಮತ್ತೊಂದು ಸುತ್ತಿನ ಮನವೊಲಿಕೆ ಪ್ರಯತ್ನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಂಧಾನಕ್ಕೆ ಬಗ್ಗದೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದು ಮಾ.11ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಮುಂದಾಗಿರುವ ರಾಜ್ಯ ಸರ್ಕಾರಿ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ವಿರುದ್ಧ ಎಸ್ಮಾ ಪ್ರಯೋಗದ ಬದಲು, ಮತ್ತೊಂದು ಸುತ್ತಿನ ಮನವೊಲಿಕೆ ಪ್ರಯತ್ನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ವೈದ್ಯರ ಸಂಘ ಮತ್ತು ಎರಡೂ ಇಲಾಖಾ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಶೀಘ್ರ ಮತ್ತೊಂದು ಸುತ್ತಿನ ಸಭೆ ಕರೆದು ಮಾತನಾಡಲು, ವಸ್ತುಸ್ಥಿತಿ ವಿವರಿಸಿ ಮುಷ್ಕರ ನಡೆಸದಂತೆ ಮನವೊಲಿಸುವ ಪ್ರಯತ್ನ ಮಾಡಲು ಸಂಪುಟ ಅನುಮತಿ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಕಾಯಂ, ಗುತ್ತಿಗೆ ಆಥವಾ ತಾತ್ಕಾಲಿಕ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ಅಧಿಕಾರಿಗಳ ಸೇವೆಯನ್ನು ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ರಡಿ(ಎಸ್ಮಾ) ಅಧಿಸೂಚಿಸುವ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಆದರೆ, ಅಧಿಸೂಚಿಸುವ ಬದಲು ವೈದ್ಯರು ಮತ್ತು ವೈದ್ಯ ಸಿಬ್ಬಂದಿ, ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಆರೋಗ್ಯ ಸಚಿವರು ಮತ್ತೊಂದು ಸುತ್ತಿನ ಸಭೆ ನಡೆಸಿ ಮುಷ್ಕರ ನಡೆಸದಂತೆ ಮನವೊಲಿಸುವ ಪ್ರಯತ್ನ ನಡೆಸಬೇಕೆಂದು ಸಭೆ ತೀರ್ಮಾನಿಸಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು, ಔಷಧ ಕೊರತೆ ನೀಗಿಸಬೇಕು, ಜೇಷ್ಠತಾ ಪಟ್ಟಿ ಪರಿಷ್ಕರಣೆ ಮಾಡಬೇಕು, ಕಾಲಾಕಾಲಕ್ಕೆ ಬಡ್ತಿ ನೀಡಬೇಕು, ಸರ್ಕಾರಿ ಆಸ್ಪತ್ರೆಗಳಲ್ಲಿನ ಕರ್ತವ್ಯ ಅವಧಿಯ ನಂತರ ಖಾಸಗಿಯಾಗಿ ಪ್ರಾಕ್ಟೀಸ್‌ ಮಾಡುವಾಗ ಒಳರೋಗಿಗಳಿಗೆ ಚಿಕಿತ್ಸೆ ನೀಡಬಾರದೆಂಬ ಆದೇಶ ಹಿಂಪಡೆಯಬೇಕು, ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು, ಅಮಾನವೀಯ ವರ್ಗಾವಣೆ ತಪ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ವೈದ್ಯರು ಮತ್ತು ಸಿಬ್ಬಂದಿ ಮಾ.11ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ.

ಇತ್ತೀಚೆಗೆ ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಮ್ಮ ಬೇಡಿಕೆ ಈಡೇರಿಕೆಗೆ ಯಾವುದೇ ಸ್ಪಷ್ಟ ಭರವಸೆ ಸಿಗದ ಹಿನ್ನೆಲೆಯಲ್ಲಿ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸದ ಹೊರತು ಮುಷ್ಕರ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಎಸ್ಮಾ ಜಾರಿಯಾದರೂ ಸರಿ, ಬಂಧನ ಮಾಡಿದರೂ ಸರಿ ಎಂದು ಹೇಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಗೀತ ಜೀವನದ ಅವಿಭಾಜ್ಯ ಅಂಗ : ರಂಭಾಪುರಿ ಶ್ರೀ
ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣಿ: ಡಾ.ನಾಗಲಕ್ಷ್ಮಿ ಚೌಧರಿ