ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆಯಿದೆ: ಡಾ. ಶಿವಲಿಂಗ ಹೇಡೆ

KannadaprabhaNewsNetwork |  
Published : Jun 25, 2025, 11:47 PM IST
ಚಿತ್ರ 25ಬಿಡಿಆರ್6ಬೀದರ್‌ನ ಬಸವಗಿರಿಯಲ್ಲಿ ನಡೆದ ಮಾಸಿಕ ಶರಣ ಸಂಗಮ ಕಾರ್ಯಕ್ರಮವನ್ನು ಲೋಕೋಪಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಲ್ಲಿಕಾರ್ಜುನ ಮೋಳಕೇರಿ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಬಸವಾದಿ ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ ತುಂಬಿ ತುಳುಕುತ್ತಿದೆ ಎಂದು ಶಿಕ್ಷಕ ಡಾ.ಶಿವಲಿಂಗ ಹೇಡೆ ಹೇಳಿದರು.

ಬಸವಗಿರಿಯಲ್ಲಿ ನಡೆದ ಮಾಸಿಕ ಶರಣ ಸಂಗಮ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಬೀದರ್‌

ಬಸವಾದಿ ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ ತುಂಬಿ ತುಳುಕುತ್ತಿದೆ ಎಂದು ಶಿಕ್ಷಕ ಡಾ.ಶಿವಲಿಂಗ ಹೇಡೆ ಹೇಳಿದರು.

ಲಿಂಗಾಯತ ಮಹಾ ಮಠದಿಂದ ನಗರದ ಬಸವಗಿರಿಯಲ್ಲಿ ಸೋಮವಾರ ನಡೆದ ಶರಣ ಸಂಗಮ ಕಾರ್ಯಕ್ರಮದಲ್ಲಿ ‘ಶರಣರು ಮತ್ತು ಪರಿಸರ’ ಕುರಿತು ಉಪನ್ಯಾಸ ನೀಡಿ, ಶರಣರು ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ್ದರು. ಪಶು, ಪ್ರಾಣಿ, ಕ್ರಿಮಿ ಕೀಟ, ಸಸ್ಯ ಸಂಕುಲ ಸಮತೋಲನದಿಂದಿದ್ದರೆ ಜಗತ್ತು ಚೆನ್ನಾಗಿರುತ್ತದೆ. ಪರಿಸರದ ಮೇಲೆ ಮಾನವನ ದೌರ್ಜನ್ಯ ನಿಲ್ಲಬೇಕು. ಪಂಚಭೂತಗಳು ದೇವರ ಭಿಕ್ಷೆ, ಅವುಗಳನ್ನು ಕಲುಷಿತಗೊಳಿಸುವುದು ಮನುಷ್ಯನಿಗೆ ಸಲ್ಲದೆಂದರು ಎಂದು ಹೇಳಿದರು.

ಪ್ರಭುದೇವ ಸ್ವಾಮೀ ಸಾನಿಧ್ಯ ವಹಿಸಿ ಮಾತನಾಡಿ, ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭುದೇವರು ಸೇರಿದಂತೆ ಅನೇಕ ಶರಣರು ಪ್ರಕೃತಿ, ಗಿಡ ಮರಗಳ ಕುರಿತು ತಮ್ಮ ವಚನಗಳಲ್ಲಿ ಉಲ್ಲೇಖಿಸಿದ್ದಾರೆ ಹೇಳಿದರು.

ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಮೋಳಕೇರಿ, ಶಿಕ್ಷಕ ವೈಜಿನಾಥ ಹುಣಚಗೇರಿ, ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಪರಿಷತ್ ಸದಸ್ಯರಾಗಿ ನೇಮಕಗೊಂಡ ಹಾವಶೆಟ್ಟಿ ಪಾಟೀಲ್‌ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪಡೆದ ಶಿವಲಿಂಗ ಹೇಡೆ ಅವರಿಗೆ ಸನ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು.

ಮಾಣಿಕಪ್ಪ ಗೋರನಾಳೆ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ರಮೇಶ ಮಠಪತಿ ಉಪಸ್ಥಿತರಿದ್ದರು. ಚನ್ನಬಸಪ್ಪ ಹಂಗರಗಿ ಸ್ವಾಗತಿಸಿ ಜಗದೇವಿ ಜಗನ್ನಾಥ ಚಿಮಕೋಡೆ ಗುರುಪೂಜೆ ಹಾಗೂ ಭಕ್ತಿ ದಾಸೋಹಗೈದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ