-ಶಹಾಪುರ ನಗರದ ಅಂಜುಮನ್ ಶಾಲೆಯಲ್ಲಿ ಪೀಪಲ್ಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ
ಕನ್ನಡಪ್ರಭ ವಾರ್ತೆ ಶಹಾಪುರ
ರಕ್ತದಾನಕ್ಕಿಂತ ಮಹತ್ತರವಾದ ದಾನ ಇನ್ನೊಂದಿಲ್ಲ. ರಕ್ತಕ್ಕೆ ಯಾವುದೇ ಜಾತಿ, ಧರ್ಮಗಳಿಲ್ಲ. ಅದರ ಗುಣವೇ ಒಂದೇ ಇನ್ನೊಬ್ಬರ ಜೀವ ಉಳಿಸುವುದು ಎಂದು ಮುಸ್ಲಿಂ ಸಮುದಾಯದ ಮುಖಂಡ ಸೈಯದ್ ಮಹೇಮೂದ್ ಹುಸೇನಿ ಹೇಳಿದರು.ನಗರದ ಅಂಜುಮನ್ ಶಾಲೆಯಲ್ಲಿ ಪೀಪಲ್ಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಇತ್ತೀಚೆಗೆ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟ್ರಸ್ಟಿನ ಅಧ್ಯಕ್ಷ ಸೈಯದ್ ಇಸಾಕ್ ಹುಸೇನ್ ಖಾಲಿದ್ ಅವರು ಬಹಳ ವರ್ಷಗಳಿಂದ ಈ ನಾಡು-ನುಡಿಗೆ ತನ್ನದೇ ಆದ ಸೇವೆ ಸಲ್ಲಿಸುತ್ತಾ, ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಎಂದರು.
ಕೋಲಿ ಸಮಾಜದ ಹಿರಿಯ ಮುಖಂಡ ಸಣ್ಣ ನಿಂಗಪ್ಪ ನಾಯ್ಕೋಡಿ, ವ್ಯಕ್ತಿಯ ಜೀವ ಉಳಿಸುವ ಶಕ್ತಿ ಇರುವುದು ರಕ್ತಕ್ಕೆ ಮಾತ್ರ. ಓರ್ವ ರಕ್ತದಾನಿಯಿಂದ ನಾಲ್ಕು ಜನರ ಜೀವ ಉಳಿಸಲು ಸಾಧ್ಯ. ಇದಕ್ಕಾಗಿಯೇ ಆರೋಗ್ಯವಂತರು ರಕ್ತದಾನ ಮಾಡಬೇಕೆಂದು ಸಲಹೆ ನೀಡಿದರು.
ಸೈಯದ್ ಶಫಿ ಸರಮನ್, ಸೈಯದ್ ಸಯಿದುದ್ದಿನ್ ಖಾದ್ರಿ, ಮಹಾದೇವಪ್ಪ ಸಾಲಿಮಾನಿ, ಶೇಖ್ ಕಲೀಮ್ ತವಕ್ಕಲಿ, ಲಿಯಾಖತ್ ಖುರೆಷಿ, ಚಾಂದ್ ಪಟೇಲ ಅಧ್ಯಕ್ಷರು ವಿ ಕೇರ್ ಆಸ್ಪತ್ರೆ, ರಾಜಬಗ್ದಾನ್ ಅಧ್ಯಕ್ಷರು ಬಗ್ಗಾನ್, ಟ್ರಸ್ಸಿನ ಪದಾಧಿಕಾರಿಗಳು ಇದ್ದರು.-----
ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು, ಬಡ ಜನರಿಗೆ ವೈದ್ಯಕೀಯ ಸೇವೆ ನೀಡುತ್ತೇವೆ. ರಕ್ತದಾನ ಮತ್ತು ನೇತ್ರದಾನ ಶಿಬಿರ ನಡೆಸುತ್ತೇವೆ. ಕೋಮು ಸೌಹಾರ್ದಕ್ಕಾಗಿ ವಿಶಿಷ್ಟ ಕಾರ್ಯಕ್ರಮಗಳು, ಜಾಥಾಗಳನ್ನು ಆಯೋಜಿಸುತ್ತೇನೆ. ಸರ್ಕಾರಿ ಶಾಲಾ-ಕಾಲೇಜುಗಳ ಆವರಣ ಮತ್ತು ಕೆರೆಗಳ ಅಂಗಳದಲ್ಲಿ ಸಸಿ ನೆಡುತ್ತೇವೆ.
----