ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾ ಕಸಾಪ ಭವನದಲ್ಲಿ ಅನ್ನಪೂರ್ಣ ಮಹಾದೇವಪ್ಪ ಕಾಗಲಕರ ದಿ.ಭೀಮಕ್ಕ ರಾಮಚಂದ್ರ ಕಾಗಲಕರ ದತ್ತಿ ಹಾಗೂ ಶಾಂತಾಬಾಯಿ ಸುಖಾರಾಮ್ ನೂಲಿಕರ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಮುಖ್ಯ ವಾಹಿನಿಗೆ ತರುತ್ತಿರುವದು ಶ್ಲಾಘನೀಯ ಎಂದರು.
ತಿಕೋಟಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ ಮಾತನಾಡಿ, ಪ್ರಗತಿಪರ ಸಮಾಜದ ನಿರ್ಮಾಣವೇ ವಚನ ಸಾಹಿತ್ಯ. ಶ್ರದ್ಧೆಯಿಂದ ಮಾಡಿದ ಕಾಯಕ ಪೂಜೆಗಿಂತ ಶ್ರೇಷ್ಠ. ಇಂದು ವಚನ ಸಾಹಿತ್ಯ ಸುಂದರ ಬದುಕಿನ ಸಾಹಿತ್ಯವಾಗಿದೆ ಎಂದು ಬಣ್ಣಿಸಿದರು.ಮಮತಾ ಮುಳಸಾವಳಗಿ ಮಾತನಾಡಿ, ಪ್ರಬುದ್ಧತೆಯ ಮಹೋನ್ನತ ಶಿಖರ ವಚನ ಸಾಹಿತ್ಯ. ವಚನವೆಂದರೆ ಹುಸಿಯಾಗದ ಮಾತು. ಕನ್ನಡ ವಚನ ಸಾಹಿತ್ಯ ವಿಶ್ವಕ್ಕೆ ನೀಡಿದ ಕೊಡುಗೆ. ಅಲ್ಲಮಪ್ರಭು ಹಾಗು ಅಕ್ಕಮಹಾದೇವಿ ಸಂವಾದವೇ ವಚನ ಎಂದರು.ಚಿಂತಕಿ ಚೈತನ್ಯ ಮುದ್ದೇಬಿಹಾಳ ಮಾತನಾಡಿ, ಬಸವಣ್ಣ ಬಿತ್ತಿದ ಬೀಜಗಳು ನಾವು, ನಮಗಿರದು ಎಂದೆಂದು ಸಾವು. ಕಾಯಕವೇ ಕೈಲಾಸದಲ್ಲಿ ನಂಬಿಕೆಯಿಟ್ಟು ಗೌರವದಿಂದ ಬದುಕಿದವರು. ಸತ್ಯ ಶುದ್ಧ ಕಾಯಕವೇ ಶ್ರೇಷ್ಠ ಶರಣ ದೃಷ್ಟಿಯಲ್ಲಿ ಹೊನ್ನೆಲ್ಲ ಮಣ್ಣೆ ಎಂದರು.ಇಂಡಿ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಯಶ್ರೀ ತೆಲಗ, ವಿಜಯಲಕ್ಷ್ಮೀ ಡಿಸಲೆ, ರಜೀಯಾ ಚಪ್ಪರಬಂದ, ರಾಜಶ್ರೀ ನಾರಾಯಣಕರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.