ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೋಮು ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಘಟನೆ ಪಟ್ಟಣದಲ್ಲಿ ಹಿಂದೆಂದೂ ನಡೆದಿರಲಿಲ್ಲ. ಈ ವರ್ಷ ಆಕಸ್ಮಿಕವಾಗಿ ಘಟನೆ ನಡೆದುಹೋಗಿದೆ. ಶಾಂತಿಯನ್ನು ಕದಡಿರುವ ಕಿಡಿಗೇಡಿಗಳನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದರು.
ಬೆಂಕಿ ಹಚ್ಚುವ ಕೆಲಸ ಸಲ್ಲದು:ಮದ್ದೂರು ತಾಲೂಕಿನಲ್ಲಿ ಶೇ.೯೭ರಷ್ಟು ಹಿಂದೂಗಳು ಇದ್ದಾರೆ. ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಸಮರ್ಥರು ಇಲ್ಲೇ ಇದ್ದಾರೆ. ಆದರೆ, ಎಲ್ಲಿಂದಲೋ ಬಂದವರು ಇಲ್ಲಿನ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಯಾವುದೇ ಪಕ್ಷದವರಾದರೂ ಆಗಲಿ ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆದರೆ, ಬೆಂಕಿ ಹಚ್ಚುವ ಕೆಲಸ ಮಾಡಬಾರದು. ಕೆಲವರು ರಾಜಕೀಯವಾಗಿ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯವರನ್ನು ಗುರಿಯಾಗಿಸಿಕೊಂಡು ಟೀಕಿಸಿದರು.
ಹೊರಗಿನವರಿಂದ ಬುದ್ಧಿ ಹೇಳಿಸಿಕೊಳ್ಳಬೇಕಿಲ್ಲ:
ಫೋಕ್ಸೋ ಕೇಸ್ ಹಾಕಿಸಿಕೊಂಡವರು, ಲಂಚ ಪಡೆದು ಬಂಧನಕ್ಕೊಳಗಾದವರು ಮದ್ದೂರಿಗೆ ಬಂದು ಬುದ್ಧಿ ಹೇಳಬೇಕಾ. ಮದ್ದೂರಿಗೆ ಇವರ ಕೊಡುಗೆ ಏನಿದೆ ಎಂದು ಮಾಜಿ ಸಂಸದ ಪ್ರತಾಪ್ಸಿಂಹ ಅವರನ್ನು ಗುರಿಯಾಗಿಸಿಕೊಂಡು ಟೀಕಿಸಿದ ಕೆ.ಎಂ.ಉದಯ್, ಯುವಕರನ್ನು ದಿಕ್ಕು ತಪ್ಪಿಸಬೇಡಿ. ಮಾಧ್ಯಮಗಳ ಮುಂದೆ ಶೋ ಕೊಟ್ಟು ಪ್ರಚೋದನಕಾರಿ ಭಾಷಣ ಮಾಡುತ್ತಾ ಮಂಡ್ಯವನ್ನು ಮಂಗಳೂರು ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಮಸೀದಿ ಮುಂದೆ ಶವ ಸಾಗಿಸುವ ವೇಳೆ ತಮಟೆ ಹೊಡೆಯಲು ಬಿಡಲ್ಲ, ರಸ್ತೆಯಲ್ಲಿ ಹೋಗುವುದಕ್ಕೂ ಅವಕಾಶ ನೀಡದೆ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿರುತ್ತಾರೆ. ಅದನ್ನು ಪ್ರಶ್ನಿಸಿದರೆ ಹೊಡೆಯಲು ಬರುತ್ತಾರೆ ಎಂಬ ಸ್ಥಳೀಯರ ಆರೋಪದ ಬಗ್ಗೆ ಕೇಳಿದಾಗ, ಆ ಸ್ಥಳೀಯರ ಪೈಕಿ ಒಂದಿಬ್ಬರಿಗೆ ವೈಮನಸ್ಸಿದೆ. ಈ ಎಲ್ಲಾ ಸಮಸ್ಯೆಗಳು ಮುಂದೆ ಎದುರಾಗದಂತೆ ಪರಿಹಾರ ಸೂಚಿಸಲಾಗುವುದು. ರಾಮ್-ರಹೀಂ ನಗರದಲ್ಲಿ ಪೊಲೀಸ್ ಚೌಕಿ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸುವುದಾಗಿ ಹೇಳಿದರು.
ನನ್ನಷ್ಟು ಯಾರೂ ಅನುದಾನ ತಂದಿಲ್ಲ:
ಗೋಷ್ಠಿಯಲ್ಲಿ ಕೆ.ಎಂ.ದೊಡ್ಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ನಗರಸಭೆ ಅಧ್ಯಕ್ಷೆ ಕೋಕಿಲಾ, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಇದ್ದರು.ಅವಶ್ಯಕತೆ ಇರಲಿಲ್ಲ
- ಕೆ.ಎಂ.ಉದಯ್, ಶಾಸಕ
ಸೆ.೨೨ರಂದು ಮದ್ದೂರಿನಲ್ಲಿ ಸಾಮರಸ್ಯ ನಡಿಗೆ
ಕನ್ನಡಪ್ರಭ ವಾರ್ತೆ ಮಂಡ್ಯ
ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಉಂಟಾದ ಗಲಭೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ನಡುವೆ ಸೌಹಾರ್ದತೆ, ಸಾಮರಸ್ಯ ಬೆಳೆಸಲು ಪರಸ್ಪರ ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಪ್ರಗತಿಪರ ಸಂಘಟನೆಗಳ ವತಿಯಿಂದ ಸೆ.೨೨ರಂದು ಸಾಮರಸ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು ತಿಳಿಸಿದರು.ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦.೩೦ಕ್ಕೆ ಪಟ್ಟಣದ ಟಿ.ಬಿ. ವೃತ್ತದಿಂದ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಪ್ರತಿಮೆ ಬಳಿಯಿಂದ ಆರಂಭಗೊಳ್ಳುವ ನಡಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಐತಿಹಾಸಿಕ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಬಳಿ ಸಮಾವೇಶಗೊಳ್ಳಲಿದೆ ಎಂದರು.
ಯಾವುದೇ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸುವ ಕ್ರಿಮಿನಲ್ಗಳನ್ನು ಕ್ರಿಮಿಲ್ಗಳಾಗಿಯೇ ನೋಡಬೇಕು. ಅಂಬೇಡ್ಕರ್ ಬರೆದ ಸಂವಿಧಾನ ನೀಡಿರುವ ಕಾನೂನಿನ ವ್ಯಾಪ್ತಿಯಲ್ಲಿ ಕ್ರಿಮಿನಲ್ಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಾವು ಸೌಹಾರ್ದ-ಸಾಮರಸ್ಯದ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಮುಖಂಡರಾದ ಶಿವರಾಜ್ ಮರಳಿಗ, ಶಂಕರೇಗೌಡ ಬೋರಾಪುರ, ಜಗದೀಶ್ ನಗರಕೆರೆ, ಹುರುಗಲವಾಡಿ ರಾಮಯ್ಯ ಇತರರಿದ್ದರು.