ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವದ ೫ನೇ ಗೋಷ್ಠಿ ಮಾತೃ ಭಕ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂತಃಕರಣ, ಮೃದು ಸ್ವಭಾವವನ್ನು ಹೊಂದಿದ್ದ ಸಿದ್ದೇಶ್ವರ ಶ್ರೀಗಳು ಮಾತೃ ಹೃದಯದವರಾಗಿದ್ದರು. ಮಣ್ಣಿನ ಮುದ್ದೆಯಾಗಿರುವ ಮಗುವಿಗೆ ರೂಪ ನೀಡಿ ಬೆಳೆಸುವವಳು ತಾಯಿ. ಇಂದು ಆಂಗ್ಲ ಸಂಸ್ಕೃತಿ ಒಲವಿನಿಂದ ಮಕ್ಕಳು ಮಮ್ಮಿ ಎಂದು ಕರೆಯವುದನ್ನು ಕಲಿಸುತ್ತಿದ್ದೇವೆ. ಮಮ್ಮಿ ಎಂದರೆ, ಸತ್ತ ಹೆಣ, ನಾವು ಸತ್ತ ಹೆಣ ಎಂದು ಕರೆಯಿಸಿಕೊಳ್ಳುತ್ತಿದ್ದೇವೆ. ಅದರ ಬದಲು ಮಕ್ಕಳಿಗೆ ಭಾರತೀಯ ಸಂಸ್ಕೃತಿಯಂತೆ ಅವ್ವ-ಅಪ್ಪಾ ಎಂದು ಕರೆಯುವುದನ್ನು ಕಲಿಸಬೇಕು ಎಂದು ಹೇಳಿದರು.
ಇಂದು ಮಕ್ಕಳು ಸುಳ್ಳು ಹೇಳುತ್ತಿದ್ದಾರೆ. ಮಾತೆಯರು ತಮ್ಮ ಕರ್ತವ್ಯ ಮರೆಯುತ್ತಿದ್ದಾರೆ. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳು ಮಕ್ಕಳ ಭವಿಷ್ಯವನ್ನು ನಿರ್ಧರಿಸುತ್ತವೆ. ಹಾಗಾಗಿ ನಾವು ಜವಾಬ್ದಾರಿಯಿಂದ ಬೆಳೆಸಬೇಕು. ಮಾತೆ ಅಂದರೆ ಸೀರೆ, ಮಾತೆಯರಿಗೆ ಸೀರೆಗೆ ದೊರಕುವ ಗೌರವ ಯಾವುದಕ್ಕೂ ಸಿಗುವುದಿಲ್ಲ. ಸಿದ್ಧೇಶ್ವರ ಅಪ್ಪಾರವರು ಜ್ಞಾನ ಸಾಗರವಿದ್ದಂತೆ, ಮಾತೆಯರಿಗೆ ಜ್ಞಾನಯೋಗಾಶ್ರಮದಲ್ಲಿ ಅತ್ಯಂತ ಗೌರವ ಸಿಗುವಂತೆ ಮಾಡಿದ್ದಾರೆ ಎಂದರು.ಮಾಜಿ ಸಚಿವೆ, ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ೨೧ನೇ ಶತಮಾನದಲ್ಲಿ ನಡೆದಾಡುವ, ಮಾತನಾಡುವ ದೇವರು ಸಿದ್ಧೇಶ್ವರ ಸ್ವಾಮೀಜಿಗಳನ್ನು ಕಂಡಿದ್ದೇವೆ. ನಾವು ಅದೃಷ್ಟವಂತರು. ಇಂದು ತಾಯಂದಿಯರ ಮೇಲೆ ಅತೀ ದೊಡ್ಡ ಜವಾಬ್ದಾರಿ ಇದೆ ಆ ಮಾತನ್ನು ನಾವು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಬಸವಲಿಂಗ ಶ್ರೀಗಳು ಮಾತನಾಡಿ, ಸಿದ್ದೇಶ್ವರ ಅಪ್ಪಾಜಿ ತಾಯಿಯಲ್ಲಿಯೇ ದೇವರನ್ನು ಕಾಣು ಎಂದಿದ್ದಾರೆ. ಇದರರ್ಥ ತಾಯಿ ಮೊದಲು ಎನ್ನುವುದನ್ನು ಅಪ್ಪಾರವರು ತಿಳಿಸಿದ್ದಾರೆ. ನಾವು ಅವರ ಮಾತನ್ನು ಪಾಲಿಸಬೇಕು. ಅಮ್ಮ ಎನ್ನುವ ಮೂಲಕ ನಮ್ಮಗಳ ಮನೆಯನ್ನು ಕನ್ನಡಮಯವಾಗಿಸಬೇಕು ಎಂದು ಹೇಳಿದರು.
ಶೈಲಜಾ ಬಸನಗೌಡ ಪಾಟೀಲ ಮಾತನಾಡಿ, ಮಾತೃ ಶಕ್ತಿ ಎಲ್ಲ ಶಕ್ತಿಗಿಂತಲೂ ದೊಡ್ಡದು. ಮಾತೆಯರನ್ನು ಗೌರವದಿಂದ ಕಾಣಬೇಕು ಎಂದರು.
ಈ ವೇಳೆ ಪಾಲಿಕೆ ಮಾಜಿ ಸದಸ್ಯ ಉಮೇಶ ವಂದಾಲ, ಶರಣು ಸಬರದ, ಆಶ್ರಮದ ಭಕ್ತರು, ಸ್ವಾಮೀಜಿಗಳು ಉಪಸ್ಥಿತರಿದ್ದರು.
ಕೋಟ್
- ಶಶಿಕಲಾ ಜೊಲ್ಲೆ, ಮಾಜಿ ಸಚಿವೆ, ಶಾಸಕಿ