ಕನ್ನಡಪ್ರಭ ವಾರ್ತೆ ಆಲೂರು
ಪಟ್ಟಣದ ಪಕ್ಕದಲ್ಲೇ ಇರುವ ದಡದಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯಸ್ವ್ವಾಮಿ ದೇವಾಲಯದ ಶಿಖರ ಕಲಶಾರೋಹಣ ಹಾಗೂ ಲೋಕಾರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಮನೆ ಎಂದರೆ ಮನಸ್ಸಿನ ನೆಮ್ಮದಿ ಎಂದರ್ಥ. ಮನೆ ಯಾವಾಗಲೂ ಸಂಸ್ಕಾರವಂತಾಗಿದ್ದರೆ ನೆಮ್ಮದಿ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ. ತಾಯಿ ಮಕ್ಕಳಿಗೆ ಕೊಡುವಂತಹ ಸಂಸ್ಕಾರ ಯಾರಿಂದಲೂ ಕೊಡಲು ಸಾಧ್ಯವಿಲ್ಲ. ತಾಯಿಗಿಂತ ದೊಡ್ಡ ಶಕ್ತಿ, ದೊಡ್ಡ ದೇವರು ಜಗತ್ತಿನಲ್ಲಿ ಕಾಣುವುದಿಲ್ಲ. ದೇವರು ಸೇರಿದಂತೆ ಯಾವುದೇ ಋಣ ತೀರಿಸಬಹುದು. ಆದರೆ ತಾಯಿ ಋಣ ತೀರಿಸಲು ಸಾಧ್ಯವಿಲ್ಲ ಎಂದರು.
ಕಾರ್ಜುವಳ್ಳಿ ಹಿರೇಮಠಾಧೀಶರಾದ ಸದಾಶಿವ ಶಿವಾಚಾರ್ಯ ರವರು ಮಾತನಾಡಿ, ಆಂಜನೇಯನನ್ನು ಕೊಟ್ಟಂತಹ ನಾಡು ನಮ್ಮ ಕರುನಾಡು ಎಂದರು. ಇತ್ತೀಚಿನ ದಿನಗಳಲ್ಲಿ ಗಣೇಶ, ವೀರಭದ್ರ ಮತ್ತು ಆಂಜನೇಯಸ್ವಾಮಿಯನ್ನು ಜನರು ಹೆಚ್ಚು ಆರಾಧಿಸುತ್ತಿದ್ದಾರೆ ಎಂದರು.ಕೊಡ್ಲಿಪೇಟೆ ಕಲ್ಲು ಮಠಾಧೀಶರಾದ ಸ್ವರೂಪಿ ಮಹಾಂತ ಸ್ವಾಮಿಗಳು ಮಾತನಾಡಿ, ವೈಜ್ಞಾನಿಕವಾಗಿ ನಾವು ಎಷ್ಟೇ ಅನುಕೂಲಗಳನ್ನು ಪಡೆದಿದ್ದರೂ ಆಂತರಿಕವಾಗಿ ನೆಮ್ಮದಿಯಾಗಿ ಬದುಕಲು ದೇವಸ್ಥಾನ ಮಠಗಳು ಬೇಕು. ಈ ಭೂಮಿಯಲ್ಲಿ ನಾವುಗಳು ಅತಿಥಿಗಳು. ಕಾಲ ಮುಗಿದ ನಂತರ ಕರೆದಾಗ ಹೋಗಬೇಕು. ನಾವು ಸಂಸ್ಕಾರವಂತರಾದರೆ ಮುಂದಿನ ಮಕ್ಕಳು ಧಾರ್ಮಿಕವಾಗಿ ಉತ್ತಮ ದಾರಿಯಲ್ಲಿ ಸಾಗುತ್ತಾರೆ ಎಂದರು.
ಕಲ್ಲುಮಠಾಧೀಶರಾದ ಸದಾಶಿವ ಸ್ವಾಮಿಗಳು, ತಣ್ಣೀರುಹಳ್ಳ ಮಠಾಧೀಶರಾದ ವಿಜಯಕುಮಾರ ಸ್ವಾಮಿಗಳು, ಡಿ. ಎಸ್. ನಂಜುಂಡಪ್ಪ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬಿ. ರೇಣುಕಪ್ರಸಾದ್, ಕೆ. ಎಸ್. ಮಂಜೇಗೌಡ, ವಿರೂಪಾಕ್ಷಪ್ಪ, ಜಯಣ್ಣ, ರುದ್ರಪ್ಪ, ಜಗದೀಶ ಶಾಸ್ತ್ರಿ ಮೊದಲಾದವರಿದ್ದರು.