ಉತ್ತಮ ಸಂಸ್ಕಾರ ಇಲ್ಲದವರ ಜೀವನದಲ್ಲಿ ಸುಖವಿರಲ್ಲ

KannadaprabhaNewsNetwork |  
Published : Nov 22, 2025, 01:30 AM IST
ಹೊನ್ನಾಳಿ ಫೋಟೋ 21ಎಚ್.ಎಲ್.ಐ2. ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆದ ಅಮಾವಾಸ್ಯೆ ಪೂಜಾ ಕಾರ್ಯಕ್ರಮ, ಕದಳಿ ಕಾರ್ತಿಕ ಲಕ್ಷ ದೀಪೋತ್ಸವಗುರು ಚನ್ನೇಶ್ವರ ಬೆಳ್ಳಿ ರಥೋತ್ಸವ: ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮದಲ್ಲಿ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಅಧ್ಯಕ್ಷರು, ಪದಾಧಿಕಾರಿಗಳನ್ನು ಸನ್ಮಾನಿಸಿದರು.  | Kannada Prabha

ಸಾರಾಂಶ

ಹುಟ್ಟಿದ ಪ್ರತಿಯೊಬ್ಬ ಮನುಷ್ಯ ಸಂಸ್ಕಾರವಂತನಾಗಿರಬೇಕು, ಗುರು ಹಿರಿಯರಿಗೆ ಗೌರವ ಕೊಡಬೇಕು, ತಂದೆ- ತಾಯಿಯನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು. ಇಂತಹ ಸಂಸ್ಕಾರ ಇಲ್ಲದಿದ್ದರೆ ಆತನ ಜೀವನ ಸುಖಕರವಾಗಿ, ಆರೋಗ್ಯಕರವಾಗಿ ಇರುವುದಿಲ್ಲ ಎಂದು ಹಿರೇಕಲ್ಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

- ಹೊನ್ನಾಳಿಯಲ್ಲಿ ಕಾರ್ತಿಕೋತ್ಸವ, ಧರ್ಮಸಭೆಯಲ್ಲಿ ಹಿರೇಕಲ್ಮಠದ ಶ್ರೀ ಆಶೀರ್ವಚನ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹುಟ್ಟಿದ ಪ್ರತಿಯೊಬ್ಬ ಮನುಷ್ಯ ಸಂಸ್ಕಾರವಂತನಾಗಿರಬೇಕು, ಗುರು ಹಿರಿಯರಿಗೆ ಗೌರವ ಕೊಡಬೇಕು, ತಂದೆ- ತಾಯಿಯನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು. ಇಂತಹ ಸಂಸ್ಕಾರ ಇಲ್ಲದಿದ್ದರೆ ಆತನ ಜೀವನ ಸುಖಕರವಾಗಿ, ಆರೋಗ್ಯಕರವಾಗಿ ಇರುವುದಿಲ್ಲ ಎಂದು ಹಿರೇಕಲ್ಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಗುರುವಾರ ರಾತ್ರಿ ಪಟ್ಟಣದ ಹಿರೇಕಲ್ಮಠದಲ್ಲಿ ಕಾರ್ತಿಕೋತ್ಸವ, ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಹಾಗೂ ಗುರು ಚನ್ನೇಶ್ವರರ ಬೆಳ್ಳಿ ರಥೋತ್ಸವ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರು, ಪದಾಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಜಿಲ್ಲಾ ಕಾರ್ಯದರ್ಶಿಯಾಗಿ ಹೊನ್ನಾಳಿಯ ಎನ್.ಕೆ. ಆಂಜನೇಯ, ಉಪಾಧ್ಯಕ್ಷರಾಗಿ ಶ್ರೀನಿವಾಸ್, ನಿರ್ದೇಶಕರಾಗಿ ಲಿಂಗಾಪುರದ ರಾಘವೇಂದ್ರ ಚುನಾಯಿತರಾಗಿದ್ದಾರೆ. ನಮ್ಮ ತಾಲೂಕಿನ ಎಲ್ಲ ಪತ್ರಕರ್ತರು ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ ಎಂದು ಹೇಳಿದರು.

ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಏಕಬೋಟೆ ಮಾತನಾಡಿ, ಒಬ್ಬ ವ್ಯಕ್ತಿ ಎಷ್ಟೇ ಡಿಗ್ರಿಗಳನ್ನು ಪಡೆದುಕೊಂಡರೂ ಅವರಿಗೆ ಸಂಸ್ಕೃತಿ, ಸಂಸ್ಕಾರ ಇಲ್ಲದಿದ್ದರೆ ಅದೆಲ್ಲವೂ ವ್ಯರ್ಥ. ಆಧುನಿಕ ಜೀವನದ ಭರಾಟೆಯಲ್ಲಿ ಸಂಸ್ಕಾರಕ್ಕೆ ಚ್ಯುತಿ ತರುತ್ತಿದ್ದಾರೆ. ಇಂತಹ ಮಠಗಳ ಆಶ್ರಯದಲ್ಲಿ ನಡೆಯುವ ಧರ್ಮಸಭೆಗಳಲ್ಲಿ ಉಪನ್ಯಾಸ ಕೇಳುವ ಮೂಲಕ ಎಲ್ಲರೂ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದರು.

ಶಿವಮೊಗ್ಗದ ಆಯುಷ್ ಇಲಾಖೆ ಮುಖ್ಯ ವೈದ್ಯಾಧಿಕಾರಿ ಡಾ. ಸಿ.ಎ. ಹಿರೇಮಠ ಅವರು ನಿದ್ದೆಯ ಮಹತ್ವ ಕುರಿತು ಮಾತನಾಡಿದರು. ಮೊದಲು ಸರ್ವರೋಗಕ್ಕೂ ಸರಾಯಿ ಮದ್ದು ಎನ್ನುತ್ತಿದ್ದರು. ಈಗ ಅದನ್ನು ಸರ್ವರೋಗಕ್ಕೂ ನಿದ್ದೆ ಮದ್ದು ಎಂದು ಬದಲಾಯಿಸಬೇಕಾಗಿದೆ ಎಂದರು.

ಕತ್ತಿಗೆ ಗ್ರಾಮದ ರೇವಣಸಿದ್ದೇಶ್ವರ ಸ್ಟೋನ್ ಕ್ರಷರ್ ಮಾಲೀಕ ಧನಂಜಯ ಪಾಟೀಲ್ ಪೂಜಾ ಮತ್ತು ಭಕ್ತರಿಗೆ ಪ್ರಸಾದ ಸೇವೆ ನಡೆಸಿಕೊಟ್ಟರು. ಜಕ್ಕಿನಕೊಪ್ಪ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಕೋಲಾಟ ಸಂಘದವರು ಭಜನೆ ಹಾಗೂ ಕೋಲಾಟ ಪ್ರದರ್ಶನ ಮಾಡಿದರು. ಕೆಪಿಟಿಸಿಎಲ್ ಉದ್ಯೋಗಿ ಕೀರ್ತನ ವಿಶೇಷ ನೃತ್ಯರೂಪಕ ನಡೆಸಿಕೊಟ್ಟರು.

ಅನ್ನದಾನಯ್ಯ ಶಾಸ್ತ್ರಿ ವೇದಘೋಷ ಮಾಡಿದರು. ಚನ್ನೇಶ್ವರ ಗಾನ ಕಲಾ ಸಂಘದವರು ಪ್ರಾರ್ಥನೆ ಸಲ್ಲಿಸಿದರು. ಮಠದ ವ್ಯವಸ್ಥಾಪಕ ಎಂ.ಪಿ.ಎಂ. ಚನ್ನಬಸಯ್ಯ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬದರೀನಾಥ್, ಖಜಾಂಚಿ ವೀರೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿಗಳಾದ ಎನ್.ಕೆ. ಆಂಜನೇಯ, ಮುದ್ದಯ್ಯ, ರಾಜ್ಯ ಸಮಿತಿ ಸದಸ್ಯರಾದ ಚಂದ್ರಣ್ಣ, ರಾಷ್ಟ್ರೀಯ ಮಂಡಳಿ ಸದಸ್ಯರಾದ ಎಸ್.ಕೆ. ಒಡೆಯರ್, ನಿರ್ದೇಶಕರಾದ ವಿಶ್ವನಾಥ್, ವೇದಮೂರ್ತಿ, ಮಂಜುನಾಥ್ ಕಾಡಜ್ಜಿ, ಭಾರತಿ, ರಘುಪ್ರಸಾದ್, ರಾಘವೇಂದ್ರ, ತಾ. ಪತ್ರಕರ್ತರ ಸಂಘದ ಅಧ್ಯಕ್ಷ ಕೋರಿ ಯೋಗೀಶ್, ಮೃತ್ಯುಂಜಯ ಪಾಟೀಲ್, ಗಿರೀಶ್ ನಾಡಿಗ್, ಹಾಲೇಶ್, ರುದ್ರೇಶ್, ಮುಖಂಡರಾದ ಎಚ್.ಎ. ಉಮಾಪತಿ, ಶಿಕ್ಷಕರಾದ ಕರಿಬಸಯ್ಯ ಇತರರು ಉಪಸ್ಥಿತರಿದ್ದರು.

- - -

-21ಎಚ್.ಎಲ್.ಐ2:

ಹೊನ್ನಾಳಿ ಹಿರೇಕಲ್ಮಠದಲ್ಲಿ ನಡೆದ ಅಮಾವಾಸ್ಯೆ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ