ಅಕ್ರಮ ಸಕ್ರಮ ಸಮಿತಿ ಕಾರ್ಯದಲ್ಲಿ ಲೋಪವಿಲ್ಲ: ಶಾಸಕ ಉಮಾನಾಥ ಕೋಟ್ಯಾನ್‌ ಸ್ಪಷ್ಟನೆ

KannadaprabhaNewsNetwork |  
Published : Dec 13, 2025, 03:15 AM IST
ಅಕ್ರಮ-ಸಕ್ರಮ ಸಮಿತಿ ಕಾರ್ಯದಲ್ಲಿ ಲೋಪವಿಲ್ಲ: ರಾಜಕೀಯ ಕಾರಣಕ್ಕೆ ತಪ್ಪು ಮಾಹಿತಿ: ಶಾಸಕ ಉಮಾನಾಥ ಕೋಟ್ಯಾನ್‌ ಸ್ಪಷ್ಟನೆ | Kannada Prabha

ಸಾರಾಂಶ

ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿ (ನಮೂನೆ 50, 53, 57 ಅರ್ಜಿಗಳ ವಿಲೇವಾರಿ) ವಿಚಾರದಲ್ಲಿ ಯಾವುದೇ ಲೋಪವಾಗಿಲ್ಲ. ರಾಜಕೀಯ ಕಾರಣಗಳಿಗಾಗಿ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಡುಬಿದಿರೆ: ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿ (ನಮೂನೆ 50, 53, 57 ಅರ್ಜಿಗಳ ವಿಲೇವಾರಿ) ವಿಚಾರದಲ್ಲಿ ಯಾವುದೇ ಲೋಪವಾಗಿಲ್ಲ. ರಾಜಕೀಯ ಕಾರಣಗಳಿಗಾಗಿ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯರು ಮತ್ತು ಅನುಭವಿಗಳಾಗಿರುವ ವಾಸುದೇವ ನಾಯಕ್ ಅವರು ಯಾವ ಕಾರಣಕ್ಕೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ವಿವಿಧ ಅರ್ಜಿಗಳ ವಿಲೇವಾರಿ ವಿಧಾನವು ತಾಂತ್ರಿಕವಾಗಿ ವಿವಿಧ ನಿಯಮಗಳ ಅಡಿಯಲ್ಲಿ ಹಲವು ಹಂತಗಳಲ್ಲಿ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಅಥವಾ ಲೋಪವಾಗಿಲ್ಲ ಎಂದು ಶಾಸಕರು ವಿವರಿಸಿದರು.

ಬಗರ್ ಹುಕುಂ ತಂತ್ರಾಂಶದ ಮೂಲಕ ನಮೂನೆ 50, 53, 57 ಅರ್ಜಿಗಳನ್ನು ವಿಲೇವಾರಿ ಮಾಡುವ ವಿಧಾನವನ್ನು ಅವರು ಹಂತ ಹಂತವಾಗಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ವಕೀಲರಾದ ಬಾಹುಬಲಿ ಪ್ರಸಾದ್, ಶಾಂತಿ ಪ್ರಸಾದ್ ಹೆಗ್ಡೆ, ಪ್ರಮುಖರಾದ ಸುಕೇಶ್ ಶೆಟ್ಟಿ ಲಕ್ಷ್ಮಣ್ ಪೂಜಾರಿ, ಗೋಪಾಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ