ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸಾಹಿತ್ಯ ಗ್ರಾಮದಲ್ಲಿ ನಡೆದ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು.
ಮಕ್ಕಳಲ್ಲಿ ಮಾನವೀಯ ಗುಣಗಳು ಕಣ್ಮರೆಯಾಗುತ್ತಿರುವುದು ಆತಂಕದ ಸಂಗತಿ. ಹಿರಿಯರಿಗೆ, ಪೋಷಕರಿಗೆ, ಶಿಕ್ಷಕರಿಗೆ ಗೌರವ ನೀಡುವಂತಹ ಸಂಸ್ಕಾರವನ್ನು ಮರೆಯುತಿದ್ದಾರೆ. ಈ ಹಿನ್ನೆಲೆಯಲ್ಲಿ ನೀತಿ ವಿಜ್ಞಾನ ಕಲಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಪೂರಕ ಪಠ್ಯಕ್ರಮವನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.ಸಾಹಿತಿಗಳ ಬಗ್ಗೆ ಬಂಗಾರಪ್ಪ ಅವರಿಗೆ ಅಪಾರ ಗೌರವವಿತ್ತು. ನನಗೆ ಸರಿಯಾದ ಕನ್ನಡ ಬರುವುದಿಲ್ಲ ಎಂಬ ಟೀಕೆಗಳು ತುಂಬಾ ಬೇಸರ ಮೂಡಿಸಿತ್ತು. ನಮ್ಮ ರಕ್ತದಲ್ಲಿ ಕನ್ನಡವಿದೆ. ಪೋಷಕರಿಗೆ ಇಂಗ್ಲೀಷ್ ಮಾಧ್ಯಮದ ವ್ಯಾಮೋಹ ಜಾಸ್ತಿಯಿದೆ. ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೆಯಿಲ್ಲ. ನಿಜವಾದ ಉತ್ತಮ ಶಿಕ್ಷಕರು ಇರುವುದು ಸರ್ಕಾರಿ ಶಾಲೆಗಳಲ್ಲಿ. ಅದರೇ ಸಮಾಜದಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಯಾವುದೇ ತಾತ್ಸಾರ ಬೇಡ. ಡಿಜಿಟಲ್ ಕ್ಷೇತ್ರದಲ್ಲಿ ಕನ್ನಡದ ಬಳಕೆ ಹೆಚ್ಚಾಗುವಂತಹ ಯೋಜನೆಗಳನ್ನು ಸರ್ಕಾರದಿಂದ ರೂಪಿಸುತ್ತೇವೆ. ಭಾಷೆಗೆ ಪರಿಣಾಮಕಾರಿಯಾಗಿ ಕಲಿಸಲು ಯಾವುದೇ ನಾವೀನ್ಯ ಯೋಚನೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದು ಹೇಳಿದರು.
ಹಿರಿಯ ಸಾಹಿತಿ ಡಾ.ಎಸ್.ಪಿ.ಪದ್ಮಪ್ರಸಾದ್ ಸಮಾರೋಪ ಮಾತುಗಳನ್ನಾಡಿದರು. ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಮಾತನಾಡಿದರು. ಜಿಪಂ ಮಾಜಿ ಸದಸ್ಯರಾದ ಕಲಗೋಡು ರತ್ನಾಕರ್, ಆಕಾಶವಾಣಿ ಸಹಾಯಕ ನಿರ್ದೇಶಕ ತುಕಾರಾಮ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್, ರೈತನಾಯಕ ಎಚ್.ಆರ್.ಬಸವರಾಜಪ್ಪ, ಎಸ್.ಬಿ.ಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಗಂಗಾಧರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ನಾಡು ನುಡಿಗೆ ಸೇವೆ ಸಲ್ಲಿಸಿದ ಮಹನೀಯರನ್ನು ಸನ್ಮಾನಿಸಲಾಯಿತು.
೧. ಪ್ರಾಥಮಿಕದಿಂದ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಶಿಕ್ಷಣದ ಕಲಿಕೆಯಲ್ಲಿ, ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವಂತಹ ನಾವೀನ್ಯ ಯೋಜನೆ ಸರ್ಕಾರ ಜಾರಿಗೆ ತರಬೇಕು.
೩. ಕನ್ನಡದ ಕ್ರಿಯಾಶೀಲ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಆಯೋಜನೆ ಹಾಗೂ ಭಾಗವಹಿಸುವಿಕೆಗೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಬಾರದು.
೫. ಮಲೆನಾಡಿಗೆ ಮಾರಕವಾದ ಅಭಿವೃದ್ಧಿ ಯೋಜನೆಗಳ ಬದಲಿಗೆ, ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ನೀತಿ ಅನುಷ್ಠಾನಗೊಳಿಸಬೇಕು
೭. ನ್ಯಾಯಾಲಯ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಕಚೇರಿ, ವೈದ್ಯಕೀಯ, ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಆಡಳಿತ ಭಾಷೆಯಾಗಿ ಕನ್ನಡ ಬಳಕೆ ಕಡ್ಡಾಯಗೊಳಿಸಬೇಕು.
೯. ಯುನಿಕೋಡ್, ನುಡಿ ಸೇರಿದಂತೆ ತಂತ್ರಾಂಶಗಳಲ್ಲಿ ಕನ್ನಡದ ಬಳಕೆಗೆ ಇರುವ ತೊಡಕುಗಳನ್ನು ಪರಿಹರಿಸಿ, ಡಿಜಿಟಲ್ ವೇದಿಕೆಗಳಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ನೀಡುವಂತಹ ಯೋಜನೆ ರೂಪಿಸಬೇಕು.
೧೦. ಅರ್ಹ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ಅಧ್ಯಯನಕ್ಕೆ ಅವಕಾಶ ಕಲ್ಪಿಸುವ ಮೂಲಕ, ಸಮುದಾಯದಲ್ಲಿ ಸೇವಾ ಮನೋಭಾವಕ್ಕೆ ಒತ್ತು ನೀಡಬೇಕು ಹಾಗೂ ವ್ಯಾಪಾರಿ ವೈದ್ಯಕೀಯ ವಲಯವನ್ನು ಮುಕ್ತಗೊಳಿಸಬೇಕು.೧೧. ೧ ರಿಂದ ೫ ನೇ ತರಗತಿವರೆಗೆ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ತರಬೇಕು