ಕನ್ನಡಪ್ರಭ ವಾರ್ತೆ ಗೋಕಾಕ
ನಗರದ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಅರಬಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಮಂಡಲ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ಪಂಡಿತ ದೀನ್ ದಯಾಳ ಉಪಾಧ್ಯಾಯ ಅವರ ತ್ಯಾಗ ಮತ್ತು ಪರಿಶ್ರಮದಿಂದ ಬಿಜೆಪಿ ಇಷ್ಟೊಂದು ಬೆಳೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಭಾರತ ಪ್ರಪಂಚದಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗುವತ್ತ ಹೆಜ್ಜೆ ಹಾಕುತ್ತಿದೆ ಎಂದರು.
ಸೆ.2ರಂದು ಪ್ರಧಾನಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ನವದೆಹಲಿಯಲ್ಲಿ ಚಾಲನೆ ನೀಡಲಿದ್ದು, ಎರಡು ಹಂತಗಳಲ್ಲಿ ಈ ಅಭಿಯಾನ ಜರುಗಲಿದೆ. ಸೆ.2 ರಿಂದ 25ರತನಕ ಒಂದು ಹಂತವಾದರೆ, ಎರಡನೇ ಹಂತ ಅ.1 ರಿಂದ 15ರವರೆಗೆ ನಡೆಯಲಿದೆ. ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು. ಅಗತ್ಯಬಿದ್ದರೆ ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ಇದರ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕು. ಅರಬಾವಿ ಕ್ಷೇತ್ರದಿಂದಲೇ ಕನಿಷ್ಠ 75 ಸಾವಿರ ಮತದಾರರನ್ನು ಸದಸ್ಯತ್ವದ ನೋಂದಣಿ ಮಾಡಿಸುವ ಮೂಲಕ ಮುಂಬರುವ ತಾಪಂ., ಜಿಪಂ, ಚುನಾವಣೆಯಲ್ಲಿ ನಮ್ಮವರು ಗೆಲ್ಲಲು ಈಗಿನಿಂದಲೇ ಪ್ರಯತ್ನ ಮಾಡುವಂತೆ ಕರೆ ನೀಡಿದರು.ಬಿಜೆಪಿ ಸರ್ಕಾರದ ಸಾಧನೆಗಳನ್ನು ತಿಳಿಸಿ:
ಈಗಿರುವ ಕಾಂಗ್ರೆಸ್ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಯಾವ ಯೋಜನೆಗಳಿಗೂ ಅನುದಾನ ಕೊಡುತ್ತಿಲ್ಲ. ಎಲ್ಲವೂ ಗ್ಯಾರಂಟಿಗೆ ಹೋಗುತ್ತಿದೆ. ಅಭಿವೃದ್ಧಿಯಂತೂ ಇಲ್ಲವೇ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿರುವುದಾಗಿ ಅವರು ಹೇಳಿದರು.
ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಮಾತನಾಡಿದರು.ವೇದಿಕೆಯಲ್ಲಿ ಅರಬಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಸದಸ್ಯತ್ವ ಅಭಿಯಾನದ ಜಿಲ್ಲಾ ಪ್ರಭಾರಿ ದಾದಾಗೌಡ ಬಿರಾದಾರ, ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಪ್ರಶಾಂತ ಅಮ್ಮಿನಭಾವಿ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.-------
ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಈಗಿಂದಲೇ ಕಾರ್ಯಪ್ರವೃತ್ತರಾಗಬೇಕು. ಮುಂದಿನ ಅಕ್ಟೋಬರ್ ತಿಂಗಳಲ್ಲಿ ಚುನಾವಣೆಯ ಸಂಬಂಧ ದೊಡ್ಡ ಪ್ರಮಾಣದಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗುವುದು. ಮುಂದಿನ ತಿಂಗಳಿನಿಂದ ನಡೆಯಲಿರುವ ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲು ಶ್ರಮಿಸಬೇಕು.-ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾವಿ