ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಅಂಬೇಡ್ಕರ್ ಭವನದಲ್ಲಿ ಮಾತೆ ಸಾವಿತ್ರಿ ಬಾಫುಲೆ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ-ಪಿಯುಸಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ, ಸಾಧಕರಿಗೆ, ಜನಪದ ಗಾಯಕರಿಗೆ ಸನ್ಮಾನ ಮತ್ತು ಜಾನಪದ ಗಾಯನೋತ್ಸವ ಹಾಗೂ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿಗಳಿಗೆ ಗುರು ವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾಗಿದೆ. ಈ ದೇಶದ ರಾಜಕಾರಣಿಗಳು ಹಾಗೂ ಆಡಳಿತ ವರ್ಗದ ಚುನಾಯಿತ ಪ್ರತಿನಿಧಿಗಳಿಗೆ ಸಾಮಾಜಿಕ ಪರಿಕಲ್ಪನೆ ಎಂಬುದೇ ಇಲ್ಲ. ಈ ಕಾರಣದಿಂದಾಗಿಯೇ ಸಂವಿಧಾನ ಪರಿಪೂರ್ಣವಾಗಿ ಜಾರಿಯಾಗಲು ಸಾಧ್ಯವಾಗಿಲ್ಲ. ಪ್ರಾಮಾಣಿಕತೆ, ಸಂಸ್ಕಾರ, ಮಾನವೀಯತೆ ಹಾಗೂ ಸಾಮಾಜಿಕ ಕಳಕಳಿ ಇರುವ ಒಬ್ಬ ರಾಜಕಾರಣಿ ಇಲ್ಲ ಎಂದರು.ಅಸ್ಪೃಶ್ಯರು, ಶೋಷಿತ ವರ್ಗದ ಮೇಲೆ ಮತ್ತೊಂದು ಪ್ರಜ್ಞಾವಂತ ವರ್ಗವನ್ನು ಮೀಸಲಾತಿಗೆ ಸೇರಿಸಿದ್ದಾರೆ. ಇದಕ್ಕೆ ಯಾವ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಮಾದಿಗ ಸಮಾಜಕ್ಕಾಗಿ ಒಳ ಮೀಸಲಾತಿಗಾಗಿ ಬದ್ಧತೆ ತೋರಿಸುತ್ತಿದ್ದೇನೆ. ನನ್ನ ಮುಂದಿರುವ ಮಹನೀಯರ ಮಾನಸಿಕ ಸ್ಥಿತಿ ಅರಿತರೆ ಮಾದಿಗರಿಗೆ ನಾಲ್ಕನೇ ದರ್ಜೆಯೂ ಇಲ್ಲದಂತಿದೆ. ಅಂತಹ ಮನಸ್ಥಿತಿ ಹೊಂದಿರುವ ರಾಜಕಾರಣಿಗಳಿಗೆ ಎಚ್ಚರಿಕೆ ನೀಡುತ್ತಿದ್ದು, ಇನ್ನು ಮುಂದೆ ಇದೆಲ್ಲವನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಸುಭದ್ರವಾದ ಸರ್ಕಾರ ರಾಜ್ಯದಲ್ಲಿ ಇದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಗಟ್ಟಿಯಾಗಿದೆ. ಇವರೊಂದಿಗೆ ಜಿ.ಪರಮೇಶ್ವರ್, ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿರವರು ನಿಮ್ಮ ಸಮಾಜದ ಪರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಮಾರಂಭ ಉದ್ಘಾಟಿಸಿದ ಕೆಐಎಡಿಬಿ ಮೈಸೂರು ವಿಭಾಗ ವಿಶೇಷ ಭೂಸ್ವಾಧೀನಾಧಿಕಾರಿ ಎನ್.ವೆಂಕಟರಾಜು, ಐಎಎಸ್ , ಐಪಿಎಸ್ ಗಿಂತಲೂ ಪ್ರತಿಭಾವಂತರು ನಮ್ಮ ಸಮಾಜದಲ್ಲಿ ಇದ್ದಾರೆ. ನಾವು ಓದಿದ ಅಂಶಗಳು ಪ್ರಶ್ನೆಗಳಾಗಿ ಬಂದಿದ್ದರಿಂದ ನಾವು ಉನ್ನತ ಹುದ್ದೆ ಅಲಂಕರಿಸಿದ್ದೇವೆ ಅಷ್ಟೇ. ಆದರೆ, ನಮಗಿಂತಲೂ ಮೂರು ಪಟ್ಟು ಬುದ್ಧಿವಂತರು ಸಮಾಜದಲ್ಲಿದ್ದಾರೆ. ಆದ್ದರಿಂದ ಯಾರೂ ಬಿಗುಮಾನ ಹೊಂದಬಾರದು ಎಂದು ಕಿವಿಮಾತು ಹೇಳಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ,
ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿಗಳಿಗೆ ಗುರುವಂತನೆ ಸಲ್ಲಿಸಲಾಯಿತು. ಎಸ್ಸೆಸ್ಸೆಲ್ಸಿ - ಪಿಯುಸಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಜನಪದ ಗಾಯಕರನ್ನು ಸನ್ಮಾನಿಸಲಾಯಿತು.
‘ಶೂದ್ರರಿಗೆ ಅಕ್ಷರ ಕಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ಸಾವಿತ್ರಿ ಬಾಫುಲೆ ಅವರನ್ನು ಪಟ್ಟಭದ್ರರು ಕೆಸರು ಎರಚಿ ಅವಮಾನಿಸುತ್ತಿದ್ದರು. ಇದೆಲ್ಲವನ್ನು ಲೆಕ್ಕಿಸದೆ ಫುಲೆರವರು ಕ್ಲಿಷ್ಟಕರ ವಾತಾವರಣದಲ್ಲಿಯೂ ಅಸ್ಪೃಶ್ಯರಿಗೆ ವಿದ್ಯಾದಾನ ಮಾಡಿದರು. ನಾವು ಶಾರದಾ ದೇವಿ, ಸರಸ್ವತಿ ಅಂತ ಹೇಳುತ್ತೇವೆ. ಆ ಸ್ಥಾನದಲ್ಲಿ ಬೇರೆ ಯಾರಾದರು ಗೌರವಿಸಲ್ಪಡುತ್ತಾರೆ ಅಂದರೆ ಫುಲೆ ದಂಪತಿಗೆ ಸಲ್ಲುತ್ತದೆ.’