ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು:ಶಾಸಕ ಬಸನಗೌಡ ಪಾಟೀಲ ಯತ್ನಾಳ

KannadaprabhaNewsNetwork |  
Published : Dec 26, 2023, 01:31 AM ISTUpdated : Dec 26, 2023, 01:32 AM IST
ವಿಜಯಪುರದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯ ನಡೆಯಿತು. | Kannada Prabha

ಸಾರಾಂಶ

ವಿಜಯಪುರ: ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಾರುಕಟ್ಟೆಯಲ್ಲಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಬೀದಿ ದೀಪ ಅಳವಡಿಸಲಾಗಿದೆ, ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ. ದೇಶದಲ್ಲಿ ವಿಜಯಪುರ ಅತ್ಯುತ್ತಮ ವಾತಾರಣ ಇರುವ ನಗರಗಳ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿರುವುದೇ ಸಾಕ್ಷಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು,ಮುಂದೆಯೂ ಕೂಡ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು, ಪ್ರತಿ ನಾಲ್ಕೈದು ಅಂಗಡಿಗಳ ಮಧ್ಯ ಕಸದ ಡಬ್ಬಿ ಇಟ್ಟು, ಎರಡು ದಿನಕ್ಕೊಮ್ಮೆ ತೆಗೆದುಕೊಂಡು ಹೋಗಲು ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗುವುದು. ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ, ಸೂಕ್ತವಾದ ನಿಗದಿತ ಸ್ಥಳಾವಕಾಶ ಕಲ್ಪಿಸಿ, ಅಂಗಡಿಕಾರರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಸುಮಾರು 35 ಕಡೆ ತರಕಾರಿ ಮಾರುಕಟ್ಟೆ ಮಾಡಿದ್ದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆ ಆಗಿದ್ದು, ಸಂಚಾರಕ್ಕೆ ಅಡೆತಡೆ ಆಗುತ್ತಿಲ್ಲ. ನಗರದ ಸುತ್ತಮುತ್ತಲಿನ ರೈತರು ಕಾಯಿಪಲ್ಲೆ ಮಾರಾಟ ಮಾಡಲು ಹಾಗೂ ಸಾರ್ವಜನಿಕರಿಗೆ ತಾಜಾ ಮತ್ತು ಸಮೀಪಲ್ಲೇ ಕಾಯಿಪಲ್ಲೆ ಸಿಗುವಂತಾಗಿದೆ ಎಂದು ಹೇಳಿದರು.

ಬಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಗೋಕುಲ ಮಹಿಂದ್ರಕರ ಮಾತನಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳರ ಅಭಿವೃದ್ಧಿ ಕಾಳಜಿಯಿಂದ ನಿರೀಕ್ಷೆ ಮೀರಿ ನಗರ ಅಭಿವೃದ್ಧಿಗೊಂಡಿದೆ. ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅದಕ್ಕೆ ಅನುಗುಣವಾಗಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಆಗುವುದನ್ನು ಸರಿಪಡಿಸಬೇಕು. ಬೀದಿ ಬದಿ ವ್ಯಾಪಾರಿಗಳಿಂದ ಅಂಗಡಿಕಾರರಿಗೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಮಹಾನಗರ ಪಾಲಿಕೆ ಸದಸ್ಯರು, ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವ್ಯಾಪಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?
ಸಂಸ್ಕೃತಿಯ ಸಂರಕ್ಷಣೆ ಹೊಣೆ ಯುವಶಕ್ತಿ ಮೇಲಿದೆ: ಸಂಜೀವ ಚವ್ಹಾಣ