ಕನ್ನಡಪ್ರಭ ವಾರ್ತೆ ಉಡುಪಿ
ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶಾಖೆಯಲ್ಲಿ ಮನೆಯೇ ಗ್ರಂಥಾಲಯ ಯೋಜನೆಯಡಿ 130ನೇ ಗ್ರಂಥಾಲಯವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಬಸ್, ರೈಲು, ವಿಮಾನ ನಿಲ್ದಾಣ, ಆಸ್ಪತ್ರೆ ಸಹಿತ ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ವಿರಾಮ ಸಿಕ್ಕಾಗ ಓದಲು ಪುಸ್ತಕ ಭಂಡಾರ/ ಗ್ರಂಥಾಲಯ ನಿರ್ಮಾಣವನ್ನು ಅಗತ್ಯ ಸೇವೆಯಾಗಿ ಪರಿಗಣಿಸಬೇಕು. ಆಧುನಿಕ ಡಿಜಿಟಲ್ ಮಾಧ್ಯಮ ಬಂದ ಮೇಲೆ ಪುಸ್ತಕ ಓದುವುದು ಕಡಿಮೆಯಾಗಿದೆ. ಪ. ಪೂ. ಕಾಲೇಜಿನ ತನಕದ ವೇಳಾಪಟ್ಟಿಯಲ್ಲಿ ಗ್ರಂಥಾಲಯವೇ ಇಲ್ಲ. ಗ್ರಂಥಾಲಯಗಳು ದುರ್ಬಲವಾಗಿವೆ. ಈ ನಿಟ್ಟಿನಲ್ಲಿ ಶಾಲೆಗೊಂದು ಗ್ರಂಥಾಲಯ ಅಭಿಯಾನ ಆಗಬೇಕು ಎಂದು ಹೇಳಿದರು.ಜಪಾನಿನ ಮಿಯಾಜಾಕಿ ವಿವಿಯ ಪ್ರೊಫೆಸರ್ ಡಾ. ಹರೀಶ್ ಕುಮಾರ್ ಮಧ್ಯಸ್ಥ ಮಾತನಾಡಿ, ಸಾಗರೋತ್ತರ ರಾಷ್ಟ್ರಗಳಿಗೂ ಪುಸ್ತಕ/ ಗ್ರಂಥಾಲಯ ಅಭಿಯಾನ ವಿಸ್ತರಣೆಯಾಗಲಿ. ಈ ನಿಟ್ಟಿನಲ್ಲಿ ನಾನು ವಿಶೇಷ ಆಸಕ್ತಿ ವಹಿಸುವೆನು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮೊಬೈಲ್ ಸಂಸ್ಕೃತಿ ಹೆಚ್ಚಿದ್ದು ಯುವಜನರಲ್ಲಿ ಓದುವ ಹವ್ಯಾಸ ಮೂಡಿಸುವ ಹೊಣೆಗಾರಿಕೆಯನ್ನು ಸಮಾಜಮುಖಿ ಕಾರ್ಯಕ್ರಮದ ಮೂಲ ನಿಭಾಯಿಸಬೇಕು ಎಂದು ನುಡಿದರು.