ಕನ್ನಡಪ್ರಭ ವಾರ್ತೆ ವಿಜಯಪುರ
ಬಿಜೆಪಿ ಮರು ಸೇರ್ಪಡೆ ವಿಚಾರದ ಕುರಿತು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಯಕರು, ರಾಜ್ಯದ ನಾಯಕರು ಹಾಗೂ ಪರಿವಾರದವರು ಗಮನಿಸಬೇಕು. ಈ ಕಾರಣದಿಂದ ನಾನು ಲೋಕಸಭಾ ಚುನಾವಣೆ ಸ್ಪರ್ಧೆ ಮಾಡಿದ್ದೆ. ಎಲ್ಲರೂ ಈಗ ಬಾ ಬಾ ಎಂದು ಕರೆಯುತ್ತಿದ್ದಾರೆ. ಆದರೆ, ಸುಮ್ಮನೇ ಹೋಗೋದಲ್ಲ ಏನಾಗಬೇಕೆಂಬುವುದನ್ನು ಕುಳಿತು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಂಡು ನಂತರ ಪಕ್ಷಕ್ಕೆ ಹೋಗುವುದನ್ನು ತೀರ್ಮಾನಿಸಲಾಗುವುದು. ನನ್ನ ಮನೆಯೊಳಗೆ(ಬಿಜೆಪಿ ಪಕ್ಷದೊಳಗೆ) ಹೋಗಲು ಬರಲು ಷರತ್ತುಗಳಿಲ್ಲ. ಆದರೆ, ಶುದ್ಧೀಕರಣ ಆಗಬೇಕು ಎಂದು ಆಗ್ರಹಿಸಿದರು.ಬಿಎಸ್ವೈ ಕುಟುಂಬದ ವಿರುದ್ಧ ಕಿಡಿ:
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಡೀ ದೇಶದಲ್ಲಿ ಬಿಜೆಪಿಯಲ್ಲಿ ಅಪ್ಪ ಮಗ, ಮತ್ತೊಬ್ಬ ಮಗ ಇವರ ಕಂಟ್ರೋಲ್ನಲ್ಲಿ ಬಿಜೆಪಿ ಇಲ್ಲ. ಇಲ್ಲಿ ಯಡಿಯೂರಪ್ಪ ಕೇಂದ್ರ ಚುನಾವಣಾ ಸಮಿತಿ ಸದಸ್ಯರು, ಅವರ ಪುತ್ರ ರಾಘವೇಂದ್ರ ಸಂಸದ, ಮತ್ತೋರ್ವ ಮಗ ವಿಜಯೇಂದ್ರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ. ಕಾಂಗ್ರೆಸ್ ಹಾಗೂ ಕುಟುಂಬ ಮುಕ್ತ ದೇಶ ಮಾಡುತ್ತೇನೆಂದು ಎಲ್ಲ ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಾಗಾದರೇ ರಾಜ್ಯ ಬಿಜೆಪಿ ಕೇಂದ್ರದ ಕಂಟ್ರೋಲ್ನಲ್ಲಿ ಇದೆಯೋ? ಇಲ್ಲವೋ ಎಂದು ಪ್ರಶ್ನೆ ಹಾಕಿದರು. ಇಂತಹ ವಿಷಯಗಳ ಚರ್ಚೆ ಮಾಡಿ ನಂತರ ಬಿಜೆಪಿ ಸೇರ್ಪಡೆ ಕುರಿತು ತೀರ್ಮಾನ ಮಾಡುತ್ತೇನೆ ಎಂದರು.ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದು ಫಿಕ್ಸ್: ಈಶ್ವರಪ್ಪ ಭವಿಷ್ಯ
ಸಿಬಿಐಗೆ ಪ್ರಕರಣ ನೀಡಿ ರಾಜೀನಾಮೆ ಕೊಡಿ, ಕ್ಲಿನ್ಚೀಟ್ ಪಡೆದು ಅಧಿಕಾರಕ್ಕೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದರು.
ಸಿಎಂ ದಾಖಲೆ ಇಲ್ಲದೆ ಹೇಳಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಹಗರಣದ ಬಗ್ಗೆ ಬಿಜೆಪಿ ಕಾರ್ಯಕರ್ತರು ದಾಖಲೆ ನೀಡುತ್ತಾರೆ. ಇದಕ್ಕೆ ಏನು ಹೇಳ್ತೀರಿ?. ಕಾಂಗ್ರೆಸ್ ಲೂಟಿ ಮಾಡ್ತಾ ಮಾಡ್ತಾ ಮುಚ್ಚಿಕೊಂಡು ಬಂದಿತ್ತು. ಇನ್ಮುಂದೆ ಮುಚ್ಚೋಕೆ ಆಗಲ್ಲ ಎಂದು ಕಿಡಿಕಾರಿದರು.ಬೇಗ ಚುನಾವಣೆ ಬರಲಿದೆ:
ಕಾಂಗ್ರೆಸ್ ಪಕ್ಷದ ಇನ್ನಷ್ಟು ಹಗರಣಗಳು ಹೊರಗೆ ಬೀಳುತ್ತವೆ. ಲೂಟಿ ಮಾಡಿದ ಸಿಎಂ, ಇನ್ನೂ ಅನೇಕ ಮಂತ್ರಿಗಳು ಹೊರಗೆ ಬರುತ್ತಾರೆ. ಜೈಲಿಗೆ ಹೋಗಿ ಸಿಎಂ, ಸಚಿವರಿಗೆ ನಾವು ಹಣ್ಣು ಕೊಡಬೇಕು, ಅನುಮಾನವೇ ಬೇಡ ಎಂದು ಲೇವಡಿ ಮಾಡಿದರು.