ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶುಕ್ರವಾರ ರಾಜಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದಲ್ಲಿ ಲಡ್ಡು ಉತ್ಸವವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬಾಲಕೃಷ್ಣನಿಗೆ ಲಡ್ಡು ಎಂದರೆ ಬಹುಪ್ರಿಯ, ಆದ್ದರಿಂದ 108 ಬಗೆಯ ಲಡ್ಡುಗಳನ್ನು ತಯಾರಿಸಿ, ಅವುಗಳನ್ನು ಭಂಡಾರಕೇರಿ ಮಠಾಧೀಶರಿಂದ ಕೃಷ್ಣನಿಗೆ ಅರ್ಪಿಸಿದ್ದೇವೆ. ಇದು ಕೂಡ ಕೃಷ್ಣನಿಗೆ ಪೂಜೆಯ ರೂಪದಲ್ಲಿ ಸಂಕಲ್ಪಿಸಿದ್ದೇವೆ ಎಂದರು.ಮುಖ್ಯ ಅತಿಥಿಯಾಗಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಆತಂಕಕ್ಕೆ ಈಡಾಗುತ್ತಿದೆ. ಹಿಂದೂ ಧರ್ಮ ಒಗ್ಗಟ್ಟಾಗಬೇಕಾಗಿದೆ ಎಂದರು.
ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಮಂಡ್ಯದ ಉದ್ಯಮಿ ರಮೇಶ್ ಆಚಾರ್ಯ ಮತ್ತು ರಾಜಸ್ಥಾನ ಸಮಾಜದ ಪ್ರತಿನಿಧಿ ದಶರಥ ಸಿಂಗ್ ಅವರನ್ನು ಪರ್ಯಾಯ ಶ್ರೀಗಳು ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
----ಬೃಹತ್ ಲಡ್ಡಿನಲ್ಲಿ ಕೃಷ್ಣನ ಪ್ರತಿಕೃತಿ
ಕೃಷ್ಣನಿಗೆ 108 ಬಗೆಯ ಲಡ್ಡುಗಳನ್ನು ಅರ್ಪಣೆ ಮಾಡಿದ ಪುತ್ತಿಗೆ ಶ್ರೀಗಳು, ಬೃಹತ್ ಲಡ್ಡಿನಲ್ಲಿದ್ದ ಕಡೆಗೋಲು ಕೃಷ್ಣನ ಪ್ರತಿಕೃತಿಯನ್ನು ಅನಾವರಣಗೊಳಿಸುವ ಮೂಲಕ ವೈಶಿಷ್ಟಪೂರ್ಣವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.