ಮಕ್ಕಳು ಓದುವ ಕಟ್ಟಡದ ಗುಣಮಟ್ಟದಲ್ಲಿ ರಾಜಿ ಬೇಡ: ಶಾಸಕ ತಮ್ಮಯ್ಯ

KannadaprabhaNewsNetwork |  
Published : Aug 07, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಈ ಕಟ್ಟಡದಲ್ಲಿ ಓದುವ ಮಕ್ಕಳು ಬಡವರ ಮಕ್ಕಳು. ಅವರಿಗೆ ಎಲ್ಲಾ ಮೂಲ ಸೌಕರ್ಯ ನೀಡಬೇಕಿದೆ. ಹಾಗಾಗಿ, ಈ ಕಟ್ಟಡ ನಿರ್ಮಾಣದಲ್ಲಿ ಹೆಚ್ಚು ಲಾಭ ನಿರೀಕ್ಷಿಸದೇ ಗುಣಮಟ್ಟದ ಕಾಮಗಾರಿ ನಡೆಸುವಂತೆ ಚಿಕ್ಕಮಗಳೂರು ಶಾಸಕ ಎಚ್‌.ಡಿ.ತಮ್ಮಯ್ಯ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ನಿಲಯದ ಹೆಚ್ಚುವರಿ ನೂತನ ಕಟ್ಟಡದ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಈ ಕಟ್ಟಡದಲ್ಲಿ ಓದುವ ಮಕ್ಕಳು ಬಡವರ ಮಕ್ಕಳು. ಅವರಿಗೆ ಎಲ್ಲಾ ಮೂಲ ಸೌಕರ್ಯ ನೀಡಬೇಕಿದೆ. ಹಾಗಾಗಿ, ಈ ಕಟ್ಟಡ ನಿರ್ಮಾಣದಲ್ಲಿ ಹೆಚ್ಚು ಲಾಭ ನಿರೀಕ್ಷಿಸದೇ ಗುಣಮಟ್ಟದ ಕಾಮಗಾರಿ ನಡೆಸುವಂತೆ ಚಿಕ್ಕಮಗಳೂರು ಶಾಸಕ ಎಚ್‌.ಡಿ.ತಮ್ಮಯ್ಯ ಹೇಳಿದರು.

ಸುಮುಖನಗರದಲ್ಲಿ ಗುರುವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ನಿಲಯದ ಹೆಚ್ಚುವರಿ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಗುಣಮಟ್ಟದ ವಸ್ತು ಬಳಸಿ ಕಟ್ಟಡ ನಿರ್ಮಿಸಿ, ಆಗ ಕಾಮಗಾರಿ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ. ಅಧಿಕಾರಿಗಳು ಆಗಾಗ ಪರಿಶೀಲಿಸಬೇಕು. ಲೋಪ ದೋಷ ಕಂಡು ಬಂದರೆ ತಕ್ಷಣ ಗಮನಕ್ಕೆ ತನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಚರಂಡಿ-ರಸ್ತೆ ಮಾಡಿ ಹಾಳಾದರೆ ಮತ್ತೆ ದುರಸ್ತಿ ಮಾಡಬಹುದು. ಆದರಿದು ಸರ್ಕಾರಿ ಕಟ್ಟಡ. ಇವೆಲ್ಲಾ ಶಾಶ್ವತವಾದ ಕೆಲಸ ಗಳಾಗಿವೆ. ಹೆಚ್ಚು ಲಾಭವನ್ನು ಬಯಸದೆ ಗುಣಮಟ್ಟದ ಕಟ್ಟಡ ನಿರ್ಮಿಸಿ, ಹತ್ತಾರು ವರ್ಷಗಳ ಬಾಳಿಕೆ ಬರುವಂತೆ ಮಾಡಿ. ಏಕೆಂದರೆ, ಈ ಕಟ್ಟಡದಲ್ಲಿ ಓದುವ ಮಕ್ಕಳು, ಬಡವರ ಮನೆಯ ಮಕ್ಕಳಾಗಿದ್ದಾರೆ ಎಂದರು.

ದೊಡ್ಡವರ, ಉಳ್ಳವರ ಮಕ್ಕಳು ಹಾಸ್ಟಲ್‌ಗಳಿಗೆ ಬರುವುದಿಲ್ಲ. ಬಡವರು, ಹಿಂದುಳಿದ ವರ್ಗದ ಮಕ್ಕಳು ಮಾತ್ರ ಇಲ್ಲಿಗೆ ಬರುತ್ತಾರೆ. ಶಿಕ್ಷಣ, ಆರೋಗ್ಯ ಮತ್ತು ಜನರ ಬದುಕನ್ನು ಕಟ್ಟಿಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವುದು ಜನಪ್ರತಿನಿಧಿಗಳ, ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ಶಾಸಕರಾದ ಸಂದರ್ಭದಲ್ಲಿ ಹೊಸ ಕಟ್ಟಡ ಉದ್ಘಾಟನೆ ಆಗಿತ್ತು. ಆದರೆ, ಈ ಕಟ್ಟಡ ಸಾಕಾಗುವುದಿಲ್ಲ ಎಂಬ ಒತ್ತಡದ ಮೇರೆಗೆ ನಿಕಟ ಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಇಲಾಖೆ ನಿಕಟ ಪೂರ್ವ ಸಚಿವ ಜಮೀರ್ ಅಹಮದ್ ಅವರಿಗೆ ಮನವಿ ಮಾಡಿದ ಮೇರೆಗೆ ₹3.50 ಕೋಟಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ನಿಲಯದ ಹೆಚ್ಚುವರಿ ನೂತನ ಕಟ್ಟಡದ ಕಾಮಗಾರಿಗೆ ಮಂಜೂರು ಮಾಡಿದ್ದಾರೆ ಎಂದರು.

ಈ ಕಟ್ಟಡದಿಂದ ಚಿಕ್ಕಮಗಳೂರು ಜಿಲ್ಲೆಯ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸರ್ಕಾರ ವಿದ್ಯಾರ್ಥಿ ನಿಲಯ ಮಂಜೂರು ಮಾಡಿದೆ ಎಂದ ಅವರು, ನಮ್ಮ ದೇಶದ ಸತ್ಪ್ರಜೆಗಳಾಗಿ ಸಂಸ್ಕಾರ, ಸಂಸ್ಕೃತಿ ಹೊಂದುವಂತಹ ಶಿಕ್ಷಣವನ್ನು ನೀಡಬೇಕು ಎಂದು ಹೇಳಿದರು.

ಜಗಜ್ಯೋತಿ ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್, ರಾಷ್ಟ್ರಪತಿ ಅಬ್ದುಲ್ ಕಲಾಂ ಅವರುಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಡವರ, ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣ ಪಡೆದು ಸಮಾಜದ ಸತ್ಪ್ರಜೆಯಾಗಿ ಬದುಕಬೇಕು ಎಂಬ ಮಾತನ್ನು ಹೇಳಿದ್ದರು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಾರ್ಕಂಡಯ್ಯ, ತಾಲೂಕು ವಿಸ್ತರಣಾಧಿಕಾರಿ ಸೌಂದರ್ಯ, ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸದಾನಂದ ಉಪಸ್ಥಿತರಿದ್ದರು.

ಫೋಟೊ:

ಸುಮುಖನಗರದಲ್ಲಿ ಗುರುವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ನಿಲಯದ ಹೆಚ್ಚುವರಿ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ಎಚ್‌.ಡಿ.ತಮ್ಮಯ್ಯ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಎಂ ಡಾ. ಪರಮೇಶ್ವರ್‌ ಜನ್ಮದಿನಾಚರಣೆ
75 ಬುದ್ಧ ವಿಗ್ರಹ ವಿತರಣೆಗೆ ಚಾಲನೆ