ಹೈನೋದ್ಯಮದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ವಿಸ್ತರಣಾಧಿಕಾರಿ ಭಾನುಪ್ರಕಾಶ್

KannadaprabhaNewsNetwork |  
Published : Sep 25, 2025, 01:00 AM IST
23ಕೆಬಿಪಿಟಿ.2.ಬಂಗಾರಪೇಟೆ ತಾಲೂಕಿನ ಉಕ್ಕುಂದ ಗ್ರಾಮದ ಡೇರಿ ಸಂಘದ ಸಭೆಯನ್ನು ಉದ್ಘಾಟಿಸುತ್ತಿರುವ ವಿಸ್ತರಣಾಧಿಕಾರಿ ಭಾನುಪ್ರಕಾಶ್. | Kannada Prabha

ಸಾರಾಂಶ

ತಾಲೂಕಿನ ಉಕ್ಕುಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮದ ಸಂಘವು ಇದುವರೆಗೂ ಯಾವುದೇ ಅವ್ಯವಹಾರಕ್ಕೆ ದಾರಿ ಮಾಡಿಕೊಡದೆ ಒಗ್ಗಟ್ಟಿನಿಂದ ಗುಣಮಟ್ಟದ ಹಾಲನ್ನು ಸಂಘಕ್ಕೆ ಸರಬರಾಜು ಮಾಡಿ ಲಾಭದಲ್ಲಿ ಸಂಘವನ್ನು ನಡೆಸಲಾಗುತ್ತಿದೆ. ಇದೇ ರೀತಿ ಮುಂದೆಯೂ ಗುಣಮಟ್ಟದ ಹಾಲು ಸರಬರಾಜಿಗೆ ಎಲ್ಲರೂ ಆದ್ಯತೆಯನ್ನು ನೀಡಬೇಕು ಎಂದರು.

ಬಂಗಾರಪೇಟೆ: ಹಾಲು ಉತ್ಪಾದಕರ ಸಂಘದಲ್ಲಿ ಯಾರೂ ಸಹ ರಾಜಕೀಯ ಹಸ್ತಕ್ಷೇಪ ಮಾಡದೇ ಎಲ್ಲರೂ ಪರಸ್ಪರ ಸಹಕಾರದೊಂದಿಗೆ ಸಂಘವನ್ನು ಮುನ್ನಡೆಸಿದರೆ ಸಂಘದ ಜೊತೆ ಹೈನೋದ್ಯಮ ಸಹ ಉಳಿಯುತ್ತದೆ ಎಂದು ಒಕ್ಕೂಟದ ವಿಸ್ತರಣಾಧಿಕಾರಿ ಎಂ.ಎಸ್.ಭಾನುಪ್ರಕಾಶ್ ಹೇಳಿದರು.

ತಾಲೂಕಿನ ಉಕ್ಕುಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮದ ಸಂಘವು ಇದುವರೆಗೂ ಯಾವುದೇ ಅವ್ಯವಹಾರಕ್ಕೆ ದಾರಿ ಮಾಡಿಕೊಡದೆ ಒಗ್ಗಟ್ಟಿನಿಂದ ಗುಣಮಟ್ಟದ ಹಾಲನ್ನು ಸಂಘಕ್ಕೆ ಸರಬರಾಜು ಮಾಡಿ ಲಾಭದಲ್ಲಿ ಸಂಘವನ್ನು ನಡೆಸಲಾಗುತ್ತಿದೆ. ಇದೇ ರೀತಿ ಮುಂದೆಯೂ ಗುಣಮಟ್ಟದ ಹಾಲು ಸರಬರಾಜಿಗೆ ಎಲ್ಲರೂ ಆದ್ಯತೆಯನ್ನು ನೀಡಬೇಕು ಎಂದರು.

ರೈತರು ಪೂರೈಸುವ ಹಾಲಿನ ಗುಣಮಟ್ಟಕ್ಕೆ ತಕ್ಕಂತೆ ದರ ಸಿಗಲಿದೆ, ಒಬ್ಬರಿಗೆ ಒಂದು ಬೆಲೆ ಮತ್ತೊಬ್ಬರಿಗೆ ಮತ್ತೊಂದು ಬೆಲೆ ಸಿಗುವುದಿಲ್ಲ, ಅಲ್ಲದೆ ಪಾರದರ್ಶಕವಾಗಿ ಆಡಳಿತ ನೀಡಲು ಹಾಲು ಒಕ್ಕೂಟ ರೈತರ ಮೊಬೈಲ್‌ಗೆ ಎಲ್ಲಾ ಮಾಹಿತಿ ಒದಗಿಸುವ ವಿನೂತನ ಕಾರ್ಯ ಸಹ ಈಗ ಆರಂಭಿಸಿದೆ, ಇದರಿಂದ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದರು.

ಸಂಘದ ಅಧ್ಯಕ್ಷ ಜಿ.ವರದಪ್ಪ, ಉಪಾಧ್ಯಕ್ಷ ತಿಮ್ಮರಾಯನಾಯಕ,ನಿರ್ದೇಶಕರಾದ ಮಂಜುನಾಥ್,ಅಶೋಕ್ ಕುಮಾರ್,ಕೃಷ್ಣಪ್ಪ,ವರದಾಂಜನೇಯ,ನಾಗರಾಜು,ಕಾರ್ಯದರ್ಶಿ ಎನ್.ಕೃಷ್ಣಯ್ಯ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ