ಹೂವಿನಹಡಗಲಿ: ಸಹಕಾರಿ ಕ್ಷೇತ್ರದಲ್ಲಿ ಸ್ವಾರ್ಥಕ್ಕೆ ಜಾಗ ಇದ್ದರೆ ಬ್ಯಾಂಕುಗಳು ಅಭಿವೃದ್ಧಿ ಬದಲು ದಿವಾಳಿಯಾಗುತ್ತವೆ ಎಂದು ಮಹಾವೀರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ ಜೈನ್ ಹೇಳಿದರು.
ಸಹಕಾರಿ ಕ್ಷೇತ್ರದಲ್ಲಿ ಯಾರು ದ್ರೋಹ ಬಗೆಯುವ ಕೆಲಸ ಆಗದಂತೆ ನೋಡಿಕೊಳ್ಳಬೇಕಿದೆ. ಸಂಘದ ನಿರ್ದೇಶಕರು ಸೇವಾ ಮನೋಭಾವನೆ ಇಟ್ಟುಕೊಂಡು ಕೆಲಸ ಮಾಡಬೇಕಿದೆ. ಬೈಲಾ ಉಲ್ಲಂಘನೆ ಹಾಗೂ ಅವ್ಯವಹಾರಕ್ಕೆ ಅವಕಾಶ ಇಲ್ಲದಂತೆ ಆಡಳಿತ ಮಾಡಬೇಕಿದೆ ಎಂದರು.
ನಿರ್ದೇಶಕ ಎಂ.ಶಾಂತರಾಜ, ಅರವಳ್ಳಿ ವೀರಣ್ಣ, ಮೇಘಾ ಜೈನರ್ ಸೇರಿದಂತೆ ಇತರರು ಮಾತನಾಡಿದರು.ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ:
ಆರ್.ಬೊಮ್ಮಣ್ಣ, ಎ.ಯಶೋಧರಗೌಡ, ಎಂ.ಶಾಂತರಾಜ, ಡಾ.ಧರ್ಮಣ್ಣ, ಜೆ.ವಿಜಯಕುಮಾರ, ಎಚ್.ಡಿ.ಅಜಿತ್, ಆಶಾ ಪಿ.ಗುಂಜಾಳ್, ಎಚ್.ಪ್ರಸನ್ನ, ವಿಪುಲ್ ಜೈನ್, ಸುಚೇತ ಬಿ.ಜೈನ್, ಮೇಘಾ ಜೈನರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಕೆ.ಬಡಿಗೇರ ತಿಳಿಸಿದ್ದಾರೆ.