ಕನ್ನಡಪ್ರಭ ವಾರ್ತೆ, ಭದ್ರಾವತಿ
ನಗರದ ಬಿ.ಎಚ್. ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ, ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.
ಭದ್ರಾವತಿ ತಾಲೂಕಿನ ಕುರುಬರ ಸಂಘ ಶೈಕ್ಷಣಿಕ ಕ್ರಾಂತಿ ಮೂಲಕ ಇಡೀ ರಾಜ್ಯದಲ್ಲಿ ಗಮನ ಸೆಳೆದಿದೆ. ಹುಟ್ಟಿದ ಮೇಲೆ, ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಪಡಬಾರದು. ಜಾತಿಯ ಇತಿಹಾಸ, ಸಂಸ್ಕೃತಿ ತಿಳಿಯದಿದ್ದರೆ ಮಾತ್ರ ಕೀಳರಿಮೆ ಮೂಡಲು ಸಾಧ್ಯ ಎಂದರು.ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ. ಸಂತೋಷ್ ಮಾತನಾಡಿ, ಸಮಾಜ ಬಾಂಧವರ ನಡುವೆ ಬಾಂಧವ್ಯ ಬೆಳೆಯಲು ಮತ್ತು ಸಮಾಜದ ಪ್ರತಿಭಾವಂತರನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಮುಖ್ಯ. ಸೇವಾ ಭಾವನೆ ರೂಢಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಗೌರವ ದೊರೆಯಲು ಸಾಧ್ಯ ಎಂದು ಹೇಳಿದರು.
- - - ಟಾಪ್ ಕೋಟ್ಹಾಲುಮತ ಸಮಾಜದವರು ಒಟ್ಟುಗೂಡಿದರೆಂದರೆ ಇತರರಲ್ಲಿ ಸಂಚಲನ ಮೂಡುತ್ತದೆ. ಆದರೆ, ನಾವು ಹಾಲಿನಂತೆ ಶುದ್ಧವಾಗಿ ಬದುಕೋಣ. ಹಾಲುಮತ ಸಮಾಜ ಉತ್ತಮ ಇತಿಹಾಸ ಹಾಗೂ ಧಾರ್ಮಿಕ ಸಂಸ್ಕೃತಿಯನ್ನು ಒಳಗೊಂಡಿರುವ ಸಮಾಜವಾಗಿದೆ. ವಿದ್ಯೆ, ವಿನಯ ಕಲಿಸಬೇಕು. ಸಮಾಜದ ಕಾರ್ಯಕ್ರಮಗಳಲ್ಲಿ ಒಟ್ಟುಗೂಡಿ ಸಮಾಜದ ಏಳಿಗೆಗೆ ಕಾರಣರಾಗಬೇಕು
- ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಪೀಠ- - -
-ಡಿ26-ಬಿಡಿವಿಟಿ1:ಕಾರ್ಯಕ್ರಮದಲ್ಲಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.