ಕನ್ನಡಪ್ರಭ ವಾರ್ತೆ ಧಾರವಾಡ
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆಯ ದಿನಾಂಕದ ಲೆಟರ್ ಹೆಡ್ ದುರುಪಯೋಗಪಡಿಸಿಕೊಂಡ ಕೆಲವರು ಬೇಕಾದಂತೆ ಬರೆದು ಆ ಪತ್ರವನ್ನು ವೈರಲ್ ಮಾಡಿದ್ದಾರೆ. ಅದರ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಅಭಿವೃದ್ಧಿ ಕೆಲಸ ವಿಳಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿ ಕೆಲಸಕ್ಕೆ ಹಣದ ಕೊರತೆ ಇದೆ. ಈ ವರ್ಷ ಗ್ಯಾರಂಟಿಗೆ ₹56 ಸಾವಿರ ಕೋಟಿ ಬೇಕು. ಮುಖ್ಯಮಂತ್ರಿಗಳೇ ಇದನ್ನು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುವ ಭರವಸೆಯೂ ಇದೆ ಎಂದರು.ಕಾಂಗ್ರೆಸ್ನಲ್ಲಿ ಲಿಂಗಾಯತರ ಕಡೆಗಣನೆ ಎಂಬ ಗೋವಿಂದ ಕಾರಜೋಳ ಆರೋಪ ವಿಚಾರವಾಗಿ ತಿರಗೇಟು ನೀಡಿದ ಶಾಸಕ ಬಿ.ಆರ್.ಪಾಟೀಲ, ಬಿಜೆಪಿಯಲ್ಲಿ ಯಡಿಯೂರಪ್ಪ ಪರಿಸ್ಥಿತಿ ಏನಾಗಿದೆ? ಕಾರಜೋಳ ಇದೇ ರೀತಿ ಹೇಳುತ್ತಾರೆ. ಕಾಂಗ್ರೆಸ್ ನಲ್ಲಿ ಲಿಂಗಾಯತರು ಗಟ್ಟಿಯಾಗಿದ್ದೇವೆ. ನಮ್ಮಲ್ಲಿ ಎಲ್ಲರನ್ನೂ ಮುಖ್ಯಮಂತ್ರಿಗಳು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.