ಉದ್ಯಮವಾಗಿ ಕೃಷಿ ಪರಿಗಣಿಸಿದರೆ ಲಾಭ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

KannadaprabhaNewsNetwork |  
Published : Aug 31, 2025, 01:08 AM IST
ಪೋಟೋ: 30ಎಸ್‌ಎಂಜಿಕೆಪಿ06ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ಶನಿವಾರ ರೈತ ಉತ್ಪಾದಕ ಕಂಪನಿಗಳ ಒಕ್ಕೂಟಗಳ ಪಾತ್ರ ಕುರಿತು ಜಿಲ್ಲಾ ಪಂಚಾಯಿತಿ, ಸಹೋದಯ ರೈತ ಉತ್ಪಾದಕ ಕಂಪನಿಗಳ ಒಕ್ಕೂಟ ಲಿಮಿಟೆಡ್, ಕೃಷಿ ಇಲಾಖೆ ಹಾಗೂ ಚೈತನ್ಯ ರೂರಾಲ್ ಡೆವಲಪ್ ಮೆಂಟ್ ಸೊಸೈಟಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಿದರು.  | Kannada Prabha

ಸಾರಾಂಶ

ರೈತರು ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮವಾಗಿ ಪರಿಗಣಿಸಿದಾಗ ಮಾತ್ರ ಕೃಷಿಯಲ್ಲೂ ಲಾಭ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರೈತರು ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮವಾಗಿ ಪರಿಗಣಿಸಿದಾಗ ಮಾತ್ರ ಕೃಷಿಯಲ್ಲೂ ಲಾಭ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ಶನಿವಾರ ರೈತ ಉತ್ಪಾದಕ ಕಂಪನಿಗಳ ಒಕ್ಕೂಟಗಳ ಪಾತ್ರ ಕುರಿತು ಜಿಲ್ಲಾ ಪಂಚಾಯಿತಿ, ಸಹೋದಯ ರೈತ ಉತ್ಪಾದಕ ಕಂಪನಿಗಳ ಒಕ್ಕೂಟ ಲಿಮಿಟೆಡ್, ಕೃಷಿ ಇಲಾಖೆ ಹಾಗೂ ಚೈತನ್ಯ ರೂರಾಲ್ ಡೆವಲಪ್ ಮೆಂಟ್ ಸೊಸೈಟಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ದೇಶದ ಬಹುದೊಡ್ಡ ಸಮೂಹಕ್ಕೆ ಕೃಷಿಯೇ ಪ್ರಮುಖ ವೃತ್ತಿಯಾಗಿದೆ.ದುರಂತ ಅಂದ್ರೆ ಇಲ್ಲಿಯೇ ಹೆಚ್ಚು ತೊಂದರೆಗಳಿವೆ. ಅನಿಶ್ಚಿತ ತೆಯಲ್ಲಿ ರೈತರು ಬೆಳೆ ಬೆಳೆಯುತ್ತಿದ್ದಾರೆ. ಬೆಳೆದ ಬೆಳಗೆ ಸರಿಯಾದ ಬೆಳೆ ಸಿಗದ ಪರಿಸ್ಥಿತಿಗಳಿವೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಪ್ರಯತ್ನ ಹಲವಾರು ವರ್ಷಗಳಿಂದಲೂ ನಡೆದಿದೆ. ಆದರೂ ಅದಕ್ಕೆ ಪರಿಹಾರ ಸಿಗದಂತಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡದೆ ಅದನ್ನು ಉದ್ಯಮವಾಗಿ ಪರಿಗಣಿಸಬೇಕಿದಾಗ ಮಾತ್ರ ಬೇರೆಯವ ಸಹಾಯಕ್ಕೆ ಕಾಯದೆ, ತಮ್ಮಿಂದ ಇತರರಿಗೆ ಸಹಾಯ ಮಾಡಲು ಸಾಧ್ಯವಾಗಲಿದೆ ಎಂದರು.

ಕೃಷಿ ಉತ್ಪನ್ನಗಳಿಗೆ ಈಗ ಮಾರುಕಟ್ಟೆ ಸಮಸ್ಯೆಯಿದೆ. ಇದನ್ನು ನಿಭಾಯಿಸಲು ಸರ್ಕಾರ ಹಲವು ರೀತಿ ಪ್ರಯತ್ನ ನಡೆಸುತ್ತಿರುವುದರ ನಡುವೆಯೇ ಸಹಕಾರಿ ಕ್ಷೇತ್ರವೂ ಕೂಡ ಪ್ರಯತ್ನ ನಡೆಸಿದೆ. ಆದರೆ ಸಹಕಾರಿ ಕ್ಷೇತ್ರದಲ್ಲಿ ಒಂದಷ್ಟು ಲೋಪದೋಷಗಳು ಆಗಿದ್ದನ್ನುನಾವು ನೋಡಿದ್ದೇವೆ. ಇಂತಹ ಸಂದರ್ಭದಲ್ಲಿ ರೈತ ಉತ್ಪಾದಕ ಕಂಪನಿಗಳ ಪಾತ್ರ ದೊಡ್ಡದಿದೆ ಎಂದರು.

ಜಿಲ್ಲೆಯಲ್ಲಿ ರೈತ ಉತ್ಪಾದಕ ಕಂಪನಿಗಳ ಸ್ಥಾಪನೆ ಮತ್ತು ಉತ್ತೇಜನಕ್ಕೆ ಸಹೋದಯ ರೈತ ಉತ್ಪಾದಕ ಕಂಪನಿಗಳ ಒಕ್ಕೂಟ ಮತ್ತು ಚೈತನ್ಯ ರೂರಲ್ ಡೆವೆಲಪ್ಮೆಂಟ್ ಸೊಸೈಟಿ ಬಹಳ ಒಳ್ಳೆಯ ಕೆಲಸ ಮಾಡುತ್ತಿವೆ. ಇಂತಹ ಪ್ರಯತ್ನಗಳ ಮೂಲಕ ರೈತರು ಸಂಘಟಿತರಾಗಿ ಕೆಲಸ ಮಾಡಿದರೆ ರೈತರ ಉತ್ಪನ್ನಗಳಿಗೆ ಒಳ್ಳೆಯ ಬೆಲೆ ಪಡೆಯಲು ಸಾಧ್ಯವಾಗಲಿದೆ. ಸರ್ಕಾರಿ ವ್ಯವಸ್ಥೆಯಲ್ಲಿ ರೈತ ಉತ್ಪಾದಕ ಕಂಪನಿಗಳಿಗೆ ನೆರವು ಅಗತ್ಯವಿದ್ದರೆ ಅದನ್ನು ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರದ ಸೌಲಭ್ಯಗಳನ್ನು ಹಂಚಿಕೆ ಮಾಡುವಾಗ ಎಸ್ಟಿ ಎಸ್ಟಿಗೆ ಇಷ್ಟು, ಮಹಿಳೆಯರಿಗೆ ಇಷ್ಟು, ಎಎಲ್‌ಎ, ಎಂಪಿ ಕೋಟಾ ಇಷ್ಟು ಎಂದುಹಂಚಿಕೆ ಮಾಡುವ. ಪದ್ದತಿ ಹಾಗೆಯೇ ಇದೆ. ಇನ್ನಾದರೂ ಕೂಡ ಅಧಿಕಾರಿಗಳ ಮನೋಭಾವ ಬದಲಾಗಬೇಕಿದೆ ಎಂದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯಾ ನಿರ್ವಹಣಾಧಿಕಾರಿ ಎನ್.ಹೇಮಂತ್, ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ತಜ್ಞ ನಿರ್ದೇಶಕ ಭದ್ರೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಡಾ.ಕಿರಣ್ ಕುಮಾರ್, ನಬಾರ್ಡ್ ಡಿಡಿಎಂ ಶರತ್ ಪಿ.ಗೌಡ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎ.ಬಾಬುರತ್ನ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ ,ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಿವಕುಮಾರ್, ಸಹೋದಯ ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಬಿ.ಅನುಪ್, ಉಪಾಧ್ಯಕ್ಷ ಸತೀಶ್ ಇದ್ದರು.

ಜಿಲ್ಲೆಯ ವಿವಿಧೆಡೆಗಳಿಂದ ಬಂದಿದ್ದ ನೂರಾರು ರೈತರು ಕಾರ್ಯಾಗಾರದಲ್ಲಿ ಪಾಲ್ಗೊಂಡರು.

PREV

Recommended Stories

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 3 ಜಿಲ್ಲೆಗಳಿಗೆ 3 ದಿನ ಯೆಲ್ಲೋ, 2 ದಿನ ಆರೆಂಜ್‌ ಅಲರ್ಟ್‌
ಅಲೆಮಾರಿಗಳಿಗೆ 6 ನಿರ್ಣಯ ಜಾರಿ ಮಾಡಿ ವಿಶೇಷ ಪ್ಯಾಕೇಜ್‌ಗೆ ಸಮಾಜ ಆಗ್ರಹ