ಕಳ್ಳನ ಬಂಧನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

KannadaprabhaNewsNetwork |  
Published : Aug 02, 2024, 12:52 AM IST
1ಕೆಬಿಪಿಟಿ.4.ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪೊಲೀಸರು ಕಳ್ಳನೊಬ್ಬರನ್ನು ಬಂಧಿಸಿ ಅವರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣಗಳು. | Kannada Prabha

ಸಾರಾಂಶ

ಸಿಪಿಐ ಜಿ.ಸಿ. ನಾರಾಯಣಸ್ವಾಮಿ ನೇತೃತ್ವದ ಅಪರಾಧ ಪತ್ತೆ ತಂಡವು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ತಾಲೂಕಿನ ನಿವಾಸಿ ಹೇಮಂತ್‌ಕುಮಾರ್‌ನನ್ನು ಬಂಧಿಸಿ, ೧.೧೫ ಲಕ್ಷ ರು. ಮೌಲ್ಯದ ೧೪ ಗ್ರಾಂ ಒಂದು ಜೊತೆ ಚಿನ್ನದ ಓಲೆ ಮತ್ತು ೨೧೦ ಗ್ರಾಂ ತೂಕದ ೩ ಜೊತೆ ಬೆಳ್ಳಿ ಚೈನ್‌ ವಶಪಡಿಸಿಕೊಂಡಿದ್ದಾರೆ.

ಬಂಗಾರಪೇಟೆ: ಮನೆ ಕಳ್ಳತನದಲ್ಲಿ ತೊಡಗಿದ್ದ ಆರೋಪಿಯೊಬ್ಬರನ್ನು ಮಾಲು ಸಮೇತ ಕಾಮಸಮುದ್ರಂ ಪೊಲೀಸರು ಬಂಧಿಸಿ ಆರೋಪಿಯಿಂದ ೧.೧೫ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಬಲಮಂದೆ ಗ್ರಾಮದ ಸೈಯದ್ ನವಾಜ್ ಮನೆಯ ಬಾಗಿಲನ್ನು ಒಡೆದು ಒಳನುಗ್ಗಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದರ ಬಗ್ಗೆ ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಜಿ.ಸಿ. ನಾರಾಯಣಸ್ವಾಮಿ ನೇತೃತ್ವದ ಅಪರಾಧ ಪತ್ತೆ ತಂಡವು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ತಾಲೂಕಿನ ನಿವಾಸಿ ಹೇಮಂತ್‌ಕುಮಾರ್‌ನನ್ನು ಬಂಧಿಸಿ, ೧.೧೫ ಲಕ್ಷ ರು. ಮೌಲ್ಯದ ೧೪ ಗ್ರಾಂ ಒಂದು ಜೊತೆ ಚಿನ್ನದ ಓಲೆ ಮತ್ತು ೨೧೦ ಗ್ರಾಂ ತೂಕದ ೩ ಜೊತೆ ಬೆಳ್ಳಿ ಚೈನ್‌ ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಬೇಧಿಸುವಲ್ಲಿ ಕಾಮಸಮುದ್ರಂ ಸಿಪಿಐ ಜಿ.ಸಿ. ನಾರಾಯಣಸ್ವಾಮಿ, ಪಿಎಸ್‌ಐ ಕಿರಣ್‌ಕುಮಾರ್, ಎ.ಎಸ್.ಐ ಶ್ರೀನಿವಾಸ್, ಸಿಬ್ಬಂದಿ ದೇವರಾಜ್, ಅಯ್ಯಚಾರಿ, ಹರೀಶ್, ಚಾಲಕ ಧನಂಜಯ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪ್ರಶಂಸಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ