ದೇಗುಲದ ಹುಂಡಿ ಒಡೆದು ಹಣ ದೋಚಿ ಕಳ್ಳರು ಪರಾರಿ

KannadaprabhaNewsNetwork |  
Published : Jun 23, 2025, 11:47 PM IST
23ಎಚ್ಎಸ್ಎನ್7 : ದೂರವಾಣಿ ನಗರದಲ್ಲಿರುವ ಪಂಚಮುಖಿ ಗಣಪತಿ ದೇವಾಲಯ. | Kannada Prabha

ಸಾರಾಂಶ

ದೂರವಾಣಿ ನಗರದಲ್ಲಿರುವ ಪಂಚಮುಖಿ ಗಣಪತಿ ದೇವಾಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಗರ್ಭಗುಡಿಯೊಳಗಿದ್ದ ಹುಂಡಿಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಹಣ ದೋಚಿಕೊಂಡು ಹೋಗಿದ್ದಾರೆ.

ಹಾಸನ: ನಗರದ ಸಮೀಪ ಅರಸೀಕೆರೆ ರಸ್ತೆಯ ಬಿ. ಕಾಟಿಹಳ್ಳಿ ಬಳಿ ಇರುವ ದೂರವಾಣಿ ನಗರದ ಪಂಚಮುಖಿ ಗಣಪತಿ, ಸುಬ್ರಹ್ಮಣ್ಯ ಮತ್ತು ನವಗ್ರಹ ದೇವಾಲಯದಲ್ಲಿ ತಡರಾತ್ರಿ ದೇವಸ್ಥಾನದ ಬಾಗಿಲು ಮುರಿದು ಕಾಣಿಕೆ ಹುಂಡಿ ಒಡೆದು ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಹಣವನ್ನು ಕಳವು ಮಾಡಿದ ಘಟನೆ ನಡೆದಿದೆ. ದೇವಾಲಯದ ಜವಾಬ್ದಾರಿ ಹೊತ್ತಿರುವ ಸಂಪತ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ದೂರವಾಣಿ ನಗರದಲ್ಲಿರುವ ಪಂಚಮುಖಿ ಗಣಪತಿ ದೇವಾಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಗರ್ಭಗುಡಿಯೊಳಗಿದ್ದ ಹುಂಡಿಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಹಣ ದೋಚಿಕೊಂಡು ಹೋಗಿದ್ದಾರೆ. ಕಳೆದ ವರ್ಷ ಕೂಡ ಇದೇ ದೇವಸ್ಥಾನದ ಬಾಗಿಲು ಮುರಿದು ಹುಂಡಿಯೊಳಗಿದ್ದ ಎರಡು ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣ ಮತ್ತು ಹಣ ದೋಚಿಕೊಂಡು ಹೋಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಇದುವರೆಗೂ ದರೋಡೆಕೋರರ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿಲ್ಲ ಎಂದು ದೂರಿದರು.

ಈಗ ಮೂರನೇ ಬಾರಿಗೆ ಒಂದೇ ದೇವಾಲಯದಲ್ಲಿ ಕಳ್ಳತನ ನಡೆದಿರುವುದು. ಕಳ್ಳರನ್ನು ಪತ್ತೆಹಚ್ಚಿ ದೇಗುಲದ ಒಡವೆ ಹಾಗೂ ಹಣ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ನಗರದ ಸುತ್ತಲೂ ಹಲವಾರು ಮನೆಗಳ ಕಳ್ಳತನವಾಗಿದ್ದವು. ದೂರು ದಾಖಲಾಗಿದ್ದರೂ ಸಹ ಕಳ್ಳರ ಪತ್ತೆ ಆಗಿಲ್ಲ. ಇದರಿಂದ ಜನರು ಭಯಭೀತರಾಗಿದ್ದಾರೆ. ಪೊಲೀಸ್ ಇಲಾಖೆಯು ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು. ಹಾಸನ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ