ಮಹಿಳೆ ಅಡ್ಡಗಟ್ಟಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ

KannadaprabhaNewsNetwork |  
Published : Jul 03, 2025, 11:49 PM IST
ಕಳ್ಳರು ಪರಾರಿ | Kannada Prabha

ಸಾರಾಂಶ

ನಿಂಗಮ್ಮ ಅವರ ಚೀರಾಟ ಕೇಳಿ ದೌಡಾಯಿಸಿ ಬಂದ ಸ್ಥಳೀಯರು ಆಸುಪಾಸಿನ ಭಾಗಗಳಲ್ಲಿ ಹುಡುಕಾಟ ನಡೆಸಿದರೂ ಕೂಡ ಸರಗಳ್ಳರು ಪತ್ತೆಯಾಗಲಿಲ್ಲ.

ನಾಗಮಂಗಲ: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ 3.6 ಲಕ್ಷ ರು. ಮೌಲ್ಯದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಸಿದು ಸರಗಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ಅರೆಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ. ಗ್ರಾಮದ ತಿಮ್ಮೇಗೌಡರ ಪತ್ನಿ ನಿಂಗಮ್ಮರ ಕುತ್ತಿಗೆಯಲ್ಲಿದ್ದ ತಾಳಿ ಸಹಿತ 45 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಸರಗಳ್ಳರು ಕಿತ್ತೊಯ್ದಿದ್ದಾರೆ. ಬೆಳಗ್ಗೆ ಎಂದಿನಂತೆ ಮಂಕರಿಯಲ್ಲಿ ತುಂಬಿದ್ದ ಜಾನುವಾರುಗಳ ಕಸವನ್ನು ತಲೆ ಮೇಲೆ ಹೊತ್ತಿದ್ದ ನಿಂಗಮ್ಮ ಮನೆಯಿಂದ ಅಂಚೆಭೂವನಹಳ್ಳಿ ರಸ್ತೆಯ ದನದ ಕೊಟ್ಟಿಗೆಗೆ ರಸ್ತೆಬದಿಯಲ್ಲಿ ಹೋಗುತ್ತಿದ್ದರು. ಇದೇ ವೇಳೆ ಹಿಂಬದಿಯಿಂದ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರು ದುಷ್ಕರ್ಮಿಗಳ ಪೈಕಿ ಒಬ್ಬಾತ ಸ್ಕೂಟಿಯಿಂದ ಕೆಳಗಿಳಿದು ನಿಂಗಮ್ಮ ಅವರ ಕುತ್ತಿಗೆಗೆ ಕೈಹಾಕಿ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ. ನಿಂಗಮ್ಮ ಅವರ ಚೀರಾಟ ಕೇಳಿ ದೌಡಾಯಿಸಿ ಬಂದ ಸ್ಥಳೀಯರು ಆಸುಪಾಸಿನ ಭಾಗಗಳಲ್ಲಿ ಹುಡುಕಾಟ ನಡೆಸಿದರೂ ಕೂಡ ಸರಗಳ್ಳರು ಪತ್ತೆಯಾಗಲಿಲ್ಲ. ನಂತರ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ರಾಜೇಂದ್ರ ಪರಿಶೀಲನೆ ನಡೆಸಿದರು. ನಿಂಗಮ್ಮ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಸರಗಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ