ಕನ್ನಡಪ್ರಭ ವಾರ್ತೆ ಕೊಳ್ಳೇಗಾಲಸಂವಿಧಾನ ಉಳಿವಿಗಾಗಿ ಪ್ರತಿಯೊಬ್ಬ ಮತದಾರರು ಯೋಚಿಸಿ ಮತ ನೀಡುವ ಮೂಲಕ ಸಂವಿಧಾನ ಸಂರಕ್ಷಿಸಿಕೊಳ್ಳಬೇಕಿದೆ. ಸಂವಿಧಾನ ರಕ್ಷಣೆಗೆ ಕಟಿಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿತ ಅಂತರದ ಗೆಲುವನ್ನು ಕಾಂಗ್ರೆಸ್ ಅಭ್ಯರ್ಥಿಗೆ ತಂದುಕೊಡಬೇಕು ಎಂದು ಚಲನಚಿತ್ರ ನಟ, ನಿರ್ದೇಶಕ ಎಸ್. ನಾರಾಯಣ್ ಹೇಳಿದರು.
ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲೂ ಚಾಮರಾಜನಗರ ಜಿಲ್ಲಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೆ, ಪ್ರಚಾರ ನಡೆಸಿದ್ದೆ. ಹೀಗಾಗಿ ಜಿಲ್ಲೆಯಲ್ಲಿ ಮೂವರು ಗೆಲುವು ಕಂಡಿದ್ದೆವು. ಹಾಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವೆ. ಚಾಮರಾಜನಗರ ಲೋಕಸಭೆ ಚುನಾವಣೆಗೂ ಮತ ಕೇಳಲು ನಾನು ಬಂದಿದ್ದೇನೆ, ಜಿಲ್ಲೆಯು ಕಾಂಗ್ರೆಸ್ ಭದ್ರಕೋಟೆಯಾದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು.
ಈ ಸಂದರ್ಭದಲ್ಲಿ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಓಲೆ ಮಹದೇವ, ಮುಖಂಡ ಶಿವಮಲ್ಲು, ಪ್ರಜ್ವಲ್, ಮುಡಿಗುಂಡ ಮೂರ್ತಿ ಇನ್ನಿತರರು ಇದ್ದರು.