ಹುಬ್ಬಳ್ಳಿ:
ತಾಲೂಕಿನ ಇನಾಂವೀರಾಪುರದಲ್ಲಿ ಮರ್ಯಾದಾ ಹತ್ಯೆಗೀಡಾದ ಮಾನ್ಯಾ ಪತಿ ವಿವೇಕಾನಂದ ದೊಡ್ಡಮನಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಈ ಕೃತ್ಯವನ್ನು ಸರ್ಕಾರ ತೀವ್ರವಾಗಿ ಖಂಡಿಸಿದೆ. ಇಂತಹ ಮನುವಾದದ ಮನಸ್ಸುಗಳನ್ನು ಹತ್ತಿಕ್ಕಲೇಬೇಕು. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರೆಲ್ಲ ಉತ್ತೇಜನ ಕೊಟ್ಟಿದ್ದಾರೋ ಅದರಲ್ಲಿ ಒಬ್ಬರನ್ನೂ ಬಿಡುವುದಿಲ್ಲ ಎಂದ ಅವರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವೈಫಲ್ಯದ ಕುರಿತು ಕೆಲ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು. ತನಿಖಾ ವರದಿ ಬಂದ ಬಳಿಕ ತಪ್ಪು ಎಸಗಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಇದಕ್ಕೂ ಮಿಗಿಲಾದ ಘಟನೆ ನಡೆದಿರುವುದರಿಂದ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.ಉಗ್ರವಾದ ಕೊಲೆ:
ಮುಖ್ಯಮಂತ್ರಿ ಹಾಗೂ ಗೃಹಸಚಿವರೊಂದಿಗೆ ವಿವೇಕಾನಂದ ದೊಡ್ಡಮನಿ ಕುಟುಂಬಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ಕೋರಲಾಗುವುದು. ಈ ತರಹದ ಘಟನೆಗಳು ಮರುಕಳಿಸದಂತೆ ಮುಂದೇನು ಮಾಡಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.
ಇನಾಂವೀರಾಪುರದಲ್ಲಿ ಇರುವ ವಿವೇಕಾನಂದ ದೊಡ್ಡಮನಿ ನಿವಾಸಕ್ಕೆ ಭೇಟಿ ನೀಡಿದ ಸಚಿವರು ಅರ್ಧಗಂಟೆಗೂ ಹೆಚ್ಚುಕಾಲ ಕುಟುಂಬದವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಈ ವೇಳೆ ಕುಟುಂಬದವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು, ಸೂಕ್ತ ರಕ್ಷಣೆಗೆ ಮನವಿ ಮಾಡಿದರು. ಇಡೀ ಸರ್ಕಾರವೇ ನಿಮ್ಮೊಂದಿಗಿದ್ದು, ಕುಟುಂಬಕ್ಕೆ ಬೇಕಾದ ರಕ್ಷಣೆ ನೀಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಹಲ್ಲೆಗೊಳಗಾದ 8 ಜನರಿಗೆ ತಲಾ ₹2 ಲಕ್ಷದಂತೆ ಒಟ್ಟು 16 ಲಕ್ಷ ಮೊತ್ತದ ಚೆಕ್ಗಳನ್ನು ಸಚಿವರು ಕುಟುಂಬದವರಿಗೆ ಹಸ್ತಾಂತರಿಸಿದರು.
ಬಳಿಕ ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ತಾಯಿ ರೇಣವ್ವ ದೊಡ್ಡಮನಿ ಅವರ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು.